Get Updates
Get notified of breaking news, exclusive insights, and must-see stories!

Good News: ಜಾತಿ ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಂಡವರಿಗೆ ಗೌರವಧನ ಬಿಡುಗಡೆ ಕುರಿತು ಗುಡ್‌ ನ್ಯೂಸ್‌

Good News: ಇತ್ತೀಚೆಗಷ್ಟೇ ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆ ಮಾಡಿಸಲಾಗಿತ್ತು. ಅದರಲ್ಲೂ ಬೆಂಗಳೂರಿನಲ್ಲಿ ಈ ಕಾರ್ಯಕ್ಕೆ ಬಳಸಿಕೊಂಡಿದ್ದವರಿಗೆ ಕೊನೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಗೌರವಧನ ವಿತರಣೆ ಕುರಿತು ಗುಡ್‌ ನ್ಯೂಸ್‌ ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದ ಮೇರೆಗೆ ಇತ್ತೀಚೆಗಷ್ಟೇ ಜಾತಿ ಗಣತಿ ಸಮೀಕ್ಷೆಯನ್ನು ನಡೆಸಲಾಗಿತ್ತು. ಇದರಲ್ಲಿ ಭಾಗವಹಿಸಿದ ಸಮೀಕ್ಷಾದಾರರು ಹಾಗೂ ಗಣತಿದಾರರಿಗೆ ಗೌರವಧನ ವಿತರಣೆ ಮಾಡುವ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

Good News for Caste Census Workers Greater Bengaluru Authority Releases 23 87 Cr Honorarium Fund

ಈ ಸಂಬಂಧ ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳಿಗೆ ಒಟ್ಟು ₹23,87,47,200 ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಗಣತಿದಾರರಿಗೆ ಸಹಾಯಧನದ ಜೊತೆಗೆ ಪ್ರಮಾಣ ಪತ್ರ ಕಡ್ಡಾಯಗೊಳಿಸಿದೆ. ಜಿಬಿಎಯ ಎಸ್‌ಬಿಐ ಖಾತೆಯಿಂದ ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ಪಾಲಿಕೆಗಳಿಗೆ ಈ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಹಾಗಾದ್ರೆ ಯಾವ ಪಾಲಿಕೆಗೆ ಎಷ್ಟು ಅನುದಾನ ನೀಡಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಇನ್ನೂ ಈ ಹಣವನ್ನು ಜಾತಿ ಗಣತಿ ಸಮೀಕ್ಷೆ ನಡೆಸಿದ ಗಣತಿದಾರರಿಗೆ ಗೌರವಧನವಾಗಿ ಪಾವತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೆ, ಸಮೀಕ್ಷೆಯಲ್ಲಿ ಭಾಗವಹಿಸಿದವರಿಗೆ ಎಲ್ಲಾ ಗಣತಿದಾರರಿಗೆ ಪ್ರಮಾಣಪತ್ರ ವಿತರಣೆ ಕಡ್ಡಾಯ ಎಂದು ಜಿಬಿಎ ಸೂಚನೆ ನೀಡಿದ.

ಯಾವ ಪಾಲಿಕೆಗೆ ಎಷ್ಟು ಹಣ ಬಿಡುಗಡೆ?

* ಬೆಂಗಳೂರು ಕೇಂದ್ರ ಪಾಲಿಕೆ - 2,68,81,000 ರೂಪಾಯಿ
* ಬೆಂಗಳೂರು ಪೂರ್ವ ಪಾಲಿಕೆ - 4,25,04,850 ರೂಪಾಯಿ
* ಬೆಂಗಳೂರು ಪಶ್ಚಿಮ ಪಾಲಿಕೆ - 6,80,73,550 ರೂಪಾಯಿ
* ಬೆಂಗಳೂರು ಉತ್ತರ ಪಾಲಿಕೆ - 5,24,11,300 ರೂಪಾಯಿ
* ಬೆಂಗಳೂರು ದಕ್ಷಿಣ ಪಾಲಿಕೆ - 4,88,76,500 ರೂಪಾಯಿ

ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಇದೇ ಕಾರಣದಿಂದ ರಾಜ್ಯದಲ್ಲಿ ಬೇಸಿಗೆ ರಜೆಯನ್ನು ಸಹ ವಿಸ್ತರಣೆ ಮಾಡಲಾಗಿತ್ತು. ಈ ವೇಳೆ ರಜೆ ಸಿಕ್ಕಿದ್ದು ಮಾತ್ರ ವಿದ್ಯಾರ್ಥಿಗಳಿಗೆ ಅಷ್ಟೇ. ಆದರೆ, ಶಿಕ್ಷಕರಿಗೆ ಯಾವುದೇ ರಜೆಯನ್ನು ನೀಡಿರಲಿಲ್ಲ. ಬದಲಾಗಿ ಅವರನ್ನು ಸಮೀಕ್ಷೆಗೆ ಬಳಸಿಕೊಳ್ಳಲಾಗಿತ್ತು. ಇದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು. ವಿಪಕ್ಷದವರು ಸರ್ಕಾರ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಂಡು ಅವರಿಗೆ ಗೌರವಧನ ನೀಡುವುದಿಲ್ಲ. ರಜೆ ಕೂಡ ಕೊಡುವುದಿಲ್ಲ ಎಂದು ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದರು.

ಇದಕ್ಕೆ ಸ್ಪಷ್ಟನೆ ನೀಡಿದ್ದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನಾವು ಗೌರವಧನವನ್ನು ನಿಲ್ಲಿಸುವುದಿಲ್ಲ. ಕೊಟ್ಟೇ ಕೊಡುತ್ತೇವೆ. ಅವರಿಗೆ ಸಿಗಬೇಕಾದ ಗೌರವ ಧನ ದೊರೆಯುತ್ತದೆ ಎಂದು ತಿಳಿಸಿತ್ತು. ಅದರಂತೆಯೇ ಇದೀಗ ಬೆಂಗಳೂರೂ ವ್ಯಾಪ್ತಿಯಲ್ಲಿ ಬರುವ ಐದು ಪಾಲಿಕೆಗಳಿಗೆ ಜಿಬಿಎ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ಸಮೀಕ್ಷೆಯಲ್ಲಿ ಪಾಲ್ಗೊಂಡವರಿಗೆ ನೀಡಬೇಕು. ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಿಕೊಳ್ಳುವಂತಿಲ್ಲ ಅಂತಲೂ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಹೀಗೆ ಗೌರವಧನ ನಿರೀಕ್ಷೆಯಲ್ಲಿದ್ದವರಿಗೆ ಜಿಬಿಎ ಗುಡ್‌ ನ್ಯೂಸ್‌ ಕೊಟ್ಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+