ಬೆಂಗಳೂರು ಕೃಷಿ ವಿವಿ ಘಟಿಕೋತ್ಸವ: ಮೂವರಿಗೆ ಚಿನ್ನದ ಪದಕ
ಬೆಂಗಳೂರು, ಮಾರ್ಚ್ 25: ನಗರದ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸೋಮವಾರ ನಡೆದಿದ್ದು, ಮೂವರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ಬಲದೇವ್ ಸಿಂಗ್ ದಿಲ್ಲಾನ್ ಮಾತನಾಡಿ, ಕೃಷಿ ವಿಶ್ವವಿದ್ಯಾಲಯವು ಪಡೆದಿರುವ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ವಿಶ್ವವಿದ್ಯಾಲಯದ ಸಾಧನೆಗೆ ಹಿಡಿದ ಕೈಗನ್ನಡಿಯಂತಿವೆ ಎಂದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಾತ ಮುಂದುವರೆಸಿ ಪೂರಕವೆಂಬಂತೆ ವಿವಿ ವಿದ್ಯಾರ್ಥಿಗಳು ಅಖಿಲ ಭಾರತ ಕೃಷಿ ಪರಿಷತ್ ನಡೆಸಿರುವ ಅಖಿಲ ಭಾರತ ಕಿರಿಯ ಸಂಶೋಧನಾ ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಪಡೆದಿರುವ ಸ್ಥಾನವು ಮಾದರಿಯಾಗಿದೆ ಎಂದು ಹೇಳಿದರು.
ಭಾರತದ ಹಸಿರು ಕ್ರಾಂತಿಯಲ್ಲಿ ಮಹತ್ತರ ಪಾತ್ರವಹಿಸಿದ್ದ ಹೆಚ್ಚು ಇಳುವರಿ ನೀಡುವ ಗಿಡ್ಡ ಗೋದಿ ತಳಿಗಳು, ಭತ್ತದ ತಳಿಗಳು, ರಾಸಾಯನಿಕ ಗೊಬ್ಬರಗಳು ಹಾಗೂ ನೀರಾವರಿ ಬಳಕೆ ಮತ್ತು ಕೃಷಿ ಯಂತ್ರೋಪಕರಣ ಬಳಕೆಯಿಂದಾಗಿ ಆಹಾರ ಕೊರತೆ ನೀಗಿಸಲು ಸಹಾಯಕಾರಿಯಾಯಿತು ಎಂದರು.

ಚಿನ್ನದ ಪದಕ ವಿಜೇತರ ಕಿರು ಪರಿಚಯ
ಸುಮ .ಕೆ, ರವರು ಸ್ನಾತಕ ಪದವಿ ಬಿ.ಎಸ್ಸಿ(ಕೃಷಿ)ಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಪಡೆದಿರುತ್ತಾರೆ. ಏಳು ಚಿನ್ನದ ಪದಕಗಳು ಮತ್ತು ಐದು ದಾನಿಗಳ ಚಿನ್ನದ ಪದಕಗಳ ಪ್ರಮಾಣಪತ್ರಗಳಿಗೆ ಭಾಜನರಾಗಿದ್ದಾರೆ.
ಇವರ ತಂದೆ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿ ಕ್ಷೇತ್ರ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಒಬ್ಬರು ಅಕ್ಕ ಮತ್ತು ತಂಗಿ ಇದ್ದಾರೆ. ತಂಗಿಯೂ ಸಹ ಬಿ.ಎಸ್ಸಿ(ಕೃಷಿ ಮಾರುಕಟ್ಟೆ ಮತ್ತು ಸಹಕಾರ)ದಲ್ಲಿ ಸ್ನಾತಕ ಪದವಿಯಲ್ಲಿ ಮುಂದುವರೆಸುತ್ತಿದ್ದಾರೆ.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ಪ್ರಸ್ತುತ ಇವರು ಅನುವಂಶಿಯತೆ ಮತ್ತು ಸಸ್ಯ ತಳಿ ತಂತ್ರಜ್ಞಾನ ವಿಷಯದಲ್ಲಿ ಎಂ.ಎಸ್ಸಿ (ಕೃಷಿ) ಮಾಡುತ್ತಿದ್ದಾರೆ. ರೈತರಿಗೆ ಉಪಯೋಗವಾಗುವಂತಹ ಹೆಚ್ಚಿನ ಇಳುವರಿ ಮತ್ತು ಪೀಡೆಗಳಿಗೆ ಸಹಿಷ್ಣತೆ ಹೊಂದಿರುವ ತಳಿಗಳನ್ನು ಹೊರತರುವುದು ಇವರ ಆಶಯವಾಗಿದೆ. ಇವರು ರೇಷ್ಮೆ ಮಹಾವಿದ್ಯಾಲಯ, ಚಿಂತಾಮಣಿ, ಚಿಕ್ಕಬಳ್ಳಾಪುರ ಬಿ.ಎಸ್ಸಿ(ಕೃಷಿ) ಪದವಿಯನ್ನು ಪಡೆದಿರುತ್ತಾರೆ.
ಶೋಭ .ಕೆ.ಎ. ರವರು ಮಾಸ್ಟರ್ ಪದವಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ. ಎಂ. ಎಸ್ಸಿ (ಕೃಷಿ ಅರ್ಥಶಾಸ್ತ್ರ)ದಲ್ಲಿ ಆರು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ. ಇವರ ತಂದೆ ರೈತರಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆ, ಬಾಗೆಪಲ್ಲಿ ತಾಲ್ಲೂಕಿನ ಕಾಮಗಾನಪಲ್ಲಿಯ ಗ್ರಾಮದವರು. ಇವರ ಅಣ್ಣ ಇಂಜಿನಿಯರಿಂಗ್ ಪದವಿಧರ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳು ಬರಪೀಡಿತ ಜಿಲ್ಲೆಗಳಾಗಿದ್ದು ಅವುಗಳಿಗೆ ಸೂಕ್ತವಾದಂತಹ ಬೆಳೆ ಪದ್ದತಿಗಳನ್ನು ಅಧ್ಯಾಯನ ಮಾಡಿ ಇಸ್ರೇಲ್ ಕೃಷಿ ಆಧಾರಿತ ಕಡಿಮೆ ಖರ್ಚಿನ ತಂತ್ರಜ್ಞಾನಗಳನ್ನು ಗುರುತಿಸಿ ರೈತರಿಗೆ ತಲುಪಿಸುವುದು ಇವರ ಜೀವನದ ಗುರಿ.
ಚಿತ್ರ .ಡಿ, ರವರು ಡಾಕ್ಟರ್ ಆಫ್ ಫಿಲಾಸೊಫಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ. ಕೃಷಿ ವಿಸ್ತರಣೆಯಲ್ಲಿ ನಾಲ್ಕು ಚಿನ್ನದ ಪದಕಗಳು ಮತ್ತು ಒಂದು ದಾನಿಗಳ ಚಿನ್ನದ ಪದಕ ಪ್ರಮಾಣಪತ್ರವನ್ನು ಗಳಿಸಿದ್ದಾರೆ.
ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದಲ್ಲಿ ವ್ಯವಸ್ಥಾಪಕರಾಗಿರುವ ಡಾ.ಬಿ. ಮಂಜುನಾಥ್ ರವರ ಮಾರ್ಗದರ್ಶನದಲ್ಲಿ ಪಿಹೆಚ್.ಡಿ ಪಡೆದಿದ್ದಾರೆ. ಇವರು ಬೆಂಗಳೂರು (ಗ್ರಾಮಾಂತರ) ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಯಲಿಯೂರು ಗ್ರಾಮದವರು. ಇವರ ತಂದೆ ಕೃಷಿಕರಾಗಿರುತ್ತಾರೆ. ಇವರ ಅಣ್ಣ ಇಂಜಿನಿಯರಿಂಗ್ ಪದವಿಧರ. ಇವರು ರೈತ ಸಮಸ್ಯೆ ಆಧಾರಿತ ಹೆಚ್ಚಿನ ಸಂಶೋಧನೆ ಕೈಗೊಂಡು, ಸಮಸ್ಯೆ ಆಧಾರಿತ ಪರಿಹಾರವನ್ನು ನೀಡುವುದು ಇವರ ಮುಖ್ಯ ಉದ್ದೇಶವಾಗಿದೆ. ರೈತರು ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ತಾವು ಮುಂದುವರೆಯುವುದರ ಜೊತೆಗೆ ದೇಶದ ಅಭಿವೃದ್ಧಿಗೆ ನಾಂದಿಯಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications