ಇಂಡಿಗೋ ವಿಮಾನದ ಸೀಟಿನ ಕೆಳಗೆ ಚಿನ್ನದ ಬಿಸ್ಕೆಟ್ ಪತ್ತೆ!
ಬೆಂಗಳೂರು, ಜ. 06: ಭಾರತಕ್ಕೆ ರಫ್ತಾಗುವ ಚಿನ್ನದಲ್ಲಿ ಶೇ. 25 ರಷ್ಟು ಕಳ್ಳ ಮಾರ್ಗದಲ್ಲಿ ಬರುತ್ತದೆ. ಇದರಲ್ಲಿ ಶೇ. 75 ರಷ್ಟು ಚಿನ್ನ ಅರಬ್ ರಾಷ್ಟ್ರಗಳಿಂದ ಭಾರತಕ್ಕೆ ಕಳ್ಳ ಮಾರ್ಗಗಳ ಮೂಲಕ ಬಂದ ಚಿನ್ನವಾಗಿರುತ್ತದೆ. ಇಂಥದ್ದೊಂದು ಆತಂಕಕಾರಿ ಸಂಗತಿ ಕೆನಡಾ ಮೂಲದ ನಡೆಸಿದ ಅಧ್ಯಯನದಲ್ಲಿ ಹೊರ ಬಿದ್ದಿದೆ. ಏನೆಲ್ಲಾ ಕಟ್ಟು ನಿಟ್ಟಿನ ಕ್ರಮ ಜರುಗಿಸಿದರೂ ದುಬೈನಿಂದ ಸ್ಮಗ್ಲಿಂಗ್ ಆಗುವ ಚಿನ್ನದ ಕಳ್ಳದಾರಿಗೆ ಬ್ರೇಕ್ ಬಿದ್ದಿಲ್ಲ!
ಇಷ್ಟೆಲ್ಲಾ ಪೀಠಿಕೆ ಹಿಂದೆ ಒಂದು ಕಾರಣವಿದೆ. ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಸೀಟಿನ ಕೆಳಗೆ ಬಚ್ಚಿಟ್ಟು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಕೋಟ್ಯಂತರ ಮೌಲ್ಯದ 2.8 ಕೆ.ಜಿ. ಚಿನ್ನದ ಬಿಸ್ಕೆಟ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಗೊ ವಿಮಾನದ ಸೀಟಿನ ಕೆಳಗೆ ಚಿನ್ನದ ಬಿಸ್ಕೆಟ್ಗಳನ್ನು ಅಡಗಿಸಿಡಲಾಗಿತ್ತು. ವಿಮಾನ ಸ್ವಚ್ಛಗೊಳಿಸುವ ಸಿಬ್ಬಂದಿ ಮೂಲಕ ಅಕ್ರಮ ಚಿನ್ನವನ್ನು ಹೊರಗೆ ಸಾಗಣೆ ಮಾಡಬೇಕಿತ್ತು.
ದುಬೈನಿಂದ ಅಕ್ರಮ ಸಾಗಣೆ
ಆದರೆ, ಸೀಟಿನ ಕೆಳಗೆ ಸ್ಮಗ್ಲರ್ಸ್ ಬಚ್ಚಿಟ್ಟಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚಿನ್ನ ಜಪ್ತಿ ಮಾಡಿಕೊಂಡಿರುವ ವಿಮಾನ ನಿಲ್ದಾಣದ ಅಧಿಕಾರಿಗಳು ಇದರ ಜಾಡು ಪತ್ತೆಗೆ ಮುಂದಾಗಿದ್ದಾರೆ. ಇದೊಂದಲ್ಲ. ವರ್ಷದಲ್ಲಿ ಕನಿಷ್ಠ ಹತ್ತಕ್ಕೂ ಹೆಚ್ಚು ಪ್ರಕರಣದಲ್ಲಿ ಚಿನ್ನ ಅಕ್ರಮ ಸಾಗಣೆ ಮಾಡುವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ದುಬೈನಿಂದ ಅಕ್ರಮ ಸಾಗಣೆ ಮಾಡುತ್ತಿರುವುದು ವಿಶೇಷ. ಅಂದ ಹಾಗೆ ಇತ್ತೀಚೆಗೆ ಚೆನ್ನೈ ಮೂಲದ ವ್ಯಕ್ತಿಯನ್ನು ಸಹ ಚಿನ್ನದ ಅಕ್ರಮ ಸಾಗಣೆ ಪ್ರಕರಣದಲ್ಲಿ ಬಂಧಿಸಿದ್ದರು.




-
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications