ಹಣ ಪಡೆದು ಲಸಿಕೆ ಹಾಕುತ್ತಿದ್ದ ಸರ್ಕಾರಿ ವೈದ್ಯೆ ಸೇರಿ ಇಬ್ಬರ ಬಂಧನ
ಬೆಂಗಳೂರು, ಮೇ 21: ಸರ್ಕಾರ ಜನರಿಗೆ ಉಚಿತವಾಗಿ ನೀಡಲೆಂದು ಒದಗಿಸಿರುವ ಲಸಿಕೆಗಳನ್ನು ಖಾಸಗಿ ಸ್ಥಳಗಳಲ್ಲಿ ಜನರಿಗೆ ಹಾಕಿ ವೈದ್ಯೆ ಸೇರಿ ಇಬ್ಬರು ಹಣ ಪಡೆಯುತ್ತಿ ಘಟನೆ ಅನ್ನಪೂರ್ಣೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ವೈದ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Recommended Video
ಬಂಧಿತರು ಮಂಜುನಾಥನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಪುಷ್ಪಿತಾ ಹಾಗೂ ಅನ್ನಪೂರ್ಣೇಶ್ವರಿನಗರದ ಐಟಿಐ ಲೇಔಟ್ ನಿವಾಸಿ ಪ್ರೇಮಾ.
ಈ ಬಗ್ಗೆ ಮಾಹಿತಿ ನೀಡಿರುವ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ, ವೈದ್ಯೆ ಹಾಗೂ ಪ್ರೇಮಾ ಇಬ್ಬರು ಸೇರಿ ಪ್ರೇಮಾಳ ನಿವಾಸದಲ್ಲೇ ಪ್ರತಿದಿನ ಸಂಜೆ 4 ಗಂಟೆಯಿಂದ ಲಸಿಕೆ ನೀಡುತ್ತಿದ್ದರು. ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸರ್ಕಾರದಿಂದ ಉಚಿತವಾಗಿ ಲಭಿಸುವ ಈ ಲಸಿಕೆಯಲ್ಲಿ ಕೆಲವು ಲಸಿಕೆಗಳನ್ನು ಇವರಿಬ್ಬರು ತಮ್ಮ ನಿವಾಸಕ್ಕೆ ತಂದು ಜನರಿಗೆ ಹಾಕುವುದಲ್ಲದೇ ಜನರಿಂದ 500 ರೂಪಾಯಿ ಪಡೆಯುತ್ತಿದ್ದರು. ನೆರೆಹೊರೆಯವರು ಬಂದು ಹಣ ನೀಡಿ ಲಸಿಕೆ ಹಾಕಿಸಿಕೊಳ್ಳುತ್ತಿದ್ದರು. ಈ ಬಗ್ಗೆ ನಮಗೆ ಮಾಹಿತಿ ಲಭಿಸಿದ ನಾವು ಕಾರ್ಯಚರಣೆ ಕೈಗೊಂಡೆವು ಎಂದು ಹೇಳಿದ್ದಾರೆ.

ಲಸಿಕೆ ಪಡೆಯುವ ಸಾರ್ವಜನಿಕರಂತೆ ಇನ್ಸ್ಪೆಕ್ಟರ್ ಲೋಹಿತ್ ನೇತೃತ್ವದ ತಂಡ ಪ್ರೇಮಾಳ ನಿವಾಸಕ್ಕೆ ತೆರಳಿದ್ದು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಈಗಾಗಲೇ ನೂರಾರು ಜನರಿಗೆ ಲಸಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ಕೂಡಾ ತಿಳಿಸಿದ್ದಾರೆ.
ಭಾರತದಲ್ಲಿ ಕೊರೊನಾ ಲಸಿಕಾ ಅಭಿಯಾನವು ಜನವರಿ 16 ರಿಂದ ಆರಂಭವಾಗಿದೆ. ಕರ್ನಾಟಕದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಚಾಲನೆ ನೀಡಲಾಗಿದ್ದರೂ ಲಸಿಕೆ ಕೊರತೆ ಹಿನ್ನೆಲೆ ಮೇ 22 ರಿಂದ ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದು, ಆನ್ಲೈನ್ ನೋಂದಣಿ ಕಡ್ಡಾಯವಾಗಿದೆ.
(ಒನ್ಇಂಡಿಯಾ ಸುದ್ದಿ)
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications