ಅತ್ಯಾಚಾರದ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?
ಬೆಂಗಳೂರು, ಸೆ. 10 : ನೇಪಾಳಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದ ಘಟನೆ ಮಾಸುವ ಮುನ್ನವೇ ರಾಜಧಾನಿಯಲ್ಲಿ ಮತ್ತೆರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
ವಿದೇಶಿ ವ್ಯಕ್ತಿಯೊಬ್ಬ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ ಎಂದು ಹರಿಯಾಣದ ಮಹಿಳೆಯೊಬ್ಬರು ದೇವನಹಳ್ಳಿ ಠಾಣೇಗೆ ದೂರು ನೀಡಿದ್ದಾರೆ. ಇತ್ತ ಟ್ಯೂಷನ್ಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಮನೆ ಪಾಠದ ಶಿಕ್ಷಕನ ಮೇಲೆ ಬಾಲಕಿ ಪಾಲಕರು ದೂರು ದಾಖಲಿಸಿದ್ದಾರೆ.
ಪ್ರಕರಣ 1
ಹಾಲೆಂಡ್ ಮೂಲದ ವಿದೇಶಿಗನೊಬ್ಬ ಕಳೆದ ಜನವರಿಯಿಂದ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂದು ಮಹಿಳೆಯೊಬ್ಬರು ಕೆಂಪೇಗೌಡ ವಿಮಾಣ ನಿಲ್ದಾಣ ಠಾಣೆಗೆ ಸೆ. 9ರ ಮಧ್ಯರಾತ್ರಿ ದೂರು ದಾಖಲಿಸಿದ್ದರು.
ಆರೋಪಿ ಪೀಟರ್(33) ಎಂಬಾತನನ್ನು ದೇವನಳ್ಳಿ ಸ್ವಿಸ್ ಟೌನ್ನಲ್ಲಿ ಬಂಧಿಸಿರುವ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರಿಗೂ ಅಂಬೇಡ್ಕರ್ ವೈದ್ಯಕೀಯ ವಿದ್ಯಾಲಯದಲ್ಲಿ ಪರೀಕ್ಷೆ ಮಾಡಿಸಿದ್ದಾರೆ.
ಮಹಿಳೆ ತಾನು ಒಮ್ಮೆ ಗರ್ಭಿಣಿಯಾಗಿದ್ದು ಆರೋಪಿ ಅಬಾರ್ಶನ್ ಮಾಡಿಸಿದ್ದ ಎಂದೂ ಆರೋಪಿಸಿದ್ದಾರೆ.
ಪ್ರಕರಣ 2
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಶಿಕ್ಷಕನ ಮೇಲೆ ಬಾಲಕಿ ಪಾಲಕರು ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ. ಕಾಮುಕ ಶಿಕ್ಷಕ ಬಿಜು(30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 8 ರಿಂದ 10 ಮಕ್ಕಳಿಗೆ ಮನೆಪಾಠ ಹೇಳುವ ಬಿಜು ಖಾಸಗಿ ಕಂಪನಿಯೊಂದರಲ್ಲೂ ಕೆಲಸ ಮಾಡುತ್ತಿದ್ದ.
ಎಂದಿನಂತೆ ಟ್ಯೂಷನ್ಗೆ ತೆರಳಿದ್ದ ಬಾಲಕಿ ಮನೆ ಬಂದಾಗ ತುಂಬಾ ಖಿನ್ನವಾಗಿದ್ದಳು. ಈ ಬಗ್ಗೆ ಪಾಲಕರು ವಿಚಾರಿಸಿದಾಗ ಸರಿಯಾದ ಉತ್ತರ ನೀಡಲಿಲ್ಲ. ಮತ್ತೊಮ್ಮೆ ಕೇಳಿದಾಗ ಶಿಕ್ಷಕನ ನೀಚ ಕೃತ್ಯದ ಬಗ್ಗೆ ಹೇಳಿದ್ದಾಳೆ.
ತಕ್ಷಣವೇ ಪಾಲಕರು ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ನಿರಂತರ ಅತ್ಯಾಚಾರ ನಡೆದಿರುವುದು ಸ್ಪಷ್ಟ ಎಂದು ಹೇಳಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ













Click it and Unblock the Notifications