Bengaluru: ಬೆಂಗಳೂರಿನ ಈ ವ್ಯಾಪಾರಿಗಳಿಗೆ ಬಿಬಿಎಂಪಿಯಿಂದ ಗುಡ್ನ್ಯೂಸ್
ಬೃಹತ್ ಬೆಂಗಳೂರು ಮಹಾನಗರ ( ಬಿಬಿಎಂಪಿ) ಪಾಲಿಕೆಯು ಬೀದಿಬದಿ ವ್ಯಾಪಾರಿಗಳಿಗೆ ಗುಡ್ನ್ಯೂಸ್ವೊಂದನ್ನು ನೀಡಿದೆ. ಬೆಂಗಳೂರಿನಲ್ಲಿ ಸಾವಿರಾರು ಜನ ಬೀದಿ ವ್ಯಾಪಾರಿಗಳು ಇದ್ದಾರೆ. ಅವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿಶೇಷ ಸೌಲಭ್ಯಗಳೂ ಸಹ ಇವೆ. ಆದರೆ, ಕೆಲವೊಂದು ಸೌಲಭ್ಯಗಳು ಅವರಿಗೆ ಸಿಗುತ್ತಿಲ್ಲ. ಅದಕ್ಕೆ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿಯ ಈ ಹೊಸ ಕ್ರಮದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಲಾಭವಾಗಲಿದೆ.
ಬೆಂಗಳೂರಿನಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಬೇಕು ಎನ್ನುವ ಒತ್ತಾಯ ಹಲವು ವರ್ಷಗಳಿಂದ ಇದೆ. ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯು ಹಲವು ಕಾರಣಗಳಿಂದ ಮುಂದೂಡಿಕೆಯಾಗುತ್ತಲ್ಲೇ ಇತ್ತು. ಇದೀಗ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಮಾಡಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರಿನಲ್ಲಿ ಒಟ್ಟು 8 ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಗೆ ಸಂಬಂಧಿಸಿದಂತೆ ಹಲವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಸಮೀಕ್ಷೆಗೆ ಬೇಕಾದ ತರಬೇತಿ ಈಗಾಗಲೇ ನೀಡಲಾಗಿದೆ. ಅಲ್ಲದೇ ಸಮೀಕ್ಷೆ ವೇಳೆ ಬಳಸುವ ತಂತ್ರಜ್ಞಾನ ಸೌಲಭ್ಯವನ್ನೂ ನೀಡಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎರಡು ವರ್ಷಗಳಿಂದ ಸ್ಥಗಿತವಾಗಿದ್ದ ಸರ್ವೇ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯು ಕಳೆದ ಎರಡು ವರ್ಷಗಳಿಂದ ಸ್ಥಗಿತವಾಗಿತ್ತು. 2017ರಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆದಿತ್ತು. ಆದರೆ, ಪೂರ್ಣ ಪ್ರಮಾಣದಲ್ಲಿ ಆಗಿರಲಿಲ್ಲ. ಬೀದಿ ಬದಿ ವ್ಯಾಪಾರಿಗಳು ಎಲ್ಲೆಲ್ಲಿ ಇದ್ದಾರೆ, ಎಷ್ಟು ಸಂಖ್ಯೆಯಲ್ಲಿ ಇದ್ದಾರೆ ಎನ್ನುವ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಸ್ಥಗಿತವಾಗಿದ್ದರಿಂದ ಬೀದಿ ಬದಿ ವ್ಯಾಪಾರಿಗಳು ಸಮಸ್ಯೆ ಎದುರಿಸಿದ್ದರು. ಬೀದಿ ಬದಿ ವ್ಯಾಪಾರಿಗಳ ವಲಯಗಳನ್ನು ಗುರುತಿಸದೆ ಹಾಗೂ ಸಮೀಕ್ಷೆ ಮಾಡದೆ ಅವರನ್ನು ಸ್ಥಳಾಂತರಿಸುವಂತಿಲ್ಲ ಎನ್ನುವ ನಿಯಮ ಇದೆ. ಕಳೆದ ಎರಡು ವರ್ಷಗಳ ಹಿಂದೆ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಅಂದಾಜು 25,000 ಸಾವಿರ ಬೀದಿ ವ್ಯಾಪಾರಿಗಳು ಬೆಂಗಳೂರಿನಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ, 1,00,000 (ಒಂದು ಲಕ್ಷಕ್ಕೂ)ಕ್ಕೂ ಹೆಚ್ಚು ಜನ ಬೀದಿ ಬದಿ ವ್ಯಾಪಾರಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಸಮೀಕ್ಷೆ ನಡೆಸಿದವರಲ್ಲಿ ಕೇವಲ 13,000 ಜನರಿಗೆ ಮಾತ್ರ ಪ್ರಮಾಣ (ಬೀದಿಬದಿ) ಪತ್ರಗಳನ್ನು ನೀಡಲಾಗಿದೆ ಎನ್ನಲಾಗಿದೆ.
ಶೀಘ್ರ ಸಮೀಕ್ಷೆ ಮುಕ್ತಾಯ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ (ಕಲ್ಯಾಣ) ಸೂರಳ್ಕರ್ ವಿಕಾಸ್ ಕಿಶೋರ್ ಅವರು , ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಯು ಒಂದು ತಿಂಗಳು ಅಥವಾ ಒಂದೂವರೆ (30 ಅಥವಾ 45 ದಿನಗಳಲ್ಲಿ) ತಿಂಗಳಿನಲ್ಲಿ ಮುಕ್ತಾಯವಾಗಲಿದೆ ಎಂದಿದ್ದಾರೆ.
ಪಿ-ಎಂ ಸ್ವನಿಧಿ: ಬೀದಿ ಬದಿ ವ್ಯಾಪಾರಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಪಿಎಂ ಸ್ವ- ನಿಧಿ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳಿಗೆ ಕೈಗೆಟಕುವ ದರದಲ್ಲಿ ಕಿರು ಸಾಲ ಸೌಲಭ್ಯ ನೀಡಲಾಗುತ್ತಿದೆ. ರಸ್ತೆಬದಿ ವ್ಯಾಪಾರಿಗಳಿಗೆ 10,000 (ಹತ್ತು ಸಾವಿರ) ಸಾವಿರ ರೂಪಾಯಿಯ ವರೆಗೆ ಸಾಲ ಸೌಲಭ್ಯ ಸಿಗಲಿದೆ. ನಿಯಮಿತ ಸಾಲ ಮರುಪಾವತಿಗೆ ಉತ್ತೇಜಿಸಲಾಗುತ್ತದೆ ಹಾಗೂ ಡಿಜಿಟಲ್ ವಹಿವಾಟಿಗೆ ಉತ್ತೇಜನ ನೀಡಲಾಗುತ್ತಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications