ಬೆಂಗಳೂರು: ಸರಗಳ್ಳರಿಗೆ ಭಾನುವಾರವೂ ರಜೆ ಇಲ್ಲ!
ಬೆಂಗಳೂರು, ಸೆಪ್ಟೆಂಬರ್. 20: ರಾಜಧಾನಿಯಲ್ಲಿ ಸರಗಳ್ಳರ ಹಾವಳಿಗೆ ಬ್ರೇಕ್ ಬಿದ್ದಿಲ್ಲ. ಸೆಪ್ಟೆಂಬರ್ 20, ಭಾನುವಾರ ಮುಂಜಾನೆ ಸರಗಳ್ಳರು ಕೈ ಚಳಕ ತೋರಿಸಿದ್ದಾರೆ.
ಚಂದ್ರಾ ಲೇಔಟ್ ನಲ್ಲಿ ಮನೆ ಮುಂದೆ ನಿಂತಿದ್ದ ಸರಸ್ವತಿ ಎಂಬುವರ ಸರ ಅಪಹರಣ ಮಾಡಲಾಗಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು 60 ಗ್ರಾಂ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದಾರೆ.[ಬೆಂಗಳೂರು: ವಿದ್ಯಾರಣ್ಯಪುರದಲ್ಲಿ 2 ಕಡೆ ಸರಗಳ್ಳತನ]

ಸೆಪ್ಟೆಂಬರ್ 16 ರಂದು ಬಾಲಾಜಿ ಲೇಔಟ್ ನ ಎರಡು ಕಡೆ ಸರಗಳ್ಳತನ ಪ್ರಕರಣ ದಾಖಲಾಗಿತ್ತು. ಅದಕ್ಕೂ ಮುನ್ನ ಸೆಪ್ಟೆಂಬರ್ 9 ಮತ್ತು 10 ರಂದು ನಗರದ ವಿವಿಧೆಡೆ ಕೈಚಳಕ ತೋರಿಸಿದ್ದ ಕಳ್ಳರು ಎರಡೇ ದಿನದಲ್ಲಿ 10 ಕಡೆ ಸರಗಳ್ಳತನ ಮಾಡಿದ್ದರು.
ಸರಗಳ್ಳತನ ತಡೆ ಮತ್ತು ಅಪರಾಧಿಗಳನ್ನು ಹಿಡಿಯಲು ಪೊಲೀಸ್ ಇಲಾಖೆ ವಿಶೇಷ ತಂಡ ರಚನೆಮಾಡಿದ್ದರೂ ಪ್ರಯೋಜನವಾಗಿಲ್ಲ. ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೂಲಕ, ಬ್ಯಾನರ್ ಗಳ ಮೂಲಕವೂ ಸಹ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.[ಬೆಂಗಳೂರು: 2 ದಿನದಲ್ಲಿ 10 ಕಡೆ ಸರಗಳ್ಳರ ಕೈ ಚಳಕ]
ದೇವಾಲಯ ಸರಣಿ ಕಳ್ಳತನ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿವಿಧೆಡೆ ಮೂರು ದೇವಾಲಯಗಳನ್ನು ಕಳ್ಳತನ ಮಾಡಲಾಗಿದೆ. ಶನಿವಾರ ರಾತ್ರಿ ನಡೆದ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ. ಕನಕಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ದೇವಾಲಯದ ಉತ್ಸವ ಮೂರ್ತಿ, ಕಾಣಿಕೆ ಹುಂಡಿ ಸೇರಿದಂತೆ ಆಭರಣಗಳನ್ನು ದೋಚಲಾಗಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್











Click it and Unblock the Notifications