Property Tax: ಕಂದಾಯ ಬಾಕಿ ಪಾವತಿಸದ ಆಸ್ತಿ ಮಾಲೀಕರಿಗೆ ಪಾಲಿಕೆ ಬಿಗ್ ಶಾಕ್
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಕಳೆದ ವರ್ಷ 2025ರಲ್ಲಿ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ನಿರ್ದಿಷ್ಟ ಗುರಿ ತಲುಪಲಾಗಿಲ್ಲ. ಈ ಹಿನ್ನೆಲೆಯಲ್ಲಿ ಹೊಸ ವರ್ಷ 2026ರಲ್ಲಿ ಆಸ್ತಿಗಳ ಕಂದಾಯ ಬಾಕಿ ವಸೂಲಿ ಹೆಚ್ಚಿಸಿ ಗುರಿ ತಲುಪುವ ಉದ್ದೇಶದಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ಮಹತ್ವದ ಪ್ಲಾನ್ ಮಾಡಿಕೊಂಡಿದ್ದು, ತೆರಿಗೆ ಪಾವತಿಸದ ಮತ್ತು ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ.
2026ರ ಮಾರ್ಚ್ ಹೊತ್ತಿಗೆ ಜಿಬಿಎ ನಿಗದಿತ 6500 ಕೋಟಿ ರೂಪಾಯಿ ತೆರಿಗೆ ಸಂಗ್ರಹದ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸಲು ಸ್ವಯಂ ಟಾಸ್ಕ್ ರೂಪಿಸಿಕೊಂಡು ಅಗತ್ಯ ಕ್ರಿಯಾ ಯೋಜನೆಯೊಂದಿಗೆ (ಆಕ್ಷನ್ ಪ್ಲಾನ್) ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಲು ಇಂಜಿನಿಯರ್ ಗಳಿಗೆ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಬುಧವಾರದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ತೆರಿಗೆ ಪಾವತಿಸದ ಆಸ್ತಿಗಳ ಡೇಟಾ ಸಂಗ್ರಹ
ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡದ ಸ್ವತ್ತುಗಳ ಪಟ್ಟಿಯನ್ನು ಮಾಡಿ ಅಂತಹ ಸ್ವತ್ತುಗಳಿಗೆ ಬಾಕಿ ಕಂದಾಯ ಪಾವತಿ ಮಾಡಲು ನೋಟಿಸ್ ನೀಡಿಬೇಕು. ಒಂದು ವೇಳೆ ನೋಟೀಸ್ ನೀಡಿದ ನಂತರವು ಅವರು ಬಾಕಿ ಆಸ್ತಿ ತೆರಿಗೆ ಪಾವತಿ ಮಾಡದಿದ್ದಲ್ಲಿ ಅಂತಹ ಸ್ವತ್ತುಗಳಿಗೆ ಬೀಗ ಜಡಿಯವುಂತೆ ಕಂದಾಯ ವಿಭಾಗದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಈ ಮೂಲಕ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಕಠಿಣ ಕ್ರಮ ಜಾರಿಗೆ ಮಾಡಲಾಗುತ್ತಿದೆ ಎಂಬ ಸಂದೇಶ ರವಾನಿಸಲಾಗಿದೆ.
ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ
ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು ಪ್ರತಿ ವಾರ ಹೊಸ ಆಲೋಚನೆಯೊಂದಿಗೆ ಸ್ವಯಂ ಟಾಸ್ಕ್ ರೂಪಿಸಬೇಕು. ಅಗತ್ಯ ಕ್ರಿಯಾಯೋಜನೆಯೊಂದಿಗೆ (ಆಕ್ಷನ್ ಪ್ಲಾನ್) ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಇ-ಖಾತಾ: ನಗರ ಪಾಲಿಕೆವಾರು ಸಹಾಯವಾಣಿ
ಆಯುಕ್ತರ ನೇತೃತ್ವದಲ್ಲಿ ಡಿಸೆಂಬರ್-2025 ಮಾಹೆಯಲ್ಲಿ ಬೆಂಗಳೂರು ಕೇಂದ್ರ ನಗರಪಾಲಿಕೆಯ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಕಂದಾಯ ವಿಭಾಗದ ಉಪ ಆಯುಕ್ತರಾದ ರಾಜು ಅವರಿಗೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಬೀಳ್ಕೊಡಲಾಯಿತು. ನಗರದ ಸ್ವಚ್ಛತೆ ಕಾರ್ಯ ನಿರ್ವಹಿಸುತ್ತಿರುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವೆಂದು ಶ್ಲಾಘಿಸಿದರು. ಅವರ ನಿವೃತ್ತಿ ಜೀವನ ಸಂತೋಷದಿಂದ ಕೂಡಿರಲೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ಆಯುಕ್ತರು ತಮ್ಮ ಸೀಟ್ ನಲ್ಲಿಯೇ ಕೂರಿಸಿ ಸನ್ಮಾನಿಸಿದ್ದು ಗಮನ ಸೆಳೆಯಿತು.
ಇನ್ನೂ ಇ-ಖಾತಾ ಅರ್ಜಿ ಸಲ್ಲಿಕೆಯಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ಅನೆಕ್ಸ್ 2 ಕಟ್ಟಡದಲ್ಲಿ ಸಹಾಯ ಕೇಂದ್ರ ಆರಂಭಿಸಲಾಗಿದೆ. ಇದೇ ಜನವರಿಯಲ್ಲಿ ಐದು ಪಾಲಿಕೆಯಲ್ಲಿ ತಲಾ ಒಂದೊಂದು ಸಹಾಯ ಕೇಂದ್ರ ಆರಂಭಿಸಲಾಗುವುದು. ಇ-ಖಾತೆಗೆ ಸಂಬಂಧಿಸಿದ ಆಸ್ತಿ ಮಾಲೀಕರ ಏನೇ ಸಮಸ್ಯೆಗಳು ಇದ್ದರು ಅವನ್ನು ಪರಿಹರಿಸಿಕೊಳ್ಳುವಂತೆ ಅವರು ಕೋರಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications