ಬೆಂಗಳೂರಿನ ಘನತೆ ಕುಸಿದಿದೆ: ಗೂಗಲ್ ಟೆಕ್ ಹಬ್ ಆಂಧ್ರ ಪಾಲಾಗಿದೆ: ವಿಜಯೇಂದ್ರ
ಬೆಂಗಳೂರು, ಅಕ್ಟೋಬರ್ 15: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಇದ್ದ ಘನತೆ, ಆಕರ್ಷಣೆಯು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಲಕ್ಷಾಂತರ ವಿದ್ಯಾವಂತ ನಿರುದ್ಯೋಗಿಗಳ ಉದ್ಯೋಗ ಸೃಷ್ಟಿಯ ಬೆಟ್ಟ ಕರಗುತ್ತಿದೆ, ಯುವ ಜನರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಅದಾನಿ ಗ್ರೂಪ್ ಸಹಯೋಗದಲ್ಲಿ ಗೂಗಲ್ ಕಂಪನಿಯು ಆಂಧ್ರಪ್ರದೇಶದಲ್ಲಿ ಬರೋಬ್ಬರಿ 1.3 ಕೋಟಿ ರೂಪಾಯಿ ಹೂಡಿಕೆಯಡಿ AI ಟೆಕ್ ಹಬ್ ಕ್ಯಾಂಪಸ್ ನಿರ್ಮಿಸಲು ಮುಂದಾಗಿದೆ. ಇದರಿಂದ ಕರ್ನಾಟಕಕ್ಕೆ ಸಾಕಷ್ಟು ನಷ್ಟವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬೆಳವಣಿಗೆಗೆ ಸಂಬಂದಿಸಿದಂತೆ ವಿಜಯೇಂದ್ರ ಅವರು ಎಕ್ಸ್ ಪೋಸ್ಟ್ ಮಾಡಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘನತೆ ಕುಸಿಯುತ್ತಿದೆ. ಅಲ್ಲದೇ ಎಲ್ಲೆಂದರಲ್ಲಿ ಗುಂಡಿ ಬಿದ್ದ ರಾಜಧಾನಿಯ ಪರಿಸ್ಥಿತಿಗೆ "ಅಂತಾರಾಷ್ಟ್ರೀಯ ಉದ್ಯಮಗಳು ಬೆಂಗಳೂರಿನಿಂದ ವಿಮುಖವಾಗುತ್ತಿವೆ'. ರಾಜ್ಯಕ್ಕೆ ಬರಬೇಕಿದ್ದ ಜಾಗತಿಕ ದಿಗ್ಗಜ Google ಸಂಸ್ಥೆಯ ಬರೋಬ್ಬರಿ 30,000 ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವ ₹1.3 ಲಕ್ಷ ಕೋಟಿ ರೂ ಹೂಡಿಕೆ ನೆರೆ ರಾಜ್ಯ ಆಂಧ್ರ ಪ್ರದೇಶದ ಪಾಲಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ವಿಶ್ವದ ಜನರನ್ನು ಸೆಳೆಯುತ್ತಿದ್ದ ಬೆಂಗಳೂರನ್ನು "ಗುಂಡಿಗಳ ಬೆಂಗಳೂರು' ಎಂಬ ಅಪಖ್ಯಾತಿ ಅಂಟಿಸಿರುವ ಈ ಸರ್ಕಾರದ ನಡೆಯಿಂದಾಗಿ ಹಾಗೂ ಬೆಂಗಳೂರು ಉಸ್ತುವಾರಿ ಹೊತ್ತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಚ್ಚಾಶಕ್ತಿ ಹಾಗೂ ವೈಫಲ್ಯದ ಕಾರಣದಿಂದಾಗಿ ಕನ್ನಡಿಗರಿಗೆ ಸಿಗಬೇಕಿದ್ದ ಸಾವಿರಾರು ಉದ್ಯೋಗಗಳು ನೆರೆ ರಾಜ್ಯದ ಪಾಲಾಗುತ್ತಿವೆ.
ಅಭಿವೃದ್ಧಿಯನ್ನು ಸಂಪೂರ್ಣ ಮರೆತ ಕಾಂಗ್ರೆಸ್ ಸರ್ಕಾರ ಕನಿಷ್ಠ ಬಂಡವಾಳ ಹೂಡುವ ಉದ್ಯಮ ಕ್ಷೇತ್ರವನ್ನೂ ಹಿಡಿದಿಟ್ಟುಕೊಳ್ಳುವ ಪ್ರಾಮಾಣಿಕ ಕಾಳಜಿಯ ಪ್ರತೀಕವಾಗಿ, ಮೂಲಭೂತ ಸೌಕರ್ಯಗಳನ್ನೂ ಕಲ್ಪಿಸುವಲ್ಲಿಯೂ ವಿಫಲವಾಗಿರುವುದು ಕರ್ನಾಟಕ ರಾಜ್ಯದ ದುರಂತವೇ ಸರಿ ಎಂದು ದೂರಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications