ಬೆಂಗಳೂರಲ್ಲಿ ಜಿಬಿಎಯಿಂದ ಮಾಂಸ ಮಾರಾಟ ನಿಷೇಧ: ಸೋಷಿಯಲ್ ಮೀಡಿಯಾ ಟ್ರೋಲ್
ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮಂಗಳವಾರ (ನವೆಂಬರ್ 25)ರಂದು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ಮಾಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದೊಂದು ಶುದ್ಧ ಜೋಕ್ ಎಂದು ಕೆಲವರು ಹೇಳಿದ್ದಾರೆ.
ಹೌದು ಬೆಂಗಳೂರಿನಲ್ಲಿ ಕೆಲವೊಂದು ನಿರ್ದಿಷ್ಟ ದಿನದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರವು (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಮಾಂಸ ಮಾರಾಟ ನಿಷೇಧ ಮಾಡುವುದು ಇದೆ. ಆದರೆ ಮಂಗಳವಾರ ಮಾಂಸ ಮಾರಾಟ ನಿಷೇಧ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ದಿನಾಂಕ 25-11-2025ರ ಮಂಗಳವಾರ "ಸಾಧು ವಾಸವಾನಿ ಜಯಂತಿ" ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.

ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಎ.ಆರ್ ಜೋಶಿ ಎನ್ನುವವರು, ಸಾಧು ವಾಸ್ವಾನಿ ಯಾರು? ಅವರು ಪಾಕಿಸ್ತಾನದ ಹೈದರಾಬಾದ್ - ಸಿಂಧ್ ಪ್ರದೇಶದ ಸಿಂಧಿ ಆಧ್ಯಾತ್ಮಿಕ ಶಿಕ್ಷಕರಾಗಿದ್ದರು. ಅವರ ಜನ್ಮದಿನ ನವೆಂಬರ್ 25 ಅನ್ನು ಉತ್ತರ ಪ್ರದೇಶ ರಾಜ್ಯ, ಬೆಂಗಳೂರು, ಅಹಮದಾಬಾದ್, ಭೋಪಾಲ್, ಪುಣೆ, ಝಾನ್ಸಿ, ಕೊಲ್ಲಾಪುರ ಮತ್ತು ಇನ್ನೂ ಕೆಲವು ಪಟ್ಟಣಗಳು ಅಂತರರಾಷ್ಟ್ರೀಯ ಮಾಂಸರಹಿತ ದಿನವೆಂದು ಆಚರಿಸುತ್ತವೆ.
ಇತರ ರಾಜ್ಯಗಳು ಮತ್ತು ನಗರಗಳು ಅಂತಹ ಮಾಂಸರಹಿತ ದಿನವನ್ನು ಆಚರಿಸುವುದಿಲ್ಲ. ಸಾಧು ವಾಸ್ವಾನಿ ಮಿಷನ್ ಮತ್ತು ಮಿಷನ್ ನಡೆಸುವ ಶಾಲೆಯನ್ನು ಹೊರತುಪಡಿಸಿ ಅವರಿಗೆ ಬೆಂಗಳೂರು ಅಥವಾ ಕರ್ನಾಟಕದ ಜೊತೆಗೆ ಯಾವುದೇ ಸಾಂಸ್ಕೃತಿಕ ಸಂಬಂಧವಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ. ಈ ವಿಷಯ ಗೊತ್ತಿರಲಿ ಅಷ್ಟೆ 💛❤️ ಎಂದು ಹೇಳಿದ್ದಾರೆ.
What is Saadu Vaasani now? Is this a joke? https://t.co/lgH72bzhuo
— ಸಜಿತ್ (@SajithGowda) November 23, 2025
ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್: ಇನ್ನು ಸೋಷಿಯಲ್ ಮೀಡಿಯಾದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಆಡಳಿತದ ಈ ಆದೇಶ ಹಾಗೂ ಪೋಸ್ಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಎಸ್ ಶ್ಯಾಮ್ ಪ್ರಸಾದ್ ಎನ್ನುವವರು, ಜೋಕರ್ಸ್ ಆಫ್ ಕರ್ನಾಟಕ ಕಾಂಗ್ರೆಸ್ ಎಂದು ವ್ಯಂಗ್ಯವಾಡಿದ್ದಾರೆ. ಇನ್ನು ಧನಂಜಯ್ ಎನ್ನುವವರು, ಈ ವಿಷಯವನ್ನು ತಮ್ಮ ಸೋಷಿಯಲ್ ಮೀಡಿಯಾ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ಏನ್ ಬಂದಿರೋದು ಇವ್ರಿಗೆಲ್ಲ. ಥತ್ 😡 ಎಂದು ಆಕ್ರೋಶ ಹೊರ ಹಾಕಿದ್ದಾರೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications