ಸಿಲಿಕಾನ್ ಸಿಟಿಯಲ್ಲಿ ಕಮ್ಯುನಿಟಿ ಮಾಲ್ ‘ಗ್ಲೋಬಲ್ ಡಿವಿನಿಟಿ’ ಲೋಕಾರ್ಪಣೆ!
ಬೆಂಗಳೂರು: ಐಟಿ ಸಿಟಿ ಬೆಂಗಳೂರು ಅಂದ್ರೆ ಜಗತ್ತಿನಾದ್ಯಂತ ಖ್ಯಾತಿ ಪಡೆದ ನಗರ. ಹೀಗೆ ಗಾರ್ಡನ್ ಸಿಟಿ ಅಂತಲೂ ಕರೆಸಿಕೊಳ್ಳುವ ಬೆಂಗಳೂರಿನಲ್ಲಿ ಮತ್ತೊಂದು ಮಾಲ್ ಇದೀಗ ಅನಾವರಣಗೊಂಡಿದೆ. ಎಲ್ಲಾ ವರ್ಗಕ್ಕೂ ಅನುಕೂಲವಾಗುವ ಉದ್ದೇಶದಿಂದ ಬೆಂಗಳೂರಲ್ಲಿ ಮೊದಲ ಕಮ್ಯುನಿಟಿ ಮಾಲ್ 'ಗ್ಲೋಬಲ್ ಡಿವಿನಿಟಿ' ಇಂದು ಉದ್ಘಾಟನೆಯಾಗಿದೆ.
ಅಂದಹಾಗೆ ಮೈಸೂರು ರಸ್ತೆಯಲ್ಲಿ ವಿಶ್ವದರ್ಜೆ ಮಾಲ್ನ ನಟ ಕಿಚ್ಚ ಸುದೀಪ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ಕ್ರೇಜಿಸ್ಟಾರ್ ರವಿಚಂದ್ರನ್, ಡಿಸಿಎಂ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರು ಉದ್ಘಾಟಿಸಿದ್ರು. ಪ್ರತಿಷ್ಠಿತ ಕಂಪನಿಗಳ ಮಳಿಗೆಯಿಂದ ಬಟ್ಟೆ ಹಾಗೂ ದಿನಸಿ ಖರೀದಿಗೆ ವ್ಯವಸ್ಥೆ ಇಲ್ಲಿರಲಿದೆ. ಡಿಜಿಟಲ್ ಮಳಿಗೆಯು ಸೇರಿದಂತೆ ಪಿವಿಆರ್ ಸಿನಿಮಾ, ಫುಡ್ ಕೋರ್ಟ್ ಮತ್ತು ಪ್ಲೇ ಝೋನ್ ಸೇರಿ ಎಲ್ಲಾ ವರ್ಗದವರಿಗೂ ಸಲ್ಲುವ ಮಾಲ್ ಇದಾಗಿದೆ. ಹೀಗೆ ಮತ್ತೊಂದು ಸ್ಪೆಷಲ್ ಜಾಗ ಬೆಂಗಳೂರಿನ ನಿವಾಸಿಗಳಿಗೆ ಸಿಕ್ಕಂತಾಗಿದೆ.

ಬೆಂಗಳೂರಿನ ಸ್ಪೆಷಲ್ ಮಾಲ್ ಲೋಕಾರ್ಪಣೆ
ಕಮ್ಯುನಿಟಿ ಮಾಲ್ 'ಗ್ಲೋಬಲ್ ಡಿವಿನಿಟಿ' ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಲ್ಲಿ ಅನೇಕ ಮಾಲ್ಗಳು ಇವೆ. ಆದ್ರೆ ಇದು ಮೊದಲ ಕಮ್ಯುನಿಟಿ ಮಾಲ್. ಇಲ್ಲಿ ಮನರಂಜನೆ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ಇಲ್ಲಿ 7 ಸಿನಿಮಾ ಸ್ಕ್ರೀನ್ಗಳು ಇದ್ದು, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲು ಕಾರಣ ಮಾಲ್ ಆರಂಭಿಸಲಾಗಿದೆ. ನಿಮ್ಮ ಆಶೀರ್ವಾದ ಸಹಕಾರ ಇರಲಿ. ನನಗೆ ವೈಯಕ್ತಿಕ ಜೀವನ ಹಾಗೂ ರಾಜಕೀಯವಾಗಿ ಸಹಕಾರ ನೀಡಿರುವ ಎಲ್ಲರಿಗೂ ಧನ್ಯವಾದ ಎಂದರು ಡಿಸಿಎಂ.
ತಂದೆಗೆ ತಕ್ಕ ಮಗಳು!
ನಟ ಕಿಚ್ಚ ಸುದೀಪ್, ಮನರಂಜನೆ ಕ್ಷೇತ್ರಕ್ಕೆ ನಿಮ್ಮ ಪ್ರಯತ್ನಕ್ಕೆ ಅಭಿನಂದನೆ ನಿಮ್ಮ ಪ್ರಯತ್ನ ಹೀಗೆ ಮುಂದುವರಿಯಲಿ ಎಂದು ಶುಭ ಕೋರಿದರು. ಹಾಗೇ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, ಯಾವುದೇ ಕೆಲಸ ಮಾಡುವಾಗ ಉದ್ದೇಶ ಚೆನ್ನಾಗಿರಬೇಕು. ಇವರ ಉದ್ದೇಶವೂ ಚೆನ್ನಾಗಿದ್ದು, ಯಶಸ್ವಿಯಾಗಲಿದೆ. ಐಶ್ವರ್ಯ ಅವರನ್ನು ಇಂದು ನೋಡಿದೆ. ಆಕೆ ತಂದೆಗೆ ತಕ್ಕ ಮಗಳು. ಈ ಮಾಲ್ಗೆ ಡಿವಿನಿಟಿ ಎಂಬ ಹೆಸರು ಉತ್ತಮವಾಗಿದೆ. ಎಲ್ಲರಿಗೂ ಅವಕಾಶ ಮಾಡಿಕೊಟ್ಟಿರುವುದು ಉತ್ತಮ ಪ್ರಯತ್ನ, ನಿಮಗೆ ಒಳ್ಳೆಯದಾಗಲಿ ಎಂದರು. ಇದೇ ವೇಳೆ ಅತಿಥಿಗಳು ಮಕ್ಕಳ ಪ್ರತಿಭೆ ಅನಾವರಣಕ್ಕೆ ಶಾಡೋ ಪ್ಲೇ ಉತ್ಪನ್ನವನ್ನು ಬಿಡುಗಡೆ ಮಾಡಿದರು.

ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನಡೆದ 'ಗ್ಲೋಬಲ್ ಡಿವಿನಿಟಿ ಮಾಲ್' ಉದ್ಘಾಟನೆ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು. ಹಾಗೇ ಗ್ಲೋಬಲ್ ಮಾಲ್ ನಿರ್ದೇಶಕಿ ಐಶ್ವರ್ಯಾ ಹೆಗ್ಡೆ, ಉಷಾ ಶಿವಕುಮಾರ್, ಮಂಜುಳಾ, ಸತ್ವ ಗ್ರೂಪ್ ಉಪಾಧ್ಯಕ್ಷ ಮಹೇಶ್ ಖೇತಾನ್ ಕೂಡ ಇದೇ ಸಂದರ್ಭದಲ್ಲಿ ಹಾಜರಿದ್ದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications