ಗೋಸ್ವರ್ಗ ಸಂವಾದ - ಗೋಸಂಪದ ಸಮರ್ಪಣೆ, ಬೆಂಗಳೂರಿನಲ್ಲಿ
ಬೆಂಗಳೂರು, ಜುಲೈ 18: ಗೋವುಗಳಿಗೆ ಸಹಜ ಜೀವನ ಕಲ್ಪಿಸುವ ಪರಿಕಲ್ಪನೆಯಲ್ಲಿ, ವಿಶಿಷ್ಟ ಗೋಧಾಮ "ಗೋಸ್ವರ್ಗ"ವನ್ನು ರಾಘವೇಶ್ವರಭಾರತೀ ಶ್ರೀಗಳು ಪರಿಕಲ್ಪಿಸಿ, ಉತ್ತರಕನ್ನಡದ ಭಾನ್ಕುಳಿಯಲ್ಲಿ ಸಾಕಾರಗೊಳಿಸಿದ್ದು, "ಗೋಸ್ವರ್ಗ"ದ ಕುರಿತಾದ ಸಂವಾದ ಕಾರ್ಯಕ್ರಮ ಭಾನುವಾರ (ಜುಲೈ 22) ಬೆಂಗಳೂರಿನಲ್ಲಿ ನಡೆಯಲಿದೆ.
ವಿಶಿಷ್ಟ ಪರಿಕಲ್ಪನೆಯ ಗೋಸ್ವರ್ಗದ ಕುರಿತಾದ ವಿಚಾರ ವಿನಿಮಯ ಕಾರ್ಯಕ್ರಮ "ಗೋಸ್ವರ್ಗ ಸಂವಾದ - ಗೋಸಂಪದ ಸಮರ್ಪಣೆ" ಕಾರ್ಯಕ್ರಮ ವಿಜಯನಗರದ ಆರ್ ಪಿ ಸಿ ಬಡಾವಣೆಯಲ್ಲಿರುವ ಶ್ರೀಭಾರತೀ ವಿದ್ಯಾಲಯದಲ್ಲಿ ಭಾನುವಾರ 3.00 ಗಂಟೆಗೆ ನಡೆಯಲಿದ್ದು, ಗೋಸ್ವರ್ಗದ ಕುರಿತಾಗಿ ಶ್ರೀಗಳು ಮಾಹಿತಿ ನೀಡಲಿದ್ದು, ಆನಂತರ ಆ ಕುರಿತಾಗಿ ಪ್ರಶ್ನೋತ್ತರಗಳ ಸಂವಾದ ಕಾರ್ಯಕ್ರಮ ನಡೆಯಲಿದೆ.
ಸಹಸ್ರ ಗೋವುಗಳ ಸ್ವಚ್ಛಂದ ಸಾಮ್ರಾಜ್ಯ ಎಂಬ ಪರಿಕಲ್ಪನೆಯಲ್ಲಿ ಗೋಸ್ವರ್ಗವನ್ನು ನಿರ್ಮಿಸಲಾಗಿದ್ದು, ಇಲ್ಲಿ ಗೋವುಗಳಿಗೆ ಯಾವುದೇ ಬಂಧನವಿಲ್ಲದೇ ಇಚ್ಚೆಗನುಸಾರ ಸಂಚರಿಸುವ , ನೆರಳು - ಬಿಸಿಲಿನಲ್ಲಿ ವಿಹರಿಸುವ ವ್ಯವಸ್ಥೆ ಮಾಡಲಾಗಿದ್ದು, 24/7 ನೀರು ಹಾಗೂ ಆಹಾರ ಲಭ್ಯವಿರುವಂತೆ ಮಾಡಲಾಗಿದೆ.

ತಾಯಿಯೊಂದಿಗೆ ಕರುವಿರಲು ಅವಕಾಶ ಸೇರಿದಂತೆ ಗೋವುಗಳಿಗೆ ಸಹಜ ಜೀವನದ ಅವಕಾಶವನ್ನು ಕಲ್ಪಿಸಲಾಗಿದೆ. ಅತ್ಯಾಧುನಿಕ ಗೋಸಂಶೋಧನಾ ಕೇಂದ್ರ, ಚಿಕಿತ್ಸಾಲಯ ಹಾಗೂ ಗವ್ಯೋತ್ಪನ್ನ ತಯಾರಿಕಾ ಘಟಕಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
ಕಸಾಯಿಖಾನೆ ಪಾಲಾಗುತ್ತಿದ್ದ ಗೋವುಗಳಿಗೆ ಗೋಸ್ವರ್ಗದಲ್ಲಿ ಆಶ್ರಯ: ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಗೋವುಗಳು ತಮಿಳುನಾಡಿನ ಆಡಿಜಾತ್ರೆಯಲ್ಲಿ ಕಸಾಯಿಖಾನೆ ಪಾಲಾಗುವ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರಮಠ ಮಧ್ಯಪ್ರವೇಶಿಸಿ ಸಾವಿರಕ್ಕೂ ಅಧಿಕ ಗೋವುಗಳನ್ನು ರೈತರಿಂದ ಖರೀದಿಸಿ, ಗೋವುಗಳನ್ನು ಸಂರಕ್ಷಿಸಿತ್ತು. ಕಟುಕರಿಂದ ಸಂರಕ್ಷಿಸಿದ ಈ ಗೋವುಗಳಿಗೂ ಭಾನ್ಕುಳಿಯ ಗೋಸ್ವರ್ಗದಲ್ಲಿ ಅವಕಾಶವನ್ನು ಕಲ್ಪಿಸಲಾಗಿದ್ದು, ಸ್ವರ್ಗ ಸದೃಶ ವ್ಯವಸ್ಥೆಯನ್ನು ಮಾಡಲಾಗಿದೆ.
ಭಾನುವಾರ ಶ್ರೀಭಾರತೀ ವಿದ್ಯಾಲಯದಲ್ಲಿ ನಡೆಯುವ ಸ್ವರ್ಗಸಂವಾದ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದು, ಗೋಸ್ವರ್ಗಕ್ಕೆ ಸೇವಾಕಾಣಿಕೆ ಸಲ್ಲಿಸಲು ಗೋಪ್ರೇಮಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸಮಸ್ತ ಗೋಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದ್ದು ಮಾಹಿತಿಗಾಗಿ 9900191186, 9448444446, 9448506897 ಸಂಪರ್ಕಿಸಬಹುದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications