Gitam University : ಗೀತಂ ವಿವಿ ಕಟ್ಟಡದಿಂದ ಬಿದ್ದ ವಿದ್ಯಾರ್ಥಿನಿ ಹಸೀನಾ, ಸಾವಿನ ಬಗ್ಗೆ ಅನುಮಾನಾ?
ಬೆಂಗಳೂರು, ಏಪ್ರಿಲ್ 28: ದೊಡ್ಡಬಳ್ಳಾಪುರದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ಸಾವು ಸಂಭವಿಸಿದೆ. ವಿಶ್ವವಿದ್ಯಾಲಯದ ಬಹುಮಹಡಿ ಕಟ್ಟಡದಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಆದರೆ, ಆಕೆ ಸಾವು ಆಕಸ್ಮಿಕವಲ್ಲ ಎಂದು ಆಕ್ರೋಶ ವ್ಯಕ್ತವಾಗಿದ್ದು, ಸಹಪಾಠಿಗಳು ಪ್ರತಿಭಟನೆ ನಡೆಸಿದ್ದಾರೆ.
ಗೀತಂ ವಿಶ್ವವಿದ್ಯಾಲಯದ ಬಹುಮಹಡಿ ಮೇಲಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿಯನ್ನು 24 ವರ್ಷ ವಯಸ್ಸಿನ ಹಸೀನಾ ಎಂದು ಗುರುತಿಸಲಾಗಿದೆ. ಗೀತಂ ವಿಶ್ವವಿದ್ಯಾಲಯಕ್ಕೆ ಹೊಂದಿಕೊಂಡಂತೆ ಇರುವ ಕಾಲೇಜಿನ ಕಟ್ಟಡದ 6ನೇ ಮಹಡಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಉಗಾಂಡಾ ಮೂಲದ ಹಸೀನಾ, ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಮಹಡಿ ಒಣಗಲು ಬಟ್ಟೆ ಹರಡಿದ್ದರು. ಒಟ್ಟೆ ತೆಗೆದುಕೊಳ್ಳಲು ಹೋದಾಗ, ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎಂದು ಪ್ರಾಥಮಿಕ ತನಿಖಾ ವಿವರಗಳಿಂದ ತಿಳಿದು ಬಂದಿದೆ.

ಆದರೆ, ಹಸೀನಾ ಸಾವು ಅನುಮಾನಾಸ್ಪದವಾಗಿದೆ ಎಂದು ಸ್ನೇಹಿತರು ಆಕ್ರೋಶ ವ್ಯಕ್ತಪಡಿಸಿ, ಗಲಾಟೆ ನಡೆಸಿದ್ದಾರೆ. ವಿಶ್ವ ವಿದ್ಯಾಲಯದ ಕಟ್ಟಡದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.
''ಹಸೀನಾ ಉತ್ತಮ ವಿದ್ಯಾರ್ಥಿನಿಯಾಗಿದ್ದಳು, ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ, ಆಯತಪ್ಪಿ ಕೆಳಗೆ ಬಿದ್ದಿರುವ ಸಾಧ್ಯತೆಯೂ ಕ್ಷೀಣವಾಗಿದ್ದು, ಆಕೆ ಸಾವಿನ ಬಗ್ಗೆ ಶಂಕೆ ವ್ಯಕ್ತವಾಗಿದೆ, ಕೆಲಗೆ ಬಿದ್ದಿದ್ದ ಹಸೀನಾಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲು ಯತ್ನಿಸಲಾಯಿತು, ಆದರೆ, ತೀವ್ರ ರಕ್ತಸ್ರಾವದಿಂದ ಮೃತಪಟ್ಟಳು'' ಎಂದು ಸಹಪಾಠಿಯೊಬ್ಬರು ಹೇಳಿದ್ದಾರೆ. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡು, ವಿಚಾರಣೆ ನಡೆಸಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications