Property Tax: ಆಸ್ತಿ ಮಾಲೀಕರಿಗೆ GBA ಶಾಕ್: ತೆರಿಗೆ ವಸೂಲಾತಿಗೆ ಪಾಲಿಕೆ ಮಾಸ್ಟರ್ ಪ್ಲಾನ್
ಬೆಂಗಳೂರು, ನವೆಂಬರ್ 05: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತನ್ನ ವ್ಯಾಪ್ತಿ ಆಸ್ತಿದಾರರಿಗೆ ಡಿಜಿಟಲ್ ಖಾತಾ (ಇ-ಖಾತಾ), ಬಿ-ಖಾತಾ, ಎ-ಖಾತಾ ವಿತರಣೆ, ಸ್ವಚ್ಚತಾ ಅಭಿಯಾನ ಸೇರಿದಂತೆ ಹಲವು ಕ್ರಮ ಕೈಗೊಂಡಿದೆ. ಇದೀಗ ಆಸ್ತಿ ಮಾಲೀಕರಿಂದ ತೆರಿಗೆ ಸಂಗ್ರಹಿಸಲು ಮಹತ್ವ ಪ್ಲಾನ್ ಮಾಡಿಕೊಂಡಿದೆ. ಈ ಬಗ್ಗೆ ಖುದ್ದು ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ನವೆಂಬರ್ 2025 ರಲ್ಲಿ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಂದ ಆಸ್ತಿ ತೆರಿಗೆ ಸಂಗ್ರಹಣೆ ಹಾಗೂ ಕಡಿಮೆ ವಿಸ್ತೀರ್ಣ ಘೋಷಣೆ ನೀಡಿರುವ ಆಸ್ತಿಗಳನ್ನು ಗುರುತಿಸಿ ನೋಟಿಸ್ ಜಾರಿ ಮಾಡುವ ಮೂಲಕ ಬಾಕಿ ಮೊತ್ತವನ್ನು ವಸೂಲಾತಿ ಮಾಡಲು 'ಟ್ಯಾಕ್ಸ್ ಡ್ರೈವ್' (ತೆರಿಗೆ ಅಭಿಯಾನ) ಆಯೋಜಿಸಲಾಗಿದೆ ಎಂದು ಬುಧವಾರ ತಿಳಿಸಿದರು.

ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 4,57,951 ಆಸ್ತಿಗಳಿದ್ದು, ಅದರಲ್ಲಿ ವಸತಿ ಆಸ್ತಿಗಳು 3,36,989, ವಸತಿಯೇತರ ಆಸ್ತಿಗಳು 15,949, ವಸತಿ ಮತ್ತು ವಸತಿಯೇತರ ಆಸ್ತಿಗಳು 23,214 ಹಾಗೂ 81,799 ಖಾಲಿ ನಿವೇಶನಗಳು ಇವೆ ಎಂಧು ಅವರು ಲೆಕ್ಕ ಕೊಟ್ಟಿದ್ದಾರೆ.
694 ಕೋಟಿ ರೂ. ತೆರಿಗೆ ಬಾಕಿ
ಇವುಗಳೆಲ್ಲ ತೆರಿಗೆ ವ್ಯಾಪ್ತಿಗೆ ಒಳಪಟ್ಟಿದ್ದು, ಈ ಹಣಕಾಸು ಪಡೆದಿದೆ ಒಟ್ಟು 1,242 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಈವರೆಗೆ ರೂ. 548 ಕೋಟಿ ತೆರಿಗೆ ಸಂಗ್ರಹವಾಗಿದ್ದು, ಇನ್ನೂ ರೂ. 694 ಕೋಟಿ ಬಾಕಿ ಉಳಿದಿದೆ. ಹೀಗಾಗಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ನೋಟಿಸ್ ಜಾರಿ ಮಾಡುವ ಮೂಲಕ ಬಾಕಿ ಮೊತ್ತ ವಸೂಲಾತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಆಸ್ತಿಗಳ ತೆರಿಗೆ ವ್ಯಾಪ್ತಿಗೆ ತರಲು ವಿಶೇಷ ವಸೂಲಾತಿ ತಂಡ
ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಜರುಗಿಸಲಾಗುತ್ತಿದೆ. ಇತರೆ ವಿಭಾಗದಿಂದ ಎಲ್ಲಾ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ವಸೂಲಾತಿ ತಂಡಗಳು ರಚನೆಗೊಂಡಿದ್ದು, ಪ್ರತಿಯೊಂದು ಪ್ರದೇಶ ಮಟ್ಟದಲ್ಲಿ ವಸೂಲಾತಿ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಒಟ್ಟು 1,697 ಆಸ್ತಿಗಳಿಗೆ ಪರಿಷ್ಕರಣೆ ಅಗತ್ಯ ಇದೆ. 78,565 ಆಸ್ತಿಗಳು ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಸಂಗ್ರಹಣಾ ಕಾರ್ಯ ಪ್ರಗತಿಯಲ್ಲಿದೆ.
ಹಲವಾರು ವರ್ಷಗಳಿಂದ ತೆರಿಗೆ ಪಾವತಿಸಿದ ವಸತಿಯೇತರ ಸುಸ್ತಿದಾರರಿಗೆ ಸೂಚನೆಗಳನ್ನು ನೀಡಲಾಗಿದೆ. ಆದರೂ ಸಹ ತೆರಿಗೆ ಪಾವತಿಸಿದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಆಸ್ತಿಗಳಿಗೆ ಬೀಗಮುದ್ರೆ ಹಾಕುವ ಕ್ರಮವನ್ನು ಸೂಚಿಸಲಾಗುವುದು. ಈ 'ಟ್ಯಾಕ್ಸ್ ಡ್ರೈವ್' ಅಭಿಯಾನದ ಮೂಲಕ ತಮ್ಮ ಬಾಕಿ ತೆರಿಗೆಯನ್ನು ಪಾವತಿಸಿ, ನಗರಾಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಉತ್ತರ ನಗರ ಪಾಲಿಕೆ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications