ಕೊಳಚೆ ಪೈಪ್ ನಲ್ಲಿ ಸಿಲುಕಿದ್ದ ಬೆಕ್ಕನ್ನು ರಕ್ಷಿಸಿದ "ಜಿಎಚ್ಆರ್ ತಂಡ'
ಬೆಂಗಳೂರು, ನವೆಂಬರ್ 20: ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ ಹರ್ಷ ಅವರ ಮನೆಯ ಕೊಳಚೆ ನೀರಿನ ಪೈಪ್ ನಲ್ಲಿ ಸಿಲುಕಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಲಾಗಿದೆ. ಬಿಜೆಪಿ ಮುಖಂಡ, ಜಿ.ಎಚ್ ರಾಮಚಂದ್ರ ಅವರ ಪುತ್ರ ಜಗದೀಶ್.ಆರ್.ಚಂದ್ರರವರಿಗೆ ಬೆಕ್ಕಿನ ಮರಿ ರಕ್ಷಣೆಗೆ ಸಹಾಯ ಮಾಡಲು ಹರ್ಷ ಮನವಿ ಮಾಡಿದ್ದರು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಕೊರೊನಾ ಯೋಧರಾಗಿ ಸೇವೆ ಸಲ್ಲಿಸಿದ "ನಮ್ಮ Team GHR' ಸದಸ್ಯರು ತ್ವರಿತವಾಗಿ ಬೆಕ್ಕಿನ ರಕ್ಷಣೆಗೆ ಮುಂದಾದರು. ಮತ್ತು ಬೆಕ್ಕಿನ ಮರಿಯನ್ನು ಅದರ ತಾಯಿ ಬೆಕ್ಕಿನೊಂದಿಗೆ ಮತ್ತೆ ಒಂದುಗೂಡಿಸುವಲ್ಲಿ ಸಫಲರಾದರು. ಗುರುವಾರ ರಾತ್ರಿಯಿಂದ ಕೊಳಚೆನೀರಿನ ಪೈಪ್ನಲ್ಲಿ ಸಿಲುಕಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಲಾಗಿದ್ದು, ಇದಕ್ಕೆ ಸಹಕರಿಸಿದ ನಮ್ಮ Team GHR ತಂಡದ ಪ್ರತಿಯೊಬ್ಬರಿಗೂ ಅನಂತಾನಂತ ಧನ್ಯವಾದಗಳು ಎಂದು ರಾಜರಾಜೇಶ್ವರಿ ನಗರದ ನಿವಾಸಿ ಹರ್ಷ ಹೇಳೀದ್ದಾರೆ.

ಬೆಕ್ಕನ್ನು ಹೊರತೆಗೆಯಲು ಪ್ರಯತ್ನ ಮಾಡಿದೆ
ಬೆಕ್ಕಿನ ಮರಿಯ ರಕ್ಷಣೆ ಕುರಿತು ಮಾತನಾಡಿದ ಹರ್ಷ, ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ತುಂಬಾ ಶಬ್ಧ ಬರುತ್ತಿತ್ತು. ಬೀದಿ ಬೆಕ್ಕುಗಳು ಆಗಿದ್ದರಿಂದ ಮನೆಯಲ್ಲಿಯೇ ಸಾಕಿಕೊಂಡಿದ್ದೆ. ಜಾಸ್ತಿ ಶಬ್ಧ ಬರುತ್ತಿದೆ ಎಂದು ಹೊರ ಬಂದು ನೋಡಿದಾಗ, ೫ರಲ್ಲಿ ನಾಲ್ಕು ಬೆಕ್ಕಿನ ಮರಿಗಳು ಕಾಣಿಸಿಕೊಂಡವು.ಇನ್ನೊಂದು ಬೆಕ್ಕು ಪಕ್ಕದಲ್ಲಿದ್ದ ಪೈಪಿನೊಳಗೆ ಹೋಗಿತ್ತು, ಅದನ್ನು ಮುಚ್ಚಿದ್ದರೂ ಹೇಗೋ ಅದರೊಳಗೆ ಹೋಗಿ ಹೆಚ್ಚು ಸೌಂಡ್ ಮಾಡುತ್ತಿತ್ತು. ನಾನು ಬೆಕ್ಕನ್ನು ಹೊರತೆಗೆಯಲು ಪ್ರಯತ್ನ ಮಾಡಿದೆ. ಆದರೆ ಪ್ರಯೋಜನವಾಗಲಿಲ್ಲ.

ಬೆಕ್ಕನ್ನು ರಕ್ಷಣೆ ಮಾಡಲ್ಲ
ಗೂಗಲ್ ನಲ್ಲಿ ಸರ್ಚ್ ಮಾಡಿದರೆ ಪ್ರಾಣಿ ರಕ್ಷಣಾ ಸಂಘ ಅಂತಾ ಸಾವಿರ ಇದಾವೆ. ಆದರೆ ಅವರ್ಯಾರು ಸಹಾಯಕ್ಕೆ ಬರಲಿಲ್ಲ. ದಯವಿಟ್ಟು ಮನವಿ ಮಾಡಿಕೊಳ್ಳುತ್ತೇನೆ. ಬೆಕ್ಕನ್ನು ರಕ್ಷಣೆ ಮಾಡಲ್ಲ, ನಾಯಿಯನ್ನು ರಕ್ಷಣೆ ಮಾಡುತ್ತೇವೆ ಎಂದು ಹೇಳುತ್ತಾರೆ. ಅಂತವರು ಕಂಪನಿ ಮುಚ್ಚಿಬಿಡಿ ಎಂದು ಹರ್ಷ ಸಿಡಿಮಿಡಿಗೊಂಡರು.

ನಮ್ಮ ಜಿಎಚ್ಆರ್ ತಂಡವನ್ನು ಕಳುಹಿಸಿದರು
ಎಲ್ಲಾ ಪ್ರಾಣಿಗಳು ಒಂದೇ, ಎಲ್ಲ ಪ್ರಾಣಿಗಳ ಪ್ರಾಣವೂ ಒಂದೇ. ಎಲ್ಲ ಪ್ರಾಣಿಗಳ ರಕ್ಷಣೆಗೆ ಮುಂದಾಗಿ. ಜಿ.ಎಚ್ ರಾಮಚಂದ್ರಪ್ಪ ಅವರ ಮಗ ಜಗದೀಶ್ ನನಗೆ ಪಿಯು ಕ್ಲಾಸ್ ಮೇಟ್ ಆಗಿದ್ದ. ಫೇಸ್ ಬುಕ್ ನಲ್ಲಿ ಈ ಥರ ಆಗಿದೆ ಎಂದು ಕಮೆಂಟ್ ಹಾಕಿದೆ. ತಕ್ಷಣವೇ ಅವರ ನಮ್ಮ ಜಿಎಚ್ಆರ್ ತಂಡವನ್ನು ಕಳುಹಿಸಿದರು.

ಆಸ್ಪತ್ರೆಗೂ ಹೋಗಿ ತೋರಿಸುತ್ತೇನೆ
ಬೆಕ್ಕನ್ನು ರಕ್ಷಣೆ ಮಾಡಲು ತುಂಬಾ ಕಷ್ಟಪಟ್ಟಿದ್ದಾರೆ. ಮೇಲಿನಿಂದ ರಕ್ಷಣೆ ಮಾಡಲು ಅಸಾಧ್ಯವಾದಾಗ ಕೆಳಗೆ ಪೈಪ್ ಕೊರೆದು, ಬೆಕ್ಕನ್ನು ರಕ್ಷಣೆ ಮಾಡಿದರು. ಬೆಕ್ಕು ಆರೋಗ್ಯವಾಗಿದ್ದು, ಆಸ್ಪತ್ರೆಗೂ ಹೋಗಿ ತೋರಿಸುತ್ತೇನೆ. ಬೆಕ್ಕು ರಕ್ಷಣೆ ಮಾಡಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ರಾಜರಾಜೇಶ್ವರಿ ನಿವಾಸಿ, ಪ್ರಾಣಿಪ್ರಿಯ ಹರ್ಷ ವಿಡಿಯೋ ಮೂಲಕ ಹೇಳಿದರು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications