ಮಹಿಳೆಯರೇ ಹುಷಾರ್, ಬೆಂಗಳೂರಲ್ಲಿ ಮತ್ತೆ ಸರಗಳ್ಳತನ
ಬೆಂಗಳೂರು, ಫೆಬ್ರವರಿ, 17: ಮಹಿಳೆಯರೇ ಹುಷಾರ್...! ಕೆಲ ದಿನಗಳಿಂದ ಮರೆಯಾಗಿದ್ದ ಸರಗಳ್ಳರು ಬೆಂಗಳೂರಿನಲ್ಲಿ ಮತ್ತೇ ತಮ್ಮ ಕೈಚಳಕ ತೋರಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಮಾಡಿ ಪರಾರಿಯಾಗಿದ್ದಾರೆ.
ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 55 ವರ್ಷದ ಯಶೋಧಮ್ಮ ಸರ ಕಳೆದುಕೊಂಡವರು. ಬುಧವಾರ ಬೆಳಗ್ಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ಕುತ್ತಿಗೆಯಲ್ಲಿದ್ದ ಸರ ಎಳೆದುಕೊಂಡು ಪರಾರಿಯಾಗಿದ್ದಾರೆ[ಫೆಬ್ರವರಿ 7 ರಂದು ಸರ ಕಳೆದುಕೊಂಡವರ ಪಟ್ಟಿ]

ಘಟನೆ ನಡೆದದ್ದು ಹೇಗೆ?
ಯಶೋಧಮ್ಮ ಬೆಳಗ್ಗೆ 9.30 ರ ಸುಮಾರಿಗೆ ರಸಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಹಿಂದಿನಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆ ಕುತ್ತಿಗೆಗೆ ಕೈ ಹಾಕಿ ಸರ ಎಳೆದುಕೊಂಡು ಕ್ಷಣಮಾತ್ರದಲ್ಲಿ ಪರಾರಿಯಾಗಿದ್ದಾರೆ.[ಭಾನುವಾರವನ್ನೇ ಟಾರ್ಗೆಟ್ ಮಾಡಿಕೊಂಡ ಸರಗಳ್ಳರು]
ಇಷ್ಟು ದಿನ ಮುಂಜಾನೆ ವೇಳೆ ಸರಗಳ್ಳತನ ಪ್ರಕರಣಗಳು ನಡೆಯುತ್ತಿದ್ದವು. ಆದರೆ ಇದೀಗ ಜನರ ಓಡಾಡ ಹೆಚ್ಚಿರುವ ವೇಳೆಯೇ ಅಂದರೆ ಬೆಳಗ್ಗೆ 9.30 ರ ವೇಳೆ ಪ್ರಕರಣ ನಡೆದಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ.
ಹೆಲ್ಮೆಟ್ ಕಡ್ಡಾಯಕ್ಕೂ ನಂಟೆ?
ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದರೆ ಸರಗಳ್ಳತನ ಪ್ರಕರಣ ಹೆಚ್ಚುತ್ತದೆ ಎಂದು ನಾಗರಿಕರು ಆರೋಪಿಸಿದ್ದರು. ಇದೀಗ ಎರಗಳ್ಳತನ ಮಾಡಿರುವ ಆರೋಪಿಗಳು ಸಹ ಹೆಲ್ಮೆಟ್ ಧರಿಸಿಕೊಂಡೇ ಬಂದಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆ ಏನೆನ್ನುತ್ತದೆಯೋ!
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ












Click it and Unblock the Notifications