ಬೆಂಗಳೂರಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ: ಇಂದೂ ಬರುತ್ತಾ?
ಬೆಂಗಳೂರು, ಜುಲೈ 25: ಕರ್ನಾಟಕಾದ್ಯಂತ ಮುಂಗಾರು ಚುರುಕಾಗಿದೆ. ಇಷ್ಟು ದಿನ ಕೇವಲ ಮೋಡವನ್ನೇ ನೋಡಿಕೊಂಡು ಖುಷಿ ಪಡುತ್ತಿದ್ದ ಬೆಂಗಳೂರಿನ ಜನತೆಗೆ ಗುರುವಾರದ ಮಳೆಯಿಂದ ಸಂತೋಷವಾಗಿದೆ.
ಮಳೆಯಿಂದಾಗಿ ನಗರದಲ್ಲಿ ತಂಪಾದ ವಾತಾವರಣ ಸೃಷ್ಟಿಯಾಗಿದ್ದು, ಚಳಿಯ ಅನುಭವವಾಗುತ್ತಿದೆ. ಹಗಲಿನಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ಸುರಿಯುತ್ತಿದೆ. ದಕ್ಷಿಣ ಒಳನಾಡಿನ ಮುಂಗಾರು ಚುರುಕಾಗಿರುವುದರಿಂದ ನಗರದ ಬಹುತೇಕ ಭಾಗಗಳಲ್ಲಿ ಮಳೆ ಸುರಿದಿದೆ.
ಹಲವು ದಿನಗಳಿಂದ ನಗರದಲ್ಲಿ ತುಂತುರು ಮಳೆಯಾಗುತ್ತಿದ್ದು, ಗುರುವಾರ ಕೇಂದ್ರ ಭಾಗಗಳಲ್ಲಿ ಸಾಧಾರಣ ಮಳೆ ಸುರಿಯಿತು. ಹೊರವಲಯಗಳ ಕೆಲ ಪ್ರದೇಶಗಳಲ್ಲಿ ಮಾತ್ರ ಮಳೆಯಾಯಿತು.

ತಾವರೆಕೆರೆಯಲ್ಲಿ 24 ಮಿ.ಮೀ, ದಯಾನಂದ ನಗರದಲ್ಲಿ 22 ಮಿ.ಮೀ, ಸಂಪಂಗಿರಾಮನಗರದಲ್ಲಿ 19 ಮಿ.ಮೀ, ದಾಸನಪುರದಲ್ಲಿ 18 ಮಿ.ಮೀ, ಬಸವೇಶ್ವರನಗರದಲ್ಲಿ 15 ಮಿ.ಮೀ, ಕೊಡಿಗೇಹಳ್ಳಿಯಲ್ಲಿ 14 ಮಿ.ಮೀ, ಹೆಸರಘಟ್ಟದಲ್ಲಿ 13 ಮಿ.ಮೀ , ದೊಡ್ಡಗುಬ್ಬಿಯಲ್ಲಿ 12 ಮಿ.ಮೀ, ಹೊಯ್ಸಳ ನಗರದಲ್ಲಿ 11 ಮಿ.ಮೀ, ಪುಲಕೇಶಿ ನಗರದಲ್ಲಿ 10 ಮಿ.ಮೀ, ಎಚ್ಎಂಟಿ ವಾರ್ಡ್, ಕಾಟನ್ ಪೇಟೆ, ಮಾರುತಿನಗರ ಮಂದಿರ, ಗಂಟಿಗಾನಹಳ್ಳಿಯಲ್ಲಿ 9 ಮಿ.ಮೀ ವಿವಿಪುರದಲ್ಲಿ 5 ಮಿ.ಮೀ ಮಳೆಯಾಗಿದೆ.
ಕೆಂಗೃತಿ, ರಾಜರಾಜೇಶ್ವರಿನಗರಮ ಬಸವನಗುಡಿಯಲ್ಲಿ ತುಂತುರು ಮಳೆಯಾಗಿದೆ. ಜುಲೈ 1 ರಿಂದ ಜುಲೈ 25ರವರೆಗೆ ಕೇಂದ್ರಭಾಗಗಳಲ್ಲಿ 160 ಮಿ.ಮೀ, ಕೆಐಎಎಲ್ನಲ್ಲಿ 140 ಮಿ.ಮೀ ಮಳೆಯಾಗಿದೆ.
ಬೆಂಗಳೂರು ಕೇಂದ್ರದಲ್ಲಿ ಗರಿಷ್ಠ 28.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.6 ಡಿಗ್ರಿ ಸೆಲ್ಸಿಯಸ್, ಕೈಎಎಲ್ನಲ್ಲಿ ಗರಿಷ್ಠ 29.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.8 ಡಿಗ್ರಿ ಸೆಲ್ಸಿಯಸ್, ಎಚ್ಎಎಲ್ನಲ್ಲಿ ಗರಿಷ್ಠ 29.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಇಂದು ಕೂಡ ಬೆಂಗಳೂರು ಕೇಂದ್ರ ಭಾಗ ಹಾಗೂ ಹೊರವಲಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications