ಬೆಂಗಳೂರಿಗೆ ಬರುತ್ತಿದ್ದ ಗೋಏರ್ ವಿಮಾನದಲ್ಲಿ ಬೆಂಕಿ
ಬೆಂಗಳೂರು, ಫೆಬ್ರವರಿ 18: ಅಹಮದಾಬಾದಿನಿಂದ ಬೆಂಗಳೂರಿಗೆ ಬರುತ್ತಿದ್ದ ಗೋಏರ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ವಿಮಾನ ಟೇಕ್ಆಫ್ ಆಗುವ ವೇಳೆ ವಿಮಾನದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.
ಕೆಂಪೇಗೌಡ ಏರ್ಪೋರ್ಟ್ನ ಮೊದಲ ರನ್ವೇ 8 ತಿಂಗಳು ಬಂದ್
ವಿಮಾನ ರನ್ವೇಯಲ್ಲಿ ಸಾಗುತ್ತಿರುವಾಗಲೇ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ವಿಮಾನದ ಇಂಜಿನ್ ಆಫ್ ಮಾಡಿ, ತುರ್ತು ನಿರ್ಗಮನ ದ್ವಾರದ ಮೂಲಕ ಪ್ರಯಾಣಿಕರನ್ನು ಹೊರಗೆ ಕಳುಹಿಸಲಾಗಿದೆ. ಈ ವಿಮಾನದಲ್ಲಿ ಎಷ್ಟು ಮಂದಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಅಹಮದಾಬಾದ್- ಬೆಂಗಳೂರು ಮಾರ್ಗದ ಗೋಏರ್ ವಿಮಾನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆಗಲು ಸಿದ್ಧತೆ ನಡೆಸುತ್ತಿದ್ದಂತೆ ಹಕ್ಕಿಯ ರೆಕ್ಕೆ ಬಡಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿತ್ತು. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಗೋಏರ್ ವಿಮಾನದ ವಕ್ತಾರರು, ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.