ಜಾಲಹಳ್ಳಿ ಅಯ್ಯಪ್ಪಸ್ವಾಮಿ ದೇವಾಲಯ ಗರ್ಭದಗುಡಿ ಗೋಪುರಕ್ಕೆ ಚಿನ್ನದ ಲೇಪನ..!
ಬೆಂಗಳೂರು, ಮೇ 7: ಬೆಂಗಳೂರು ಜಾಲಹಳ್ಳಿಯಲ್ಲಿರುವ ಅಯ್ಯಪ್ಪ ದೇವಸ್ಥಾನದ 55ನೇ ವಾರ್ಷಿಕೋತ್ಸವದ ಹಿನ್ನೆಲೆ, ಗರ್ಭಗುಡಿಗೆ ಮಾಡಿರುವ ಚಿನ್ನದ ಲೇಪನವನ್ನ ಇಂದು ಲೋಕಾರ್ಪಣೆ ಮಾಡಲಾಯಿತು.
ಕೇರಳದ ಶಬರಿ ಮೆಲೆ ದೇವಾಲಯದ ತಂತ್ರಿ ಬ್ರಹ್ಮಶ್ರೀ ತಾಳಮನ್ ಮಡಮ್ ರಾಜೀ ಅವರು ಧಾರ್ಮಿಕ ಪದ್ಧತಿಯಂತೆ ಕಳಸದ ಪ್ರತಿಷ್ಠಾಪನೆ ಮಾಡಿದರು. 11 ಕೆ.ಜಿ ಚಿನ್ನವನ್ನು ಬಳಸಿಕೊಂಡು ದೇವಾಲದ ಗರ್ಭಗುಡಿಗೆ ಮಾಡಿರುವ ಚಿನ್ನದ ಲೇಪನದ ತಗಡನ್ನ ನೂರಾರು ಅಯ್ಯಪ್ಪ ಭಕ್ತರ ಸಮ್ಮುಕದಲ್ಲಿ ಯಶಸ್ವಿಯಾಗಿ ಅಳವಡಿಕೆ ಮಾಡಲಾಯಿತು.
ದಕ್ಷಿಣ ಭಾರತದಲ್ಲಿ ಕೇರಳದ ಶಬರಿಮಲೆ ಬಿಟ್ಟರೆ ಅತ್ಯಂತ ಪ್ರಸಿದ್ಧ ಪಡೆದಿರುವ ಈ ದೇಗುಲಕ್ಕೆ ದಿನನಿತ್ಯ ಹೆಚ್ಚಿನ ಭಕ್ತರ ದಂಡು ಇಲ್ಲಿಗೆ ಬತರುತ್ತದೆ. ಸುಮಾರು 15 ವರ್ಷಗಳಿಂದ ಚಿನ್ನದ ಲೇಪನ ಮಾಡಿಸುವ ದೇವಸ್ಥಾನದ ಆಡಳಿತ ಮಂಡಳಿಯ ಕನಸು ಇಂದು ನೆರವೇರಿತು. ದೇವಸ್ಥಾನ ಪ್ರತಿಷ್ಠಾಪನೆ ಅಂಗವಾಗಿ 55ನೇ ವಾರ್ಷಿಕೋತ್ಸವದ ಕಾರ್ಯಕ್ರಮ ಬಹಳ ವಿಜೃಂಬಣೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಕೇರಳದ ಶಬರಿ ಮೆಲೆ ದೇವಾಲಯದ ತಂತ್ರಿ ಬ್ರಹ್ಮಶ್ರೀ ತಾಳಮನ್ ಮಡಮ್ ರಾಜೀ ಭಾಗವಹಿಸಿದರು.

ಬೆಂಗಳೂರಿನ ಜಾಲಹಳ್ಳಿ ಪಶ್ಚಿಮದಲ್ಲಿ ಭಾಗದಲ್ಲಿ ಈ ದೇವಾಲಯ ಕೇರಳ ರಾಜ್ಯದ ಹೊರತುಪಡಿಸಿ 1967 ರ ಏಪ್ರಿಲ್ 17 ಬೆಂಗಳೂರಿನಲ್ಲಿ ಸ್ಥಾಪಿತವಾದ ಮೊದಲ ಅಯ್ಯಪ್ಪ ದೇವಸ್ಥಾನ ಇದಾಗಿದೆ. ಜಾಲಹಳ್ಳಿ ಸ್ಥಾಪಿತವಾಗಿರುವ ಈ ದೇಗುಲದಲ್ಲಿ ಧರ್ಮಶಾಸ್ತ ಅಯ್ಯಪ್ಪ ದೇವರ ಭವ್ಯವಾದ ಮತ್ತು ಭಕ್ತರನ್ನ ಬೆರಗುಗೊಳಿಸುವ ಪಂಚಲೋಹದ ವಿಗ್ರಹವನ್ನು ಪ್ರಸಿದ್ಧ ಶಿಲ್ಪಿ ದಿವಂಗತ ಟಿ.ಎಂ. ಚೆಂಗನ್ನೂರಿನ ನೀಲಕಂಠ ಪಣಿಕ್ಕರ್ ಕೆತ್ತಿದ್ದರು.
Recommended Video
ದಕ್ಷಿಣ ಮತ್ತು ಉತ್ತರ ಭಾರತದ ಇತರ ರಾಜ್ಯಗಳಲ್ಲಿ ಮಾತ್ರವಲ್ಲದೆ ಇತರೆ ದೇಶಗಳಲ್ಲಿಯೂ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನಗಳಿದ್ದು, ಸರಿಸುಮಾರು 55 ವರ್ಷಗಳ ಇತಿಹಾಸವುಳ್ಳ ದೇವಸ್ಥಾನ ಇದಾಗಿದೆ. ಪರಿಣಿತ ಮರ ಮತ್ತು ಕಲ್ಲಿನ ಕುಶಲಕರ್ಮಿಗಳ ಅದ್ಭುತವಾದ ದೇವಸ್ತಾನದ ಕಟ್ಟ ನವೀಕರಿಸಿರುವುದು ದೇವಾಲಯದ ಪ್ರತಿಯೊಂದು ರಚನೆಯಲ್ಲಿ ಭಕ್ತರ ಕಣ್ಮನ ಸೆಳೆಯುತ್ತದೆ. ವಿಶ್ವವಿಖ್ಯಾತ ನಿಲಂಬೂರ್ ಅರಣ್ಯದಿಂದ ವಿಶೇಷ ತೇಗದ ಮರದಿಂದ ದೇವಸ್ಥಾನ ನಿರ್ಮಿಸಲಾಗಿದೆ.
-
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಮೇಲುಕೋಟೆ ವೈರಮುಡಿ ಉತ್ಸವ ಮಾರ್ಚ್ 23ರಿಂದ ಆರಂಭ: ಚೆಲುವ ನಾರಾಯಣನ ಕೈಂಕರ್ಯಕ್ಕೆ ಸಕಲ ಸಿದ್ಧತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ











Click it and Unblock the Notifications