ಸರಕಾರ, ಬಿಡಿಎ ಸೇರಿಕೊಂಡು ಬೆಂಗ್ಳೂರನ್ನು ಹಾಳು ಮಾಡ್ತಿವೆ: ಸುಪ್ರೀಂ
ಬೆಂಗಳೂರಿನಲ್ಲಿನ ಗೊಂದಲಕ್ಕೆ ಕರ್ನಾಟಕ ಸರಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಜವಾಬ್ದಾರಿ. ಡಾ.ಕೆ.ಶಿವರಾಂ ಕಾರಂತ ಬಡಾವಣೆಗೆ ಸ್ವಾಧೀನ ಪಡಿಸಿಕೊಳ್ಳಬೇಕು ಅಂತಿದ್ದ 650 ಎಕರೆ ಜಾಗವನ್ನು ಕೈ ಬಿಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
2008ರಲ್ಲಿ ಈ ಬಡಾವಣೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಿ, ಆ ನಂತರ ರಾಜಕೀಯ ಪ್ರಭಾವಿಗಳು ಅಥವಾ ಬೇರೆ ಯಾವುದೋ ಪ್ರಭಾವಕ್ಕೆ ದೊಡ್ಡ ಮಟ್ಟದ ಭೂ ಸ್ವಾಧೀನವನ್ನು ಕೈ ಬಿಡಲಾಗಿದೆ ಎಂಬ ಆರೋಪಕ್ಕೆ ಸುಪ್ರೀಂ ಕೋರ್ಟ್ ಪ್ರಬಲವಾಗಿ ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾ. ಅರುಣ್ ಮಿಶ್ರಾ, ಎಸ್. ಅಬ್ದುಲ್ ನಜೀರ್ ಅವರನ್ನು ಒಳಗೊಂಡ ಪೀಠವು ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾ. ಕೆ.ಎನ್.ಕೇಶವನಾರಾಯಣ ಅವರನ್ನು ನೇಮಿಸಿ, ಬಿಡಿಎ ಅಥವಾ ಸರಕಾರಿ ಅಧಿಕಾರಿಗಳಲ್ಲಿ ಯಾರು ಜವಾಬ್ದಾರರು ಎಂದು ನಿರ್ಧರಿಸುವುದಕ್ಕೆ ವಿಚಾರಣೆ ನಡೆಸಲು ತಿಳಿಸಿತ್ತು.

ಭೂಸ್ವಾಧೀನ ಮುಂದುವರಿಸಬೇಕು ಹಾಗೂ ಮೂರು ತಿಂಗಳ ಒಳಗಾಗಿ ಈ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸರಕಾರ ಮತ್ತು ಬಿಡಿಎಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಯೋಜನಾಬದ್ಧ ಹಾಗೂ ಸರಿಯಾದ ನಗರಕ್ಕೆ ಭೂ ಸ್ವಾಧೀನವು ಬಹಳ ಅಗತ್ಯ ಎಂದು ಸುಪ್ರೀಂ ತಿಳಿಸಿದೆ.
ಡಿಸೆಂಬರ್ 30,2008ರಲ್ಲಿ ಈ ಯೋಜನೆಗೆ ಚಾಲನೆ ದೊರೆತಿತ್ತು. 45% ಭೂಮಿ ರಸ್ತೆ, ಮೈದಾನದಂಥ ನಾಗರಿಕ ಸೌಲಭ್ಯಗಳಿಗಾಗಿ ಹಾಗೂ 55% ಸ್ಥಳ ವಸತಿ ನಿವೇಶನಗಳಿಗೆ ಎಂದು ತೀರ್ಮಾನಿಸಲಾಗಿತ್ತು. ಒಂದೋ ವಸತಿ ನಿವೇಶನ ಅಥವಾ ಪರಿಹಾರ ಎರಡರಲ್ಲಿ ಒಂದನ್ನು ರೈತರಿಗೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಪರಿಹಾರವಾಗಿ ನೀಡಲು ನಿರ್ಧರಿಸಲಾಗಿತ್ತು.
ಆದರೆ, ಆ ನಂತರ ಭೂ ಸ್ವಾಧೀನದಿಂದ ದೊಡ್ಡ ಪ್ರಮಾಣದ ಭೂಮಿಯನ್ನು ಕೈಬಿಡಲು ನಿರ್ಧರಿಸಲಾಯಿತು. ವಿಶೇಷ ಭೂಸ್ವಾಧೀನಾಧಿಕಾರಿಯೇ 498 ಎಕರೆ ಭೂಮಿಯನ್ನು ಕೈ ಬಿಡಲು ತೀರ್ಮಾನಿಸಿದ್ದು ವಿಧಾನಸಭೆಯಲ್ಲಿ ಹಾಗೂ ಸಾರ್ವಜನಿಕರಲ್ಲಿ ಹುಬ್ಬೇರುವಂತೆ ಮಾಡಿತ್ತು ಎಂದು ಪೀಠವು ಹೇಳಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications