ಬೆಂಗಳೂರು ಬೆಳ್ಳಂದೂರು ಶಾಲಾ ಆವರಣದಲ್ಲಿ ಸ್ಪೋಟಕ ಪತ್ತೆ, ಮಕ್ಕಳು ಪೋಷಕರಲ್ಲಿ ಆತಂಕ
ಬೆಂಗಳೂರು ಮಾರ್ಚ್ 19: ಇತ್ತೀಚೆಗೆ ಬೆಂಗಳೂರಿನಲ್ಲಿ ಬಾಂಬರ್ಗಳ ಭೀತಿ ಹೆಚ್ಚಾಗಿದ್ದು ಸದ್ದಿಲ್ಲದೇ ತಮ್ಮ ಕಾರ್ಯಗಳನ್ನು ಮುಗಿಸಿ ಎಸ್ಕೇಪ್ ಆಗುತ್ತಿದ್ದಾರೆ. ಇದಕ್ಕೆ ರಾಮೇಶ್ವರಂ ಕೆಫೆ ಬಹು ದೊಡ್ಡ ಸಾಕ್ಷಿ. ಶಾಲೆಗಳಲ್ಲಿ ಬಾಂಬ್ ಇಡುವ ಬೆದರಿಕೆ ಸಂದೇಶಗಳು ಶಾಲೆಗಳಿಗೆ ಹಾಗೂ ಪೊಲೀಸ್ ಠಾಣೆಗಳಿಗೆ ಇತ್ತೀಚೆಗೆ ಹೆಚ್ಚಾಗಿ ಬಂದಿದ್ದವು. ಈಗ ನಗರದ ಶಾಲೆಯೊಂದರಲ್ಲಿ ಸ್ಪೋಟಕಗಳು ಪತ್ತೆಯಾಗಿವೆ. ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಹೌದು.... ಬೆಂಗಳೂರಿನ ಬೆಳ್ಳಂದೂರು ಶಾಲಾ ಆವರಣದಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದು ಮಕ್ಕಳು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಪೋಟಕಗಳು ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.

ಇವುಗಳನ್ನು ಅಕ್ರಮವಾಗಿ ಸಂಗ್ರಹಿಸಿರುವುದು ತಿಳಿದು ಬಂದಿದೆ. ಶಾಲೆಯ ಬಳಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಅಲ್ಲಿ ಬಂಡೆಗಳ ಸ್ಪೋಟಕ್ಕೆ ಇವುಗಳನ್ನು ತಂದಿರಬಹುದು ಎನ್ನುವ ಅನುಮಾನ ಮೂಡಿದೆ. ಜೊತೆಗೆ ಇವುಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಎಲ್ಲಾ ಆಯಾಮಗಳಿಂದ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಅಕ್ರಮ ಸ್ಪೋಟಕ ಖರೀದಿ ಹಾಗೂ ಸಾಗಾಣೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ್ ಪ್ರಕರಣ ಇನ್ನೂ ಮಾಸಿಲ್ಲ. ಅದಾಗಲೇ ಶಾಲೆಯ ಆವರಣದಲ್ಲಿ ಸ್ಪೋಟಕಗಳು ಪತ್ತೆಯಾಗಿರುವುದು ಆತಂಕವನ್ನು ಹೆಚ್ಚಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ ಇನ್ನೂ ಆರೋಪಿ ಪತ್ತೆಯಾಗಿಲ್ಲ. ಈ ಪ್ರಕರಣಕ್ಕೂ ಮುನ್ನ ಬೆಂಗಳೂರಿನ ಅನೇಕ ಪ್ರತಿಷ್ಠಿತ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು.
ಇದರಿಂದ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಕರೆ ಮಾಡಿ ಪರಿಶೀಲನೆ ಮಾಡಿಸಿದ್ದವು. ಆದರೆ ಯಾವುದೇ ಸ್ಫೊಟಕಗಳು ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಸಂದೇಶ ಎನ್ನುವುದನ್ನು ಪೊಲೀಸರು ಪರಿಶೀಲನೆ ಬಳಿಕ ಸ್ಪಷ್ಟಪಡಿಸಿದ್ದರು. ಇದಾದ ಬಳಿಕ ಮಾರ್ಚ್ ಒಂದರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿದ್ದು ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ಸದ್ಯ ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಾಗಿದ್ದು ಎಲ್ಲೆಡೆ ಪೊಲೀಸರು ಕಣ್ಗಾವಲು ಇದೆ. ಬೆಂಗಳೂರಿನಲ್ಲಿ ನಡೆದ ಈ ಎಲ್ಲಾ ಬೆಳವಣಿಗೆಗಳ ಬಳಿಕ ಪೊಲೀಸ್ ನಗರದಲ್ಲಿ ಅಲರ್ಟ್ ಆಗಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲ ತಮಿಳುನಾಡು ಮತ್ತು ಇತರ ಕೆಲವು ರಾಜ್ಯಗಳ ಶಾಲೆಗಳಿಗೂ ಬೆದರಿಕೆ ಸಂದೇಶ ಬಂದಿತ್ತು.
ರಾಮೇಶ್ವರಂ ಕೆಫೆ ಸ್ಪೋಟದ ಬಳಿಕ ಯಾವ ಸಂದೇಶವನ್ನೂ ನಿರ್ಲಕ್ಷ್ಯ ಮಾಡದೆ ಅದರ ಹಿಂದಿರುವ ಉಗ್ರರ ಕೈವಾಡವನ್ನು ಪತ್ತೆ ಮಾಡಲು ಪೊಲೀಸರು ಕಾರ್ಯಪ್ರೌವೃತ್ತರಾಗಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications