ಬೆಂಗಳೂರಲ್ಲಿ ₹ 700,000 ಸಂಗ್ರಹಿಸಿದ ಜಿಬಿಎ: ಮೊದಲ ದಿನವೇ ಭರ್ಜರಿ ಕಾರ್ಯಾಚರಣೆ!
ಬೃಹತ್ ಬೆಂಗಳೂರು ಬದಲಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಬುಧವಾರದಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಮೊದಲ ದಿನವೇ ಹಲವು ಮಹತ್ವದ ಕೆಲಸಗಳು ನಡೆದಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು ತಿಳಿಸಿದ್ದಾರೆ.
ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಕೂಡ, ಅಕ್ರಮವಾಗಿ ಏಕ ಬಳಕೆ ಪ್ಲಾಸ್ಟಿಕ್ ಕವರ್ಗಳನ್ನು ಸಂಗ್ರಹಿಸಿಕೊಂಡು ಮಾಡಿಕೊಂಡು ಮಾರಾಟ ಮಾಡುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಅಧಿಕಾರಿಗಳು ಉತ್ಪಾದಕರು ಹಾಗೂ ಸಂಗ್ರಹಕಾರರ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಪ್ಲಾಸ್ಟಿಕ್ ವಶಕ್ಕೆ ಪಡೆದು, ಕೆ.ಆರ್.ಮಾರುಕಟ್ಟೆಯಲ್ಲಿ ಒಂದು ಗೋಡೌನ್ ಸೀಜ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಪರಿಶೀಲನೆಯ ವೇಳೆ ನಿಯಮಾನುಸಾರ ದಂಡ ವಿಧಿಸಿ ಸಂಗ್ರಹಿಸಲಾದ ದಂಡದ ವಿವರ
ಕೆ.ಆರ್. ಮಾರುಕಟ್ಟೆ: ಕೆ.ಆರ್ ಮಾರುಕಟ್ಟೆ ವ್ಯಾಪ್ತಿಯ ಎ ಬ್ಲಾಕ್ ನಲ್ಲಿ 3 ಪ್ರಕರಣಗಳಿಂದ 29 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 30,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ. ಜೊತೆಗೆ ವೆಂಡರ್ಸ್ ಸಿ ಬ್ಲಾಕ್ ನಲ್ಲಿ 22 ಪ್ರಕರಣಗಳಿಂದ 6310 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 3500/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಅವೆನ್ಯೂ ರಸ್ತೆ: ಅವೆನ್ಯೂ ರಸ್ತೆ ವ್ಯಾಪ್ತಿಯ ಬಿ ಬ್ಲಾಕ್ ನಲ್ಲಿ 17 ಪ್ರಕರಣಗಳಿಂದ 300 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 40,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಕಲಾಸಿಪಾಳ್ಯ: ಕಲಾಸಿಪಾಳ್ಯದಲ್ಲಿ 24 ಪ್ರಕರಣಗಳಿಂದ 150 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 45,900/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಯಶವಂತಪುರ ಮಾರುಕಟ್ಟೆ: ಯಶವಂತಪುರ ಮಾರುಕಟ್ಟೆಯಲ್ಲಿ 27 ಪ್ರಕರಣಗಳಿಂದ 110 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 61,800/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಪೀಣ್ಯ ಕೈಗಾರಿಕಾ ಪ್ರದೇಶ: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ 27 ಪ್ರಕರಣಗಳಿಂದ 450 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 1,00,500/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ದಾಸರಹಳ್ಳಿ (ಮ್ಯಾನುಪಾಕ್ಚರಿಂಗ್) ಪ್ರದೇಶ: ದಾಸರಹಳ್ಳಿ (ಮ್ಯಾನುಪಾಕ್ಚರಿಂಗ್) ಪ್ರದೇಶದಲ್ಲಿ 01 ಪ್ರಕರಣಗಳಿಂದ 218 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 50,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಚಾಮರಾಜಪೇಟೆ ಹಾಗೂ ಇತರೆ ಪ್ರದೇಶ: ಚಾಮರಾಜಪೇಟೆ-ಮಕ್ಕಳಕೂಟ, ಅಕ್ಕಿಪೇಟೆ, ಬಳೆಪೇಟೆ ಪ್ರದೇಶದಲ್ಲಿ 37 ಪ್ರಕರಣಗಳಿಂದ 2,000 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 4,07,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಒಟ್ಟಾರೆಯಾಗಿ 158 ಪ್ರಕರಣಗಳಿಂದ 9,567 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದು ರೂ. 7,38,700 ಗಳ ದಂಡದ ಮೊತ್ತವನ್ನು ವಸೂಲಿ ಮಾಡಿ, ಸಾರ್ವಜನಿಕರು ಹಾಗೂ ಮಾರಾಟಗಾರರು ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಹಾಗೂ ಬಟ್ಟೆಯ ಚೀಲಗಳನ್ನು ಬಳಸಿ ಸಾರ್ವಜನಿಕ ಆರೋಗ್ಯ ಹಾಗೂ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸುವಂತೆ ಮನವಿ ಮಾಡಿದರು.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications