Get Updates
Get notified of breaking news, exclusive insights, and must-see stories!

ಬೆಂಗಳೂರಲ್ಲಿ ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸಲು ಜಾಗ ಗುರುತಿಸುವುದಕ್ಕೆ ಮುಂದಾದ ಜಿಬಿಎ

ಬೆಂಗಳೂರು: ಬೆಂಗಳೂರಿನ ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಮುಂದಾಗಿವೆ.

ಬೆಂಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆಯನ್ನು ನಿರ್ಮಿಸಿ ಜಾರಿಗೆ ತರಲು ಸೂಕ್ತ ಜಾಗಗಳನ್ನು ಗುರುತಿಸುವಂತೆ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ವಿಧಾನಸಭಾ ವ್ಯಾಪ್ತಿಯ ವಾರ್ಡ್‌ಗಳಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ವೇಳೆ ಮಾತನಾಡಿದ್ದಾರೆ. ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆಯಿಂದ ಸಂಚಾರ ದಟ್ಟಣೆ ನಿವಾರಿಸುವುದರ ಜೊತೆಗೆ ನಗರ ಪಾಲಿಕೆಗೆ ಆದಾಯದ ಮೂಲವಾಗಲಿದೆ ಎಂದು ಹೇಳಿದ್ದಾರೆ.

GBA Identify Suitable Land Across Bengaluru Implement Organised Pay-and-Parking System Ease Traffic Chaos

ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ತೆರವಿಗೆ ಸೂಚನೆ: ಬೆಂಗಳೂರಿನ ಈ ಭಾಗದ ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ತಕ್ಷಣ ತೆರವುಗೊಳಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಅಳವಡಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಸಾರ್ವಜನಿಕರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವುದಕ್ಕೆ ಆದ್ಯತೆ ನೀಡುವಂತೆ ಹಾಗೂ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇ - ಖಾತಾ ಪ್ರಕ್ರಿಯೆ ಸರಳೀಕರಣ ಮತ್ತು ತ್ವರಿತ ವಿತರಣೆ: ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿ ನಾಗರಿಕರಿಗೆ ಯಾವುದೇ ವಿಳಂಬವಿಲ್ಲದೆ ಇ-ಖಾತಾ ವಿತರಿಸುವಂತೆ ಕಂದಾಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಖಾಲಿ ಜಾಗಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ ವಸೂಲಿ ಮಾಡಬೇಕೆಂದು ಹಾಗೂ ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ನಿರ್ಧರಿಸಲಾದ ಪ್ರಮುಖ ಕ್ರಮಗಳು

1. ಸೂಕ್ತ ನಿಯಮಾನುಸಾರ ಟ್ರೇಡ್ ಲೈಸನ್ಸ್ ನೀಡುವಿಕೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸೂಚಿಸಿದರು.

2. ರಸ್ತೆ ಸುರಕ್ಷತೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ.

3. ಉದ್ಯಾನವನಗಳಲ್ಲಿ ಅಳವಡಿಸಿರುವ ಪರಿಕರಗಳ ದುರಸ್ತಿ ಕೈಗೊಳ್ಳಲು ಹಾಗೂ ಒಣಗಿರುವ ಗಿಡಗಳನ್ನು ಗುರುತಿಸಿ ತೆರವು ಮಾಡಲು ನಿರ್ದೇಶನ.

4. ರಸ್ತೆ ಬದಿಗಳಲ್ಲಿರುವ ಅಪಾಯಕರ ಮರ / ಕೊಂಬೆಗಳನ್ನು ಗುರುತಿಸಿ ಅಗತ್ಯವಿದ್ದಲ್ಲಿ ಕತ್ತರಿಸಿ, ನಂತರ ಸ್ಥಳವನ್ನು ಸಮರ್ಪಕವಾಗಿ ಸ್ವಚ್ಛಗೊಳಿಸಲು ಸೂಚನೆ.

5. ಮಳೆ ಮುಂಜಾಗ್ರತಾ ದೃಷ್ಟಿಯಿಂದ ರಾಜಕಾಲುವೆ ಸ್ವಚ್ಛತಾ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲು ಸೂಚಿಸಿದ್ದಾರೆ.

6. ರಸ್ತೆಗಳಲ್ಲಿ ಅಗತ್ಯವಿರುವ ವಿದ್ಯುತ್ ದೀಪಗಳ ವ್ಯವಸ್ಥೆ ಮತ್ತು ಸಮರ್ಪಕ ನಿರ್ವಹಣೆಗೆ ಕ್ರಮ ತೆಗೆದುಕೊಳ್ಳಲು ಸೂಚನೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+