ಭಾರಿ ಅಪಾಯದ ಸ್ಥಿತಿಯಲ್ಲಿ ಬೆಂಗಳೂರಿನ ಗೊಟ್ಟಿಗೆರೆ ಕೆರೆ
ಬೆಂಗಳೂರು, ಡಿ.18: ಸುಮಾರು 500 ವರ್ಷಗಳಷ್ಟು ಹಳೆಯದಾದ ಗೊಟ್ಟಿಗೆರೆ ಕೆರೆ ಈಗ ಬೆಂಗಳೂರು-ಮೈಸೂರು ನೈಸ್ ಪೆರಿಫೆರಲ್ ರಸ್ತೆಗೆ ತಾಗಿಕೊಂಡಿರುವ ಬಸವಪುರ ಹಳ್ಳಿಯಿಂದ ಸಂಸ್ಕರಣೆಗೊಳ್ಳದೆ ಬರುವ ಚರಂಡಿ ನೀರಿನಿಂದಾಗಿ ಭಾರಿ ಅಪಾಯವನ್ನು ಎದುರಿಸುತ್ತಿದೆ.

ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ನಿವಾಸಿಗಳು ಈಗ ಕೆರೆ ಸಂರಕ್ಷಣೆ ನಡೆಸಬೇಕು ಮತ್ತು ಇದನ್ನು ಮೂಲಸ್ವರೂಪದಲ್ಲೇ ಉಳಿಸಬೇಕೆಂದು ಧ್ವನಿಯೆತ್ತಿದ್ದಾರೆ. ಜತೆಗೆ, ಅವರು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ ಪಿಸಿಬಿ)ಗೆ ದೂರು ದಾಖಲಿಸಿದ್ದಾರೆ. ಇದೀಗ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.

ಕೆಎಸ್ ಪಿಸಿಬಿ ಈಗ ಜಲ (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ ಉಲ್ಲಂಘನೆಗಾಗಿ ಬಿಡಬ್ಲ್ಯೂಎಸ್ಎಸ್ ಬಿ ಮುಖ್ಯ ಎಂಜಿನಿಯರ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಗೊಟ್ಟಿಗೆರೆ ನಿವಾಸಿಗಳ ಪ್ರಕಾರ, ಬಸವಪುರ ಗ್ರಾಮದಲ್ಲಿ ಬಿಡಬ್ಲ್ಯೂಎಸ್ಎಸ್ ಬಿ ಕೈಗೆತ್ತಿಕೊಂಡಿರುವ, ನೀರಿನ ಮತ್ತು ನೆಲದಡಿಯ ಪೈಪ್ ಲೈನ್ ತ್ಯಾಜ್ಯ ಔಟ್ ಲೆಟ್ ನಿಂದ ತ್ಯಾಜ್ಯ ಸಂಸ್ಕರಣಾ ಘಟಕ (ಎಸ್ ಟಿಪಿ)ಕ್ಕೆ ಜೋಡಣೆಯಾಗುವುದಿಲ್ಲ.

ಭೂಗತ ಚರಂಡಿ ವ್ಯವಸ್ಥೆಯು ಸಂಸ್ಕರಣಾ ಘಟಕವನ್ನೂ ಹೊಂದಿರಬೇಕು ಎಂದು ಅವರು ಬೊಟ್ಟು ಮಾಡುತ್ತಾರೆ. ಭೂಗತ ಚರಂಡಿ ವ್ಯವಸ್ಥೆಯು ಎಸ್ ಟಿಪಿಗೆ ಜೋಡಣೆಯಾದ ಕಾರಣ, ಸಂಸ್ಕರಣಗೊಳ್ಳದ ತ್ಯಾಜ್ಯ ನೀರು ಗೊಟ್ಟಿಗೆರೆ ಕೆರೆಯನ್ನು ಸೇರುತ್ತಿದೆ.
ಈ ಸಮಸ್ಯೆಯನ್ನು ನಿವಾರಿಸಲು ಬಿಡಬ್ಲ್ಯೂಎಸ್ಎಸ್ ಬಿ ಮತ್ತು ಬಿಬಿಎಂಪಿ ತಕ್ಷಣವೇ ಮುಂದೆ ಬರಬೇಕು ಎಂದು ಕೆಎಸ್ ಪಿಸಿಬಿ ಅಧಿಕಾರಿಗಳು ಹೇಳುತ್ತಾರೆ. 500 ವರ್ಷಗಳ ಹಳೆಯ ಗೊಟ್ಟಿಗೆರೆ ಕೆರೆಯು ಪ್ರಾಣಿ ಮತ್ತು ಸಸ್ಯ ಸಂಕುಲದ ಬಹುದೊಡ್ಡ ನೀರಿನ ಮೂಲವಾಗಿದೆ. ಇದಿಷ್ಟೇ ಅಲ್ಲದೆ ಈ ಕೆರೆಯು ಅಂತರ್ಜಲ ಮರುಪೂರಣ ವ್ಯವಸ್ಥೆಗೂ ಕೊಡುಗೆ ನೀಡುತ್ತದೆ ಎಂದು ಗೊಟ್ಟಿಗೆರೆ ನಿವಾಸಿಗಳು ಬೊಟ್ಟು ಮಾಡುತ್ತಾರೆ.

ಅವರ ಪ್ರಕಾರ, ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ನೇತೃತ್ವದ ಸಮಿತಿಯು ಗೊಟ್ಟಿಗೆರೆ ಕೆರೆಯ ಅಭಿವೃದ್ಧಿಗೆ ನೀಡಿದ ಶಿಫಾರಸುಗಳು ಇನ್ನೂ ಜಾರಿಗೆ ಬಂದಿಲ್ಲ. 2011ರಲ್ಲಿ ನಗರದ ಕೆರೆಗಳು ಕಣ್ಮರೆಯಾಗುತ್ತಿರುವ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ಕರ್ನಾಟಕ ಉಚ್ಛ ನ್ಯಾಯಾಲಯವು ನಗರದ ಕೆರೆಗಳನ್ನು ಸಂರಕ್ಷಿಸುವ ಸಂಬಂಧ ಮಾರ್ಗದರ್ಶಿ ಸೂತ್ರ ರಚಿಸಲು ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು.

ಜಲ ಸಂಪನ್ಮೂಲವನ್ನು ಸ್ವಚ್ಛಗೊಳಿಸುವ ಅಗತ್ಯವಿರುವುದರಿಂದ ಸ್ಥಳೀಯಾಡಳಿತದ ಅಧಿಕಾರಿಗಳು ಈ ಶಿಫಾರಸುಗಳನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಗೊಟ್ಟಿಗೆರೆ ನಿವಾಸಿಗಳು ಬಯಸಿದ್ದಾರೆ. ಗೊಟ್ಟಿಗೆರೆ ಕೆರೆಯನ್ನು ರಕ್ಷಿಸುವ ಸಲುವಾಗಿ ನೈಸ್ ಎಕ್ಸ್ ಪ್ರೆಸ್ ವೇಯ ಮಾರ್ಗ ಬದಲಾಯಿಸಲು ತ್ವರಿತವಾಗಿ ಕಾರ್ಯ ಕೈಗೊಂಡಿದ್ದ ಪರಿಸರ ಸಂಘಟನೆಗಳು ಹಾಗೂ ಎನ್ ಜಿಒಗಳು ಈಗ ಗೊಟ್ಟಿಗೆರೆ ಕೆರೆಯ ಸ್ವರೂಪವನ್ನು ಹಾಗೆಯೇ ಉಳಿಸಿಕೊಳ್ಳುವ ಈ ವಿಷಯದಲ್ಲೂ ಹೋರಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. (ಒನ್ಇಂಡಿಯಾ ಕನ್ನಡ)
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications