ನಾಳೆ ಬಸ್ಗಳ ಸಂಚಾರ ಸ್ಥಗಿತಗೊಂಡರೆ 3 ನಿಮಿಷಕ್ಕೊಂದು ಮೆಟ್ರೋ
ಬೆಂಗಳೂರು, ಜನವರಿ 7: ಮೋಟಾರು ವಾಹನ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಕಾರ್ಮಿಕರು ಕರೆ ನೀಡಿರುವ ಎರಡು ದಿಗಳ ಭಾರತ ಬಂದ್ ನಮ್ಮ ಮೆಟ್ರೋ ಸಂಚಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
ಜನವರಿ 8-9 ರಂದು ಭಾರತ್ ಬಂದ್ ಯಾಕಾಗಿ?
ನಮ್ಮ ಮೆಟ್ರೋ ಎಂದಿನಂತೆ ಕಾರ್ಯ ನಿರ್ವಹಿಸಲಿದೆ, ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡರೆ ಪ್ರತಿ ಮೂರು ನಿಮಿಷಕ್ಕೊಂದು ಮೆಟ್ರೋ ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಸಂಚಾರಕ್ಕೆ 2 ವರ್ಷ ಕಾಯ್ಬೇಕಂತೆ!
ಅತಿ ಹೆಚ್ಚು ಪ್ರಯಾಣಿಕರು ಆಗಮಿಸುವ ಸಾಧ್ಯತೆ ಇರುವ ಕಾರಣ ಹೆಚ್ಚು ಸಿಬ್ಬಂದಿಗಳ ವ್ಯವಸ್ಥೆ ಮಾಡಲಾಗಿದೆ, ಹಾಗೆಯೇ ಮೈಸೂರು ರಸ್ತೆ-ಬೈಯಪ್ಪನಹಳ್ಳಿಯ ನೇರಳೆ ಮಾರ್ಗ ಯಲಚೇನಹಳ್ಳಿ- ನಾಗಸಂದ್ರದ ಹಸಿರು ಮಾರ್ಗದಲ್ಲಿ ಪ್ರತಿ ಮೂರು ನಿಮಿಷಕ್ಕೊಂದು ಮೆಟ್ರೋ ಸಂಚರಿಸಲಿದೆ. ಓಲಾ,ಊಬರ್ ಹಾಗೂ ಕೆಲವು ಆಟೋಗಳ ಸಂಚಾರವಿರಲಿದೆ. ಸದ್ಯಕ್ಕೆ ಖಾಸಗಿ ಶಾಲೆಗಳಿಗೆ ಘೋಷಿಸಲಾಗಿದ್ದು, ಸರ್ಕಾರಿ ಶಾಲೆಗಳ ಕುರಿತು ಸಂಜೆಯೊಳಗೆ ಆದೇಶ ಹೊರಬೀಳಲಿದೆ.
ಇನ್ನು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಕೂಡ ರೋಗಿಗಳ ಹಿತದೃಷ್ಟಿಯಿಂದ ಮುಷ್ಕರಕ್ಕೆ ಬೆಂಬಲ ಸೂಚಿಸುತ್ತಿಲ್ಲ, ಎಂದಿನಂತೆಯೇ ತೆರೆದಿರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.