ಮಕ್ಕಳ ಆಂಗ್ಲ ಜ್ಞಾನ ಹೆಚ್ಚಿಸುವ 'ಸ್ಪೆಲ್ಲಿಂಗ್ ಬೀ' ಸ್ಪರ್ಧೆ
ಬೆಂಗಳೂರು, ಜ. 25 : ಸಹಸ್ರ ದೀಪಿಕಾ ಶಾಲೆಯ 6 ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ 'ಸ್ಪೆಲ್ಲಿಂಗ್ ಬೀ' ಸ್ಪರ್ಧೆಯಲ್ಲಿ 23 ಸರ್ಕಾರಿ ಶಾಕೆಗಳಿಂದ 92 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
9 ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧೆಯಲ್ಲಿ ಕೃಷ್ಣ ಅಯ್ಯರ್ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಮೊದಲ ಸ್ಥಾನ ಪಡೆದರು. ಸಂಧ್ಯಾ ಮತ್ತು ಬಿಂದು ಶ್ರೀ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದುಕೊಂಡರು. ವಿದ್ಯಾರ್ಥಿಗಳಿಗೆ ಬಹುಮಾನವಾಗಿ ಲ್ಯಾಪ್ ಟಾಪ್ ಮತ್ತು ಟ್ರೋಫಿ ವಿತರಿಸಲಾಯಿತು.[ಪದವಿ ಓದಲು ಆರ್ಥಿಕ ಸಹಾಯ ಬೇಕೆ? ಈ ಪರೀಕ್ಷೆ ಬರೆಯಿರಿ]

ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಭಾಗವಹಿಸಿದ ಎಲ್ಲ ಮಕ್ಕಳಿಗೆ ಶಾಲಾ ಪಠ್ಯದಲ್ಲಿರುವ 500 ಶಬ್ದಗಳ ನಿಘಂಟು ವಿತರಿಸಲಾಯಿತು. ಕನ್ನಡ ಪ್ರೀತಿಯೊಂದಿಗೆ ಇಂಗ್ಲಿಷ್ ಕಲಿಕೆ ಹೆಚ್ಚಬೇಕು ಎಂಬ ಉದ್ದೇಶದಿಂದ ನಿಘಂಟು ನೀಡಲಾಯಿತು ಎಂದು ಆಯೋಜಕರು ತಿಳಿಸಿದರು.

ಕಳೆದ ವರ್ಷ 14 ಶಾಲೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಈ ಬಾರಿ ಅವುಗಳ ಸಂಖ್ಯೆ 23 ಕ್ಕೆ ಏರಿದೆ. ಆಧುನಿಕ ಸಮಾಜದಲ್ಲಿ ಮತ್ತು ಉದ್ಯೋಗ ಗಳಿಕೆಗೆ ಇಂಗ್ಲಿಷ್ ಅಗತ್ಯವಾಗಿದ್ದು ಸರ್ಕಾರಿ ಶಾಲೆಗಳಲ್ಲಿನ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಇಂಥ ಪ್ರಯತ್ನಗಳು ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೈಕೋರ್ಟ್ ನ್ಯಾಯಾಧೀಶ ರಾಮ್ ಮೋಹನ್ ರೆಡ್ಡಿ ಹೇಳಿದರು.
ಭಾಷೆ ಬಳಕೆ, ಉಚ್ಚಾರಕ್ಕೆ ಒಂದು ಸ್ಪಷ್ಟ ಸ್ವರೂಪ ನೀಡುವಲ್ಲಿ ಇವು ಸಹಕಾರಿ. ಆಂಗ್ಲ ಭಾಷೆಯನ್ನು ಅದರ ಉಚ್ಚಾರದಿಂದಲೇ ಅರ್ಥೈಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications