GBA: ನಾಳೆ ಫೋನ್-ಇನ್ ಕಾರ್ಯಕ್ರಮ: ಕರೆ ಮಾಡಿ ನೀವು ಪಾಲ್ಗೊಳ್ಳಿ...
ಬೆಂಗಳೂರು, ನವೆಂಬರ್ 09: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ನಾಳೆ ಸೋಮವಾರ ನವೆಂಬರ್ 10ರಂದು ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಾಲಿಕೆ ವ್ಯಾಪ್ತಿಯ ನಾಗರಿಕರು ಅಹವಾಲು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಹೇಳಿದರು.
ಸೋಮವಾರ ಸಂಜೆ 6 ಗಂಟೆಯಿಂದ 7 ಗಂಟೆವರೆಗೆ ಗಂಟೆಯವರೆಗೆ ನಾಗರಿಕರು ದೂರವಾಣಿ ಮೂಲಕ ಕರೆ ಮಾಡಿ (ದೂರವಾಣಿ ಸಂಖ್ಯೆ ಲ್ಯಾಂಡ್ ಲೈನ್: 080-22975803) ಆಯುಕ್ತರಲ್ಲಿ ನೇರವಾಗಿ ಕುಂದುಕೊರತೆ, ಅಹಲವಾಲನ್ನು ಸಲ್ಲಿಸಬಹುದು. ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶ ಆಯುಕ್ತರು ಹೊಂದಿದ್ದಾರೆ.

ಫೋನ್-ಇನ್ ಕಾರ್ಯಕ್ರಮವನ್ನು ಸಾರ್ವಜನಿಕರಿಂದ ಈ ಕೆಳಕಂಡ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತಂತೆ ದೂರವಾಣಿ ಮೂಲಕ ಅಹವಾಲುಗಳನ್ನು ಸಲ್ಲಿಸಬಹುದು. ಯಾವೆಲ್ಲ ಸಮಸ್ಯೆಗಳು, ಮನವಿ ಮಾಡಿಕೊಳ್ಳಬೇಕೆಂದು ವಿಷಯಗಳ ಪಟ್ಟಿ ಕೊಡಲಾಗಿದೆ.
ಅಹವಾಲು ಸಲ್ಲಿಸಬೇಕಾದ ವಿಷಯಗಳು
* ರಸ್ತೆ ಗುಂಡಿಗಳು ಮತ್ತು ರಸ್ತೆ ದುರಸ್ಥಿ ಕಾರ್ಯಗಳು
* ಬೀದಿ ದೀಪಗಳ ನಿರ್ವಹಣೆ
* ಕಸ ವಿಲೇವಾರಿ
* ಒಣಗಿದ / ಅಪಾಯಕಾರಿ ಮರ/ಕೊಂಬೆಗಳ ಕತ್ತರಿಸುವಿಕೆ
* ಉದ್ಯಾನವನಗಳ ನಿರ್ವಹಣೆ
* ಇ-ಖಾತಾ ಸಂಬಂಧಿತ ವಿಷಯಗಳು
* ಅನಧಿಕೃತ ಬ್ಯಾನರ್/ಪೋಸ್ಟರ್ ಗಳ ತೆರವು
* ಪಾದಚಾರಿ ಮಾರ್ಗದ ನಿರ್ವಹಣೆ ಮತ್ತು ಒತ್ತುವರಿ
* ಚರಂಡಿ ಶುದ್ಧೀಕರಣ
* ನಗರಪಾಲಿಕೆಯಿಂದ ಇನ್ನಿತರೆ ಮೂಲಭೂತ ಸೌಕರ್ಯ ಕಲ್ಪಿಸುವ ಅಹವಾಲುಗಳು
ನಾಗರಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಮಾನ್ಯ ಆಯುಕ್ತರು ಖುದ್ದಾಗಿ ಆಲಿಸಿ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನಿರ್ದೇಶನ ನೀಡಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು. ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಪಾಲಿಕೆ ಪ್ರಕಟಣೆ ಮೂಲಕ ಕೋರಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications