ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ಹೆಸರು: ಸಿಎಂಗೆ ಮನವಿ
ಬೆಂಗಳೂರು, ಜೂನ್ 15: ಬೆಂಗಳೂರಿನ ಯಾವುದಾದರೂ ಮೆಟ್ರೋ ನಿಲ್ದಾಣಕ್ಕೆ ನಟ, ನಿರ್ದೇಶಕ ಶಂಕರ್ ನಾಗ್ ಅವರ ಹೆಸರಿಡಬೇಕು ಎನ್ನುವುದು ಕನ್ನಡಿಗರ ಬಹು ಕಾಲದ ಕೋರಿಕೆಯಾಗಿದೆ. ಆದರೆ, ಇದುವರೆಗೆ ಆ ಕನಸು ಕನಸಾಗಿಯೇ ಉಳಿದುಕೊಂಡಿದೆ.
Recommended Video
ಇದೀಗ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಈ ಬಗ್ಗೆ ಮನವಿ ಮಾಡಲಾಗಿದೆ. ರಾಜ್ಯ ಸಭಾ ಸದಸ್ಯ ಜಿಸಿ ಚಂದ್ರಶೇಖರ್ ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ಹೆಸರು ಇಡುವಂತೆ ಮನವಿ ಮಾಡಿ ಪತ್ರ ಬರೆದಿದ್ದಾರೆ. ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ರಿಗೆ ಸಹ ಪತ್ರ ಬರೆಯಲಾಗಿದೆ.
ಮೂರು ದಶಕಗಳ ಹಿಂದೆಯೇ ಬೆಂಗಳೂರಿಗೆ ಮೆಟ್ರೋ ತರಬೇಕು ಎಂಬ ದೂರದೃಷ್ಟಿಯನ್ನು ಶಂಕರ್ ನಾಗ್ ಹೊಂದಿದ್ದರು. ಶಂಕರ್ ನಾಗ್ ಕನ್ನಡ ಚಿತ್ರರಂಗ, ರಂಗಭೂಮಿಯ ಮೂಲಕ ನಟ, ನಿರ್ದೇಶಕರಾಗಿ ಯಶಸ್ಸು ಪಡೆದು ಕನ್ನಡ ಜನಮಾಸನದಲ್ಲಿ ಬೆರೆತಿದ್ದಾರೆ. ಹೀಗಾಗಿ, ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣಕ್ಕೆ 'ಶಂಕರ್ ನಾಗ್ ಮೆಟ್ರೋ ನಿಲ್ದಾಣ' ಎಂದು ನಾಮಕರಣ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಕೆಲದಿನಗಳ ಹಿಂದೆ ರೂಪೇಶ್ ರಾಜಣ್ಣ ನೇತೃತ್ವದ ಕರುನಾಡ ಸೇವಕರು ಕನ್ನಡಪರ ಸಂಘಟನೆ ರಾಜ್ಯ ಸಭಾ ಸದಸ್ಯ ಜಿಸಿ ಚಂದ್ರಶೇಖರ್ ಭೇಟಿ ಮಾಡಿ ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ಹೆಸರು ಇಡುವ ಬಗ್ಗೆ ಚರ್ಚೆ ನಡೆಸಿ, ಮನವಿ ಮಾಡಿಕೊಂಡಿತ್ತು.
ಶಂಕರ್ ನಾಗ್ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡಬೇಕೆಂಬ ಕನ್ನಡ ಕಟ್ಟಾಳುಗಳ ಮನವಿಗೆ ಸ್ಪಂದಿಸಿ @CMofKarnataka @BBMPCOMM @BBMP_MAYOR ರವರಿಗೆ
— GC ChandraShekhar (@GCC_MP) June 15, 2020
ಪತ್ರ ಬರೆದಿದ್ದೇನೆ .
ಆದಷ್ಟು ಬೇಗ ಬೆಂಗಳೂರಿನ ಒಂದು ಮೆಟ್ರೋ ನಿಲ್ದಾಣ ಶಂಕರ್ ನಾಗ್ ಮೆಟ್ರೋ ನಿಲ್ದಾಣ ಆಗಲಿ. pic.twitter.com/fswXokYqpe
ಈ ಮನವಿಯನ್ನು ಜಿಸಿ ಚಂದ್ರಶೇಖರ್ ಸರ್ಕಾರಕ್ಕೆ ಮುಟ್ಟಿಸಿದ್ದು, ಆದಷ್ಟು ಬೇಗ ಬೆಂಗಳೂರಿನ ಒಂದು ಮೆಟ್ರೋ ನಿಲ್ದಾಣ ಶಂಕರ್ ನಾಗ್ ಮೆಟ್ರೋ ನಿಲ್ದಾಣ ಆಗಲಿ ಎಂದು ಟ್ವೀಟ್ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications