Gandhi Bazar: ಗಾಂಧಿಬಜಾರ್ ಪಾದಾಚಾರಿಗಳಿಗೆ ಗುಡ್ನ್ಯೂಸ್, ಒತ್ತುವರಿದಾರರಿಗೆ GBA ಶಾಕ್
ಬೆಂಗಳೂರು, ಡಿಸೆಂಬರ್ 03: ಬೆಂಗಳೂರು ನಗರದಲ್ಲಿ ಹಿಂದಿನಿಂದಲೂ ಒತ್ತುವರಿದಾರರಿಂದ ಸಮಸ್ಯೆ ಆಗುತ್ತಿದೆ. ಮಳೆ ಬಂದಾಗಲೇ ಒತ್ತುವರಿಯಿಂದ ಎಷ್ಟೆಲ್ಲ ಸಮಸ್ಯೆ ಆಗುತ್ತಿದೆ ಎಂಬುದು ಗೊತ್ತಾಗುತ್ತಿದೆ. ರಾಜಕಾಲುವೆ, ರಸ್ತೆ, ಕೆರೆ ಜೊತೆಗೆ ಪಾದಾಚಾರಿ ಒತ್ತುವರಿ ತೆರವಿನ ಮುಂದುವರಿದ ಕಾರ್ಯವು ಇಂದು ಬುಧವಾರ ನಗರದ ಗಾಂಧಿಬಜಾರ್ನಲ್ಲಿ ನಡೆಯಿತು. ಈ ಮೂಲಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಪಾದಾಚಾರಿಗಳಿಗೆ ಗುಡ್ನ್ಯೂಸ್, ಒತ್ತುವರಿದಾರರಿಗೆ ಶಾಕ್ ನೀಡಿದೆ.
ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೊಳನ್ ಅವರು ಇಂದು (ಡಿಸೆಂಬರ್ 03) ಚಿಕ್ಕಪೇಟೆ ವಿಭಾಗದ ಗಾಂಧಿಬಜಾರ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ವಿಭಾಗದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಆಯುಕ್ತರು ಸೂಚನೆ ನೀಡಿರುವ ಹಿನ್ನೆಲೆ ಚಿಕ್ಕಪೇಟೆ ಕಾರ್ಯಪಾಲಕ ಅಭಿಯಂತರರಾದ ಪ್ರದೀಪ್ ಕುಮಾರ್ ನೇತೃತ್ವದ ತಂಡವು ಒತ್ತುವರಿಯನ್ನು ತೆರವುಗೊಳಿಸಿತು.

ವ್ಯಾಪಾರಕ್ಕೆ 120 ಮಳಿಗೆಗಳ ಸ್ಥಳ ಗುರುತು
ಗಾಂಧಿ ಬಜಾರ್ ನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸುಮಾರು 120 ಮಳಿಗೆಗಳಿಗೆ ಸ್ಥಳ ಗುರುತಿಸಿ ಆ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಸೂಚಿಸಲಾಯಿತು. ಆದರೆ ನಿಗದಿಪಡಿಸಿರುವ ಸ್ಥಳ ಬಿಟ್ಟು ಹೆಚ್ಚುವರಿ ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಹೀಗಾಗಿ ಅವರಿಗೆ ಒತ್ತುವರಿ ತೆರವುಗೊಳಿಸಲು ಸಾಕಷ್ಟು ಬಾರಿ ತಿಳಿಸಲಾಯಿತು. ಆದರೂ ಅವರು ತಲೆಕೆಡಿಸಿಕೊಳ್ಳದ ಹಿನ್ನೆಲೆ ಪಾಲಿಕೆ ಸಿಬ್ಬಂದಿಯಿಂದ ಪಾದಚಾರಿ ಮಾರ್ಗ ತೆರವು ಮಾಡಲಾಯಿತು.
ತೆರವು ಕಾರ್ಯಾಚರಣೆಯ ವೇಳೆ 2 ಜೆಸಿಬಿ, 7ಟ್ರ್ಯಾಕ್ಟರ್ ಗಳು, 3ಲಾರಿಗಳು ಹಾಗೂ 40 ಸಿಬ್ಬಂದಿಗಳನ್ನು ಬಳಸಿಕೊಂಡು, ನಿಗದಿಪಡಿಸಿರುವ ಜಾಗಕ್ಕಿಂತ ಹೆಚ್ಚುವರಿ ಜಾಗ ಒತ್ತುವರಿ ಮಾಡಿಕೊಂಡಿದ್ದ ಜಾಗ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ 5 ಶಾಪ್ ಗಳನ್ನು ತೆರವುಗೊಳಿಸಲಾಗಿದೆ.
ಇನ್ನು ಮುಂದೆ ಬೀದಿ ಬದಿ ವ್ಯಾಪಾರಿಗಳಿಗೆ ನಿಗದಿಪಡಿಸಿರುವ ಜಾಗದಲ್ಲಿಯೇ ವ್ಯಾಪಾರ ಮಾಡಬೇಕು. ಅದನ್ನು ಹೊರತುಪಡಿಸಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಬೆಳಬೆಳಗ್ಗೆಯೇ ಪಾಲಿಕೆ ವತಿಯಿಂದ ಜಿಸಿಬಿಗಳು ಗಾಂಧಿಬಜಾರ್ ನಲ್ಲಿ ಘರ್ಜಿಸಿವೆ. ತೆರವುಗೊಳಿಸಿದ ತ್ಯಾಜ್ಯ ವಸ್ತುಗಳನ್ನು ಟ್ರ್ಯಾಕ್ಟರ್ನಲ್ಲಿ ಹಾಕಿ ಬೇರೆಡೆ ವಿಲೇವಾರಿ ಮಾಡಲಾಯಿತು. ಕೆಲವೆಡೆ ಅಂಗಡಿ ಮುಂಗಟ್ಟು ಮಾಲೀಕರು, ಸಿಬ್ಬಂದಿ ಮಧ್ಯ ವಾಗ್ವಾದ ನಡೆಯಿತು. ಬಳಿಕ ಅಧಿಕಾರಿಗಳ ಸೂಚನೆ ಮೇರೆಗೆ ತೆರವುಗೊಳಿಸಲಾಯಿತು. ಇನ್ನು ಮುಂದೆ ಮತ್ತೆ ಈ ರೀತಿ ಒತ್ತುವರಿ ಆಗದಂತೆ ಎಚ್ಚರಿಕೆ ನೀಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications