GBA Election: ಇಂದು ಮತದಾರರ ಕರಡು ಪಟ್ಟಿ ಸಿದ್ದ; ಜನವರಿ ಅಂತ್ಯಕ್ಕೆ ಫೈನಲ್ ಲಿಸ್ಟ್! ಯಾವ ವರ್ಗಕ್ಕೆ ಎಷ್ಟು ಮೀಸಲು?
ಬೆಂಗಳೂರು: ಬಹು ದಿನಗಳಿಂದ ಕಾಯುತ್ತಿದ್ದ ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಮುಹೂರ್ತ ನಿಗದಿ ಪಡಿಸಲು ರಾಜ್ಯ ಸರ್ಕಾರವು ಮುಂದೆಜ್ಜೆ ಇಟ್ಟಿದೆ. ಈಗಾಗಲೇ ಜೂನ್ 30 ರೊಳಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ಸೂಚನೆ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ಜನವರಿ 19 ರೊಳಗೆ, ವಾರ್ಡ್ವಾರು ಮತದಾರರ ಕರಡು ಪಟ್ಟಿಯನ್ನು ಅಂತಿಮಗೊಳಿಸಿದೆ.
ಈ ಬಗ್ಗೆ ತಿಳಿಸಿರುವ ವರದಿ ಪ್ರಕಾರ, 369 ವಾರ್ಡ್ಗಳ ಪ್ರತ್ಯೇಕ ಮತದಾರರ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗಿದೆ. ಎಸ್ಇಸಿಯ ಪರಿಷ್ಕೃತ ವೇಳಾಪಟ್ಟಿಯ ಅಂದಾಜಿನಲ್ಲಿ, ಬೆಂಗಳೂರು ನಗರದ ಐದು ಪಾಲಿಕೆಗಳ ಚುನಾವಣೆಗೆ ಅರ್ಹತೆ ಪಡೆದ ಮತದಾರರ ಪರಿಷ್ಕೃತ ಪಟ್ಟಿ ಪ್ರಕ್ರಿಯೆಯನ್ನು ಇಂದು ಪೂರ್ಣಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಮತದಾರರ ಪಟ್ಟಿ ಪೂರ್ಣಗೊಂಡ ನಂತರ, ಜಿಬಿಎ ಮನೆ-ಮನೆ ಪರಿಶೀಲನೆ, ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸುತ್ತದೆ. ವಾರ್ಡ್ವಾರು ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯನ್ನು ಮಾರ್ಚ್ 16 ರಂದು ನಿಗದಿಪಡಿಸಲಾಗಿದೆ.

ಜಿಬಿಎ ವ್ಯಾಪ್ತಿಯ 369 ವಾರ್ಡ್ಗಳ ಮೀಸಲಾತಿ ಕರಡು ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆ ಮತ್ತೊಂದು ಹಂತ ತಲುಪಿದ್ದು, ಚುನಾವಣೆ ನಡೆಯುವ ನಿರೀಕ್ಷೆಗೆ ಹೊಸ ವೇಗ ಸಿಕ್ಕಂತಾಗಿದೆ.
ಇನ್ನೂ ಈ ಕರಡು ಮೀಸಲಾತಿ ಪಟ್ಟಿಗೆ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ಜಿಬಿಎ ನೀಡಿದೆ. ಆಸಕ್ತ ನಾಗರಿಕರು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಜನವರಿ 21ರ ಸಂಜೆ 5.30 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳ ಪರಿಶೀಲನೆಯ ಬಳಿಕ ಜನವರಿ ಕೊನೆಯ ವೇಳೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಇನ್ನೂ ಪ್ರಕಟಿಸಿದ ಕರಡು ಪಟ್ಟಿಯ ಪ್ರಕಾರ, ಒಟ್ಟು 369 ವಾರ್ಡ್ಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ. ಇದರಲ್ಲಿ ಮಹಿಳಾ ಮೀಸಲಾತಿ, ಎಸ್ಸಿ/ಎಸ್ಟಿ, ಹಿಂದುಳಿದ ವರ್ಗಗಳು ಹಾಗೂ ಸಾಮಾನ್ಯ ವರ್ಗಗಳ ಅನುಪಾತದ ಆಧಾರದಲ್ಲಿ ಈ ಮೀಸಲಾತಿ ಮಾಡಲಾಗಿದೆ. ಈ ಪ್ರಕ್ರಿಯೆ ಸಂವಿಧಾನಾತ್ಮಕ ಮಾರ್ಗಸೂಚಿಗಳು ಹಾಗೂ ಸರ್ಕಾರದ ನಿಯಮಾವಳಿಗಳನ್ನು ಅನುಸರಿಸಿ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ. ಇತ್ತ ಜಿಬಿಎ ವ್ಯಾಪ್ತಿಯಲ್ಲಿ ವಾರ್ಡ್ ವಿಂಗಡಣೆ, ಗಡಿ ಗುರುತಿಸುವಿಕೆ ಹಾಗೂ ಭೌಗೋಳಿಕ ಪುನರ್ ರಚನೆ ಕಾರ್ಯಗಳು ಪೂರ್ಣಗೊಂಡಿದ್ದವು. ಮೀಸಲಾತಿ ಪಟ್ಟಿ ಪ್ರಕಟಗೊಳ್ಳುವುದು ಮಾತ್ರ ಬಾಕಿ ಇತ್ತು. ಇದೀಗ ಆ ಹಂತವೂ ಮುಗಿದಿರುವುದರಿಂದ ಚುನಾವಣೆ ಘೋಷಣೆ ಶೀಘ್ರವೇ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
-
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
GBA Polls: ಬೆಂಗಳೂರಿನ 5 ಪಾಲಿಕೆಗಳ ಮತದಾರರ ಪಟ್ಟಿ ಪ್ರಕಟ: ಮತದಾರರ ಪಟ್ಟಿ ಪರಿಶೀಲನೆ ಮಾಡುವ ವಿಧಾನ ಇಲ್ಲಿದೆ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ಬೆಂಗಳೂರಿನ ರಸ್ತೆಗಳಿಗೆ ಹೊಸ ಮಾದರಿಯ ಡಾಂಬರೀಕರಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಪ್ಡೇಟ್ಸ್ -
Bengaluru: ಬೆಂಗಳೂರು ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ನಟ ಅನಿರುದ್ಧ್ ಜಟ್ಕರ್ ಸೇರಿ 6 ರಾಯಭಾರಿಗಳ ಆಯ್ಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ











Click it and Unblock the Notifications