ಅತ್ಯಾಚಾರದ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?
ಬೆಂಗಳೂರು, ಸೆ. 10 : ನೇಪಾಳಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದ ಘಟನೆ ಮಾಸುವ ಮುನ್ನವೇ ರಾಜಧಾನಿಯಲ್ಲಿ ಮತ್ತೆರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
ವಿದೇಶಿ ವ್ಯಕ್ತಿಯೊಬ್ಬ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ ಎಂದು ಹರಿಯಾಣದ ಮಹಿಳೆಯೊಬ್ಬರು ದೇವನಹಳ್ಳಿ ಠಾಣೇಗೆ ದೂರು ನೀಡಿದ್ದಾರೆ. ಇತ್ತ ಟ್ಯೂಷನ್ಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಮನೆ ಪಾಠದ ಶಿಕ್ಷಕನ ಮೇಲೆ ಬಾಲಕಿ ಪಾಲಕರು ದೂರು ದಾಖಲಿಸಿದ್ದಾರೆ.
ಪ್ರಕರಣ 1
ಹಾಲೆಂಡ್ ಮೂಲದ ವಿದೇಶಿಗನೊಬ್ಬ ಕಳೆದ ಜನವರಿಯಿಂದ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂದು ಮಹಿಳೆಯೊಬ್ಬರು ಕೆಂಪೇಗೌಡ ವಿಮಾಣ ನಿಲ್ದಾಣ ಠಾಣೆಗೆ ಸೆ. 9ರ ಮಧ್ಯರಾತ್ರಿ ದೂರು ದಾಖಲಿಸಿದ್ದರು.
ಆರೋಪಿ ಪೀಟರ್(33) ಎಂಬಾತನನ್ನು ದೇವನಳ್ಳಿ ಸ್ವಿಸ್ ಟೌನ್ನಲ್ಲಿ ಬಂಧಿಸಿರುವ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರಿಗೂ ಅಂಬೇಡ್ಕರ್ ವೈದ್ಯಕೀಯ ವಿದ್ಯಾಲಯದಲ್ಲಿ ಪರೀಕ್ಷೆ ಮಾಡಿಸಿದ್ದಾರೆ.
ಮಹಿಳೆ ತಾನು ಒಮ್ಮೆ ಗರ್ಭಿಣಿಯಾಗಿದ್ದು ಆರೋಪಿ ಅಬಾರ್ಶನ್ ಮಾಡಿಸಿದ್ದ ಎಂದೂ ಆರೋಪಿಸಿದ್ದಾರೆ.
ಪ್ರಕರಣ 2
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಶಿಕ್ಷಕನ ಮೇಲೆ ಬಾಲಕಿ ಪಾಲಕರು ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ. ಕಾಮುಕ ಶಿಕ್ಷಕ ಬಿಜು(30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 8 ರಿಂದ 10 ಮಕ್ಕಳಿಗೆ ಮನೆಪಾಠ ಹೇಳುವ ಬಿಜು ಖಾಸಗಿ ಕಂಪನಿಯೊಂದರಲ್ಲೂ ಕೆಲಸ ಮಾಡುತ್ತಿದ್ದ.
ಎಂದಿನಂತೆ ಟ್ಯೂಷನ್ಗೆ ತೆರಳಿದ್ದ ಬಾಲಕಿ ಮನೆ ಬಂದಾಗ ತುಂಬಾ ಖಿನ್ನವಾಗಿದ್ದಳು. ಈ ಬಗ್ಗೆ ಪಾಲಕರು ವಿಚಾರಿಸಿದಾಗ ಸರಿಯಾದ ಉತ್ತರ ನೀಡಲಿಲ್ಲ. ಮತ್ತೊಮ್ಮೆ ಕೇಳಿದಾಗ ಶಿಕ್ಷಕನ ನೀಚ ಕೃತ್ಯದ ಬಗ್ಗೆ ಹೇಳಿದ್ದಾಳೆ.
ತಕ್ಷಣವೇ ಪಾಲಕರು ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ನಿರಂತರ ಅತ್ಯಾಚಾರ ನಡೆದಿರುವುದು ಸ್ಪಷ್ಟ ಎಂದು ಹೇಳಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ













Click it and Unblock the Notifications