Get Updates
Get notified of breaking news, exclusive insights, and must-see stories!

ಗೌರಿ ಲಂಕೇಶ್ ವಿಚಾರಧಾರೆಗಳನ್ನು ಸಾರುವ ಮೆಮೊರಿಯಲ್ ಟ್ರಸ್ಟ್ ಪ್ರಾರಂಭ

ಬೆಂಗಳೂರು, ಡಿಸೆಂಬರ್ 04 : ಗೌರಿ ಲಂಕೇಶ್ ಅವರ ಧ್ಯೇಯ ಸಾರಲು ಗೌರಿ ಮೆಮೊರಿಯಲ್ ಟ್ರಸ್ಟ್ ಪ್ರಾರಂಭಿಸಲಾಗಿದ್ದು ಉದ್ಘಾಟನೆ ಸಮಾರಂಭ ಇಂದು (ಡಿ.4)ರಂದು ಸೆಂಟ್ರಲ್ ಕಾಲೇಜಿನ ಸೆನೆಟ್ ಹಾಲ್ ನಲ್ಲಿ ನಡೆಯಲಿದೆ.

ಸೋಮವಾರ ಸಂಜೆ5.00 ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಸತ್ಯ ನುಡಿಯುವ ಅನಿವಾರ್ಯತೆ ವಿಚಾರಗೋಷ್ಠಿಯನ್ನು ಕೂಡ ಆಯೋಜಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ತೀಸ್ತಾ ಸೆಟಲ್ ವಾಡ್, ದೇವನೂರು ಮಹಾದೇವ, ಡಾ. ವಿಜಯಮ್ಮ, ಗಣೇಶ್ ಎನ್. ದೇವಿ, ಕೆ. ನೀಲಾ, ಪ್ರಕಾಶ್ ರೈ, ಸಿದ್ಧಾರ್ಥ ವರದರಾಜನ್ ಭಾಗವಹಿಸಲಿದ್ದಾರೆ.

Gauri Memorial trust will promote her ideology

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರು ನಂಬಿದ್ದ ವಿಚಾರಧಾರೆಗಳನ್ನು ಸಮಾಜಕ್ಕೆ ತಿಳಿಸುವ ಉದ್ದೇಶದಿಂದ 'ಗೌರಿ ಸ್ಮಾರಕ ಟ್ರಸ್ಟ್' ರಚನೆ ಮಾಡಲಾಗಿದೆ. ಗೌರಿ ನಂಬಿದ್ದ ಮೌಲ್ಯಗಳನ್ನು ಎತ್ತಿಹಿಡಿಯುವ ಪತ್ರಿಕೆಯನ್ನು ಹೊರತರಲು ನೆರವಾಗುವುದು ಸೇರಿ ಮುಖ್ಯ ಉದ್ದೇಶಗಳನ್ನು ಇಟ್ಟುಕೊಂಡು ಈ ಟ್ರಸ್ಟ್ ಆರಂಭಿಸಿದೆ.

ಪತ್ರಕರ್ತ ಸಬ್ದುಲ್ ಸಲಾಂ ಪುತ್ತಿಗೆ, ಕೆ.ಎಲ್ ಅಶೋಕ್, ಎನ್. ಮುನಿಸ್ವಾಮಿ, ಹಾರ್ದಿಕ್ ದೇಸಾಯಿ, ಡಾ. ರಹಮತ್ ತರೀಕೆರೆ , ಕೆ. ನೀಲಾ, ಚುಕ್ಕಿ ನಂಜುಂಡಸ್ವಾಮಿ ಸೇರಿ ಟ್ರಸ್ಟ್ ನಿರ್ಮಿಸಲಾಗಿದೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಗೌರಿ ಸ್ಮಾರಕ ಉಪನ್ಯಾಸ ನೀಡುವುದು, ಗೌರಿ ಅವರ ಆದರ್ಶಗಳನ್ನು ಅನುಕರಿಸುತ್ತಿರುವ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪತ್ರಕರ್ತರು, ಕಾರ್ಯಕರ್ತರಿಗೆ ಗೌರಿ ಲಂಕೇಶ್ ಪ್ರಶಸ್ತಿ ನೀಡುವುದು ಟ್ರಸ್ಟ್ ನ ಉದ್ದೇಶವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+