Bengaluru Property: ಬಿ ಖಾತಾ ಆಸ್ತಿದಾರರಿಗೆ ಗುಡ್ನ್ಯೂಸ್: ಎ ಖಾತಾ ಪರಿವರ್ತನೆ ಶುಲ್ಕ ರಿಯಾಯಿತಿ, ಹೊಸ ಅಪ್ಡೇಟ್ಸ್
B Khata to A Khata: ಬೆಂಗಳೂರಿನ ಆಸ್ತಿದಾರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಬೆಂಗಳೂರಿನ ಆಸ್ತಿದಾರರಿಗೆ ಹಾಗೂ ಬಿ ಖಾತಾ ಆಸ್ತಿದಾರರಿಗೆ ಮತ್ತೊಂದು ಬಂಪರ್ ಗುಡ್ನ್ಯೂಸ್ ಸಿಕ್ಕಂತೆ ಆಗಿದೆ. ಆಸ್ತಿಗಳನ್ನು ಬಿ - ಖಾತಾದಿಂದ ಎ - ಖಾತಾ ಆಸ್ತಿ ಪರಿವರ್ತನೆಗೆ ಸರ್ಕಾರವು ವಿನಾಯಿತಿ ನೀಡಿದೆ. ಬಿ - ಖಾತಾದಿಂದ ಎ- ಖಾತಾ ಆಸ್ತಿ ಪರಿವರ್ತನೆಗೆ ಗೈಡ್ಲೈನ್ಸ್ ವ್ಯಾಲ್ಯೂ ಮೊತ್ತವನ್ನು ಶೇ 5ರಿಂದ ಶೇ 2ಕ್ಕೆ ಇಳಿಸಲಾಗಿದೆ. ಇದೀಗ ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಇನ್ನೆಷ್ಟು ದಿನ ಬಾಕಿ ಉಳಿದಿದೆ ಎನ್ನುವುದು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ.
ಕರ್ನಾಟಕ ಸರ್ಕಾರ - ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಗುಡ್ನ್ಯೂಸ್ ಕೊಡಲಾಗಿದೆ. ಬೆಂಗಳೂರು ನಗರ ಪಾಲಿಕೆಗಳಾದ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಹಾಗೂ ಕೇಂದ್ರ ಬೆಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ ಖಾತಾದಿಂದ ಎ ಖಾತಾ ಪರಿವರ್ತಿಸಲು ಕೇವಲ ನಿಗದಿತ ಶುಲ್ಕ ಶೇ. 5%ರ ಬದಲಿಗೆ ಶೇ.2% ಇರಲಿದೆ. ಈ ಸುವರ್ಣ ಅವಕಾಶವನ್ನು ಕಳೆದುಕೊಳ್ಳಬೇಡಿ ಈಗಲೇ ಅರ್ಜಿ ಸಲ್ಲಿಸಿ BBMP eAasthi.karnataka.gov.in/BtoAKhata ಎಂದು ಹೇಳಲಾಗಿದೆ.

ಶೇ.60ರಷ್ಟು ಉಳಿತಾಯ
ಬಿ ಖಾತಾದಿಂದ ಎ ಖಾತಾ ಆಸ್ತಿ ಪರಿವರ್ತನೆಯನ್ನು ಈಗ ಮಾಡಿಕೊಂಡರೆ, ಆಸ್ತಿದಾರರಿಗೆ ಶೇ 60ರಷ್ಟು ಉಳಿತಾಯ ಆಗಲಿದೆ. ಈ ರಿಯಾಯಿತಿಯು 23.08.2026 ರವರೆಗೆ ಮಾತ್ರ ಲಭ್ಯ ಇರಲಿದೆ. ಈ ಮೊತ್ತವು ಕಳೆದ ಬಾರಿ ಸರ್ಕಾರದ ನೀಡಿದ್ದ ರಿಯಾಯಿತಿಗಿಂತಲೂ ಹೆಚ್ಚಾಗಿದೆ. ಕಳೆದ ಬಾರಿ ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶೇ 5ರಷ್ಟು ಶುಲ್ಕವನ್ನು ವಿಧಿಸಿತ್ತು. ಆದರೆ ಇದೀಗ ಆಸ್ತಿಗಳ ಪರಿವರ್ತನೆಗೆ ಕರ್ನಾಟಕ ಸರ್ಕಾರವು ಶೇ 2 ಶುಲ್ಕ ವಿಧಿಸಿದೆ.
ಆಸ್ತಿಗಳ ಡಿಜಿಟಲೀಕರಣ
ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿಗಳ ಡಿಜಿಟಲೀಕರಣಕ್ಕೆ ಸಂಬಂಧಿಸಿದಂತೆಯೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಬೆಂಗಳೂರಿನ ಆಸ್ತಿ ಮಾಲೀಕರ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಇ ಖಾತ ಮೂಲಕ ಭೂ ಗ್ಯಾರಂಟಿ ನೀಡಲಾಗಿದೆ. ಈ ನಗರಕ್ಕೆ ಬಂದು ಕಷ್ಟ ಪಟ್ಟು ಆಸ್ತಿ ಸಂಪಾದಿಸಿದ್ದಾರೆ ಅವರ ಪರವಾಗಿ ನಮ್ಮ ಸರ್ಕಾರ ನಿಂತಿದೆ. ಬಿ ಖಾತೆಯಿಂದ ಎ ಖಾತೆ ಮಾಡಿಕೊಡಲಾಗುತ್ತಿದೆ. ಕಷ್ಟಕಟ್ಟು ಆಸ್ತಿ ಸಂಪಾದಿಸಿದವರ ಪರವಾಗಿ ನಮ್ಮ ಸರ್ಕಾರವಿದೆ ಎಂದು ಅವರು ಹೇಳಿದ್ದಾರೆ.
ನಗರದ ಅಭಿವೃದ್ಧಿಗೆ 1.25 ಲಕ್ಷ ಕೋಟಿ ಯೋಜನೆ
ಬೆಂಗಳೂರು ನಗರದ ಅಭಿವೃದ್ದಿಗೆ 1.25 ಲಕ್ಷ ಕೋಟಿ ರೂ. ಕಾರ್ಯಕ್ರಮ ರೂಪಿಸಿದ್ದೇನೆ. ಕೆಂಪೇಗೌಡರು ಕೇವಲ ಒಕ್ಕಲಿಗರ ಆಸ್ತಿಯಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸೇರಿಸಿ ಈ ಕಾರ್ಯಕ್ರಮ ರೂಪಿಸಬೇಕು. ಆಗ ಮಾತ್ರ ಕೆಂಪೇಗೌಡರಿಗೆ ಗೌರವ ಸಲ್ಲಿಸಿದಂತೆ ಆಗುತ್ತದೆ ಎಂದೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.













Click it and Unblock the Notifications