ಮಹಿಳೆಯರೇ ಹುಷಾರ್, ಬೆಂಗಳೂರಲ್ಲಿ ಮತ್ತೆ ಸರಗಳ್ಳತನ
ಬೆಂಗಳೂರು, ಫೆಬ್ರವರಿ, 17: ಮಹಿಳೆಯರೇ ಹುಷಾರ್...! ಕೆಲ ದಿನಗಳಿಂದ ಮರೆಯಾಗಿದ್ದ ಸರಗಳ್ಳರು ಬೆಂಗಳೂರಿನಲ್ಲಿ ಮತ್ತೇ ತಮ್ಮ ಕೈಚಳಕ ತೋರಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಮಾಡಿ ಪರಾರಿಯಾಗಿದ್ದಾರೆ.
ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 55 ವರ್ಷದ ಯಶೋಧಮ್ಮ ಸರ ಕಳೆದುಕೊಂಡವರು. ಬುಧವಾರ ಬೆಳಗ್ಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ಕುತ್ತಿಗೆಯಲ್ಲಿದ್ದ ಸರ ಎಳೆದುಕೊಂಡು ಪರಾರಿಯಾಗಿದ್ದಾರೆ[ಫೆಬ್ರವರಿ 7 ರಂದು ಸರ ಕಳೆದುಕೊಂಡವರ ಪಟ್ಟಿ]

ಘಟನೆ ನಡೆದದ್ದು ಹೇಗೆ?
ಯಶೋಧಮ್ಮ ಬೆಳಗ್ಗೆ 9.30 ರ ಸುಮಾರಿಗೆ ರಸಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಹಿಂದಿನಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆ ಕುತ್ತಿಗೆಗೆ ಕೈ ಹಾಕಿ ಸರ ಎಳೆದುಕೊಂಡು ಕ್ಷಣಮಾತ್ರದಲ್ಲಿ ಪರಾರಿಯಾಗಿದ್ದಾರೆ.[ಭಾನುವಾರವನ್ನೇ ಟಾರ್ಗೆಟ್ ಮಾಡಿಕೊಂಡ ಸರಗಳ್ಳರು]
ಇಷ್ಟು ದಿನ ಮುಂಜಾನೆ ವೇಳೆ ಸರಗಳ್ಳತನ ಪ್ರಕರಣಗಳು ನಡೆಯುತ್ತಿದ್ದವು. ಆದರೆ ಇದೀಗ ಜನರ ಓಡಾಡ ಹೆಚ್ಚಿರುವ ವೇಳೆಯೇ ಅಂದರೆ ಬೆಳಗ್ಗೆ 9.30 ರ ವೇಳೆ ಪ್ರಕರಣ ನಡೆದಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ.
ಹೆಲ್ಮೆಟ್ ಕಡ್ಡಾಯಕ್ಕೂ ನಂಟೆ?
ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದರೆ ಸರಗಳ್ಳತನ ಪ್ರಕರಣ ಹೆಚ್ಚುತ್ತದೆ ಎಂದು ನಾಗರಿಕರು ಆರೋಪಿಸಿದ್ದರು. ಇದೀಗ ಎರಗಳ್ಳತನ ಮಾಡಿರುವ ಆರೋಪಿಗಳು ಸಹ ಹೆಲ್ಮೆಟ್ ಧರಿಸಿಕೊಂಡೇ ಬಂದಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆ ಏನೆನ್ನುತ್ತದೆಯೋ!
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications