ಕನ್ನಡ ರಾಜ್ಯೋತ್ಸವ: 800ಕ್ಕೂ ಅಧಿಕ ಕಲಾವಿದರಿಂದ ಕನ್ನಡ ಭಾಷೆ, ಸಂಸ್ಕೃತಿ ಅನಾವರಣ
ಬೆಂಗಳೂರು, ನವೆಂಬರ್ 01: ಕರ್ನಾಟಕದಾದ್ಯಂತ ಒಂದು ಕಡೆ ದೀಪಾವಳಿ ಸಂಭ್ರಮವಾದರೆ ಮತ್ತೊಂದು ಕಡೆ ಕನ್ನಡ ಹಬ್ಬ, ಕರ್ನಾಟಕ ರಾಜ್ಯೋತ್ಸವ ಆಚರಣೆ ಜೋರಾಗಿತ್ತು. ಸರ್ಕಾರಿ ಕಚೇರಿ, ಆವರಣ, ಪ್ರಮುಖ ವೃತ್ತಗಳು, ಆಟೋ ಸ್ಟ್ಯಾಂಡ್ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ಭಾವುಟಗಳು ರಾರಾಜಿಸಿದವು. ಈ ಹಬ್ಬಕ್ಕೆ ಮೆರುಗು ತರುವಂತೆ ಬೆಂಗಳೂರು ಚಾಮರಾಜಪೇಟೆಯಲ್ಲಿ ನಾಡಹಬ್ಬ ಕನ್ನಡ ರಾಜ್ಯೋತ್ಸವ ಸಮಿತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಸಾಮಾಜ ಸೇವಕರು, ಮಾಜಿ ಪಾಲಿಕೆ ಸದಸ್ಯರಾದ ಚಂದ್ರಶೇಖರ್ ಅಪ್ಪೋಡು ನೇತೃತ್ವದಲ್ಲಿ ಕನ್ನಡದ ಕಹಳೆ ಮೊಳಗಿತು. ಕೋಕಿಲಾ ಚಂದ್ರಶೇಖರ್ ಧ್ವಜಾರೋಹಣ ಮಾಡಿದರು. ಬೆಂಗಳೂರು ಕೇಂದ್ರ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಸಿ. ರಾಜೀವ್ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ವಿಶೇಷವೆಂದರೆ ಇಲ್ಲಿ ನಾಗಮಂಗಲ ಮಹದೇವಪ್ಪನವರ ನೇತೃತ್ವದಲ್ಲಿ ವೀರಗಾಸೆ, ಪೂಜಾ ಕುಣಿತ, ಪಟದ ಕುಣಿತ, ಡೊಳ್ಳು ಕುಣಿತ, ದಕ್ಷಿಣ ಕನ್ನಡದ ಬಂಟ್ವಾಳದ ಚಿಲಿಪಿಲಿ ತಂಡ, ಹುಲಿವೇಷ ಹಾಗೂ ವಿವಿಧ ಜಾನಪದ ಪ್ರಕಾರಗಳ 800 ಮಂದಿ ಕಲಾವಿದರು ಚಾಮರಾಜಪೇಟೆಯಲ್ಲಿ ಕನ್ನಡ ಕಲೆ, ಸಂಸ್ಕೃತಿಯನ್ನು ಅನಾವರಣಗೊಳಿಸಿದರು.
ಕನ್ನಡ ಭಾಷೆ, ಸೊಗಡು, ಸಂಸ್ಕೃತಿ ಅನಾವರಣ
ನೆರೆದಿದ್ದ ಕನ್ನಡಿಗರು ಈ ಕಲಾ ತಂಡಗಳ ಮೆರವಣಿಗೆ ಕುಣಿತ ಕಣ್ತುಂಬಿಕೊಂಡರು. ಈ ಕಲಾವಿದರು ಮೆರವಣಿಗೆ ಮೂಲಕ ಕನ್ನಡ ಭಾಷೆ, ಸಂಸ್ಕೃತಿಯನ್ನು ಅನಾವರಣಗೊಳಿಸಿದರು. ಚಾಮರಾಜಪೇಟೆಯಲ್ಲಿ ಪಂಪ ಮಹಾಕವಿ ರಸ್ತೆ ಇದೆ. ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಇದ್ದು, ಅಲ್ಲಿ ಸಹ ವಿಜೃಂಭಣೆಯಿಂದ ಕನ್ನಡ ದಿನವನ್ನು ಆಚರಿಸಲಾಯಿತು.
ಈ ಭಾಗದ ಸುತ್ತಮುತ್ತ ಕನ್ನಡ, ಸಾಹಿತ್ಯ ಕಂಪಿನ ಅನುಭವವಾಗುತ್ತದೆ. ಕನ್ನಡಕ್ಕಾಗಿ ಶ್ರಮಿಸಿದವರ ಸ್ಮರಣಾರ್ಥ ವಿವಿಧ ಕಾರ್ಯಕ್ರಮಗಳು, ಸಾಹಿತ್ಯ ಸಾಧಕರಿಗೆ ಸನ್ಮಾನ, ಪುಸ್ತಕ ಬಿಡುಗಡೆಯಂತಹ ಕನ್ನಡ ಭಾಷೆ, ನೆಲ ಕುರಿತು ಸಾಕಷ್ಟು ಚುವಟಿಕೆಗಳು ವರ್ಷಪೂರ್ತಿ ನಡೆಯುತ್ತಲೇ ಇರುತ್ತವೆ. ಇದೆಲ್ಲದರ ಸೊಬಗಿಗೆ, ಚಾಮರಾಜಪೇಟೆಯ ಇಂದಿನ ಕನ್ನಡದ ಹಬ್ಬ ಕಳಶವಿಟ್ಟಂತಿತ್ತು.
69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
69 ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ವಿವಿಧ ರಂಗದಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆವತಿಯಿಂದ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಿತು. ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ 50 ಮಂದಿ ಪುರಷ ಸಾಧಕರು, 50 ಮಂದಿ ಮಹಿಳಾ ಸಾಧಕಿಯರು ಸೇರಿದಂತೆ ಒಟ್ಟು 100 ಮಂದಿಗೆ ಈ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications