ಪರಿಶಿಷ್ಟ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಭಾಗ್ಯ
ಬೆಂಗಳೂರು, ನವೆಂಬರ್ 02: ಸರ್ಕಾರವು ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ನೀಡಲು ನಿರ್ಧರಿಸಿದ್ದು, ಈ ಸಂಬಂಧ ಟೆಂಡರ್ ಕರೆಯಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ತಿಳಿಸಿದ್ದಾರೆ.
ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ಪದವಿ, ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಓದುತ್ತಿರುವ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲಾಗುವುದು ಎಂದ ಅವರು. ಪರಿಶಿಷ್ಟ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿ ವಿಶೇಷ ಘಟಕ ಯೋಜನೆಯಡಿ ಲ್ಯಾಪ್ಟಾಪ್ಗಳನ್ನು ವಿತರಿಸಲಾಗುವುದು. ಸಿಇಟಿ ಮೂಲಕ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೂ ಈ ಸೌಲಭ್ಯ ಪೂರ್ಣಪ್ರಮಾಣದಲ್ಲಿರುತ್ತದೆ ಎಂದರು.[ಅಕ್ಕ ಸಮ್ಮೇಳನ, ದಲಿತ ಕಲಾವಿದರ ಬಗ್ಗೆ ಸಚಿವ ಆಂಜನೇಯ]

ಪರಿಶಿಷ್ಟ ಸಮುದಾಯಗಳಿಗೆ ವಿಶೇಷ ಘಟಕ ಯೋಜನೆಯಡಿಯಲ್ಲಿ ಮೀಸಲಿರಿಸಿರುವ 19 ಸಾವಿರ ಕೋಟಿ ಹಣ ಸಂಪೂರ್ಣವಾಗಿ ಮಾರ್ಚ್ ವೇಳೆಗೆ ಖರ್ಚು ಮಾಡಲು ನಿರ್ಧರಿಸಲಾಗಿದೆ. ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಹಣವನ್ನು ಫಲಾನುಭವಿಗಳಿಗೆ ತಲುಪಿಸುವಂತೆ ಅಭಿವೃದ್ಧಿ ಕ್ರಿಯಾಯೋಜನೆ ರೂಪಿಸಲಾಗುವುದು ಎಂದರು.
ಶಿಕ್ಷಣ, ನಗರಾಭಿವೃದ್ಧಿ, ನೀರಾವರಿ, ಲೋಕೋಪಯೋಗಿ ಇಲಾಖೆ ಮುಂತಾದ ಇಲಾಖೆಗಳಿಗೆ ಕ್ರಿಯಾ ಯೋಜನೆ ರೂಪಿಸಿದ್ದು, ಅಂತೆಯೇ ಹಣ ಖರ್ಚು ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.[ಹಿಂದುಳಿದವರೆಗೆ ಆಂಜನೇಯ ಏನ್ ಮಾಡಿದಾರೆ? ಓದಿ]

ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಚಿಂತಿಸಿದ್ದು. ಯಾವ್ಯಾವ ಇಲಾಖೆಯಲ್ಲಿ ಭರ್ತಿಯಾಗಿಲ್ಲ ಎಂಬುದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಹಿಂದುಳಿದ ವರ್ಗಗಳ ಆಯೋಗ ಜಾತಿಗಣತಿ ಕುರಿತು ನಡೆಸಿರುವ ಸಮೀಕ್ಷಾ ವರದಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ತಿಂಗಳ ಕೊನೆಯಲ್ಲಿ ಪುನರ್ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬರುವ ಮಾರ್ಚ್ ವೇಳೆಗೆ ವರದಿಯನ್ನೂ ಪ್ರಕಟಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆಗೆ ಬಗ್ಗೆ ಜನಾರ್ಧನ ಪೂಜಾರಿ ಅವರು ಪದೇ ಪದೇ ಹೇಳುತ್ತಲೇ ಇದ್ದಾರೆ. ಹುದ್ದೆ ಖಾಲಿಯಿಲ್ಲವೆಂದು ನಾವೂ ಹೇಳುತ್ತಲೇ ಇದ್ದೇವೆ ಎಂದು ವ್ಯಂಗ್ಯವಾಡಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications