Bengaluru: ನರ್ಸರಿ ತರಗತಿಗಳಿಗೆ ಪ್ರವೇಶ ಆರಂಭ: ಭಾರತೀಯ ವಿದ್ಯಾಭವನ ಸಹಯೋಗದಲ್ಲಿ ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಪಬ್ಲಿಕ್ ಶಾಲೆಗಳ ಪ್ರವೇಶದ ಬಗ್ಗೆ ಅಪ್ಡೇಟ್ ಸಿಕ್ಕಿದೆ. ಭಾರತೀಯ ವಿದ್ಯಾಭವನ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಪಬ್ಲಿಕ್ ಶಾಲೆಯ ಜಂಟಿ ಸಹಯೋಗದಲ್ಲಿ ನಡೆಯುತ್ತಿರುವ ನರ್ಸರಿ ತರಗತಿಗೆ (ಸಿ.ಬಿ.ಎಸ್.ಸಿ ಪಠ್ಯಕ್ರಮ) 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಲ್ಲೇಶ್ವರಂನ ಕೋದಂಡರಾಮಪುರದಲ್ಲಿರುವ ಭಾರತೀಯ ವಿದ್ಯಾಭವನ ಬೃಹತ್ ಬೆಂಗಳೂ ಪಶ್ಚಿಮ ನಗರ ಪಾಲಿಕೆ ಪ್ರೌಢಶಾಲೆಯಲ್ಲಿ ಫ್ರೀ ನರ್ಸರಿ ತರಗತಿಗೆ ಇಂದಿನಿಂದ 27 ಮಾರ್ಚ್ 2026 ರವರೆಗೆ ಬೆಳಗ್ಗೆ 11.00 ರಿಂದ ಮಧ್ಯಾಹ್ನ 03.00 ಅರ್ಜಿಗಳನ್ನು ವಿತರಿಸಲಾಗುತ್ತಿದೆ. ಮಕ್ಕಳನ್ನು ಸೇರಿಸಬಯಸುವ ಪೋಷಕರು ಈ ಮಾಹಿತಿ ಗಮನಿಸಿ ಕೂಡಲೇ ಅರ್ಜಿ ಪಡೆಯುವಂತೆ ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರ್ಜಿ ಸಲ್ಲಿಸುವವರಿಗೆ ವಿಶೇಷ ಸೂಚನೆಗಳು
* ಮಕ್ಕಳಿಗೆ ಇಲ್ಲಿ ಪ್ರವೇಶ ಕೊಡುವ ಮುನ್ನ ಪೋಷಕರು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು 2026 ಏಪ್ರಿಲ್ 4 ರಂದು 3 ಗಂಟೆಯ ಒಳಗಾಗಿ ಕೋದಂಡರಾಮಪುರದ ಪಾಲಿಕೆ ಪ್ರೌಢಶಾಲೆಯಲ್ಲಿ ಸಲ್ಲಿಸಬೇಕು.
* 2026 ಏಪ್ರಿಲ್ 20 ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ.
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು
1 . ಮಗುವಿನ ಪಾಸ್ ಪೋರ್ಟ್ ಅಳತೆ ಭಾವಚಿತ್ರಗು - 5
2. ಮಗುವಿನ ಜೊತೆಗಿರುವ ತಂದೆ ತಾಯಿಯ 2ಬಿ ಅಳತೆ ಭಾವಚಿತ್ರ (ಕುಟುಂಬದ ಭಾವ ಚಿತ್ರ)
3. ಮಗುವಿನ ಜನನ ಪ್ರಮಾಣ ಪತ್ರ
4. ಆದಾಯ ಪ್ರಮಾಣ ಪತ್ರ
5. ಜಾತಿ ಪ್ರಮಾಣ ಪತ್ರ
6. ತಂದೆ / ತಾಯಿಯ ಆಧಾರ್ ಕಾರ್ಡ್ ಜೆರಾಕ್ಸ್
7. ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್
8. ತಂದೆ / ತಾಯಿಯ ಖಾಯಂ ವಿಳಾಸವಿರುವ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ
9. ಮಗುವಿನ ವೈಧ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು (ಎತ್ತರ, ತೂಕ, ರಕ್ತದ ಗುಂಪು)
10. ಮಗುವಿನ ವರ್ಷ ದಿನಾಂಕ 31-03-2026 ಕ್ಕೆ 03 ವರ್ಷ ತುಂಬಿರಬೇಕು ಹಾಗೂ 01-04-2026 ರಂತೆ 04 ವರ್ಷದ ಒಳಗಿನ ವಿದ್ಯಾರ್ಥಿಗಳು ನರ್ಸರಿ ತರಗತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಪಾಲಿಕೆಯು ಗುರುವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
-
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru property: ಬೆಂಗಳೂರಿನ 51 ಆಸ್ತಿಗಳ ಸ್ವಾಧೀನಕ್ಕೆ ಮುಂದಾದ ಉತ್ತರ ನಗರ ಪಾಲಿಕೆ -
Bengaluru Waste: ಬೆಂಗಳೂರಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಹೊಸ ಸುಧಾರಣೆ -
Property Sale: ಬೆಂಗಳೂರು ದಕ್ಷಿಣ ನಗರ ಪಾಲಿಕೆ: 42 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳ ಹರಾಜು -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications