ಕೃತ್ರಿಮ ಗರ್ಭಧಾರಣೆ ಮನುಷ್ಯತ್ವಕ್ಕೆ, ಧಾರ್ಮಿಕತೆಗೆ ವಿರುದ್ಧ
ಬೆಂಗಳೂರು, ಸೆ 9: ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ ಎಂದು ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ.
ನಗರದಲ್ಲಿ ಗೋಚಾತುರ್ಮಾಸ್ಯ (ಸೆ 9) ಕಾರ್ಯಕ್ರಮದಲ್ಲಿ ಪ್ರವಚನ ನೀಡುತ್ತಾ ಶ್ರೀಗಳು, ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀಗಳು ಪ್ರಶ್ನಿಸಿದ್ದಾರೆ. (ರಾಮಚಂದ್ರಾಪುರ ಮಠಕ್ಕೆ ಪಿವಿ ಸಿಂಧು ಭೇಟಿ)

ಗೋವುಗಳಿಗೆ ಸಹಜ ಗರ್ಭಧಾರಣೆಗೆ ಅವಕಾಶಕೊಡದೆ, ಕೃತಕ ಗರ್ಭಧಾನ ಮಾಡುವುದು ಗೋವುಗಳ ಹಕ್ಕಿನ ಮೇಲಾಗುತ್ತಿರುವ ಆಕ್ರಮಣವಲ್ಲವೇ, ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ನ್ಯಾಯಾಲಯಗಳ ಮೆಟ್ಟಿಲೇರುವ ನಾವು ಗೋವುಗಳ ಹಕ್ಕನ್ನು ಕಸಿಯುವುದು ಎಷ್ಟು ಸರಿ ಎಂದು ವಿಷಾದ ವ್ಯಕ್ತ ಪಡಿಸಿದ್ದಾರೆ.
ದೇಶೀ ಹಸುಗಳಿಗೆ ಮಿಶ್ರತಳಿಯ ಧಾತುವನ್ನು ಬಳಸಿ ಕೃತಕ ಗರ್ಭಧಾನ ಮಾಡುವುದು ಅವೈಜ್ಞಾನಿಕವಾಗಿದ್ದು, ಸಣ್ಣ ತಳಿಯ ಹಸುಗಳಿಗೆ ದೊಡ್ಡ ಗಾತ್ರದ ಹಸುವಿನಿಂದ ಗರ್ಭವಾದರೆ ಕರು ಹೊರಬರಲಾಗದೇ ಹಸು-ಕರು ಎರಡೂ ದುರ್ಮರಣವನ್ನು ಹೊಂದುತ್ತದೆ.
ಕೃತ್ರಿಮ ಗರ್ಭಧಾರಣೆ ಮಾಡುವಾಗ ಗರ್ಭಕೋಶಕ್ಕೂ ಹಾನಿಯಾಗುವ ಸಂಭವವಿರುತ್ತದೆ, ಇದರಲ್ಲಿ ಯಶಸ್ಸಿನ ಅಂಶವೂ ಸರಾಸರಿ 50% ಮಾತ್ರ ಆಗಿದೆ.
ಹಾಗೆಯೇ ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿರುವ ಬ್ರೂಸೆಲ್ಲೋಸಿಸ್ ಮುಂತಾದ ಅನೇಕ ರೋಗಗಳ ಮೂಲ ಕೃತ್ರಿಮ ಗರ್ಭಧಾರಣೆಯಿಂದ ಹುಟ್ಟಿದ ಮಿಶ್ರತಳಿಗಳಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ಶ್ರೀಗಳು ಹೇಳಿದರು.
ಯಾದಗಿರಿ ಸೊಪ್ಪಿನ ಬಸವೇಶ್ವರ ಮಠದ ಚನ್ನವೀರ ಸ್ವಾಮೀಜಿ ಹಾಗೂ ಗುರುಶಾಂತ ಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಂತಸಂದೇಶ ನೀಡಿ, ರಾಮಚಂದ್ರಾಪುರಮಠದ ಗೋಯಾತ್ರೆಗೆ ನಮ್ಮ ಬೆಂಬಲವಿದ್ದು, ಗೋವಿನ ಕುರಿತಾದ ಈ ಮಹಾ ಆಂದೋಲನಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಕರೆನೀಡಿದರು. (ಕಾಲ ಕೆಟ್ಟಿದೆಯೆಂದು ಕೂರಬೇಡ)

ಯಕ್ಷಗಾನ ಕಲೆಯ ಮೂಲಕ ವಿಶಿಷ್ಟವಾಗಿ ಕಲೆಯ ಮೂಲಕವೂ ಗೋವಿನ ಕುರಿತಾಗಿ ಜಾಗೃತಿ ಮೂಡಿಸಲು ಸಾಧ್ಯ ಎನ್ನುವುದನ್ನು ಸಾಧಿಸಿ ತೋರಿಸಿರುವ ಹೊಸನಗರದ ರಾಮಾರ್ಪಣ ಕಲಾವೇದಿಕೆ, ಮಾರುತೀಪುರ ಹಾಗೂ ಗೋಪ್ರೇಮಿ ನ್ಯಾಯವಾದಿ ಬಿ ಎಸ್ ಪೈ ಅವರಿಗೆ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು.
ಶ್ರೀಭಾರತೀಪ್ರಕಾಶನವು ಹೊರತಂದ ಗೃಹವಾಸ್ತು ಪುಸ್ತಕ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಸಾನ್ನಿಧ್ಯವಹಿಸಿದ್ದ ಸಂತರು ಲೋಕಾರ್ಪಣೆ ಮಾಡಿದರು.
ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿ ಗೋಪ್ರೀತಿಯ ಮಕ್ಕಳು ಎಂಬ ನಾಟಕವನ್ನು ಮಕ್ಕಳು ನಡೆಸಿಕೊಟ್ಟರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications