ಹಣ ಪಡೆದು ಲಸಿಕೆ ಹಾಕುತ್ತಿದ್ದ ಸರ್ಕಾರಿ ವೈದ್ಯೆ ಸೇರಿ ಇಬ್ಬರ ಬಂಧನ
ಬೆಂಗಳೂರು, ಮೇ 21: ಸರ್ಕಾರ ಜನರಿಗೆ ಉಚಿತವಾಗಿ ನೀಡಲೆಂದು ಒದಗಿಸಿರುವ ಲಸಿಕೆಗಳನ್ನು ಖಾಸಗಿ ಸ್ಥಳಗಳಲ್ಲಿ ಜನರಿಗೆ ಹಾಕಿ ವೈದ್ಯೆ ಸೇರಿ ಇಬ್ಬರು ಹಣ ಪಡೆಯುತ್ತಿ ಘಟನೆ ಅನ್ನಪೂರ್ಣೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ವೈದ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Recommended Video
ಬಂಧಿತರು ಮಂಜುನಾಥನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಪುಷ್ಪಿತಾ ಹಾಗೂ ಅನ್ನಪೂರ್ಣೇಶ್ವರಿನಗರದ ಐಟಿಐ ಲೇಔಟ್ ನಿವಾಸಿ ಪ್ರೇಮಾ.
ಈ ಬಗ್ಗೆ ಮಾಹಿತಿ ನೀಡಿರುವ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ, ವೈದ್ಯೆ ಹಾಗೂ ಪ್ರೇಮಾ ಇಬ್ಬರು ಸೇರಿ ಪ್ರೇಮಾಳ ನಿವಾಸದಲ್ಲೇ ಪ್ರತಿದಿನ ಸಂಜೆ 4 ಗಂಟೆಯಿಂದ ಲಸಿಕೆ ನೀಡುತ್ತಿದ್ದರು. ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸರ್ಕಾರದಿಂದ ಉಚಿತವಾಗಿ ಲಭಿಸುವ ಈ ಲಸಿಕೆಯಲ್ಲಿ ಕೆಲವು ಲಸಿಕೆಗಳನ್ನು ಇವರಿಬ್ಬರು ತಮ್ಮ ನಿವಾಸಕ್ಕೆ ತಂದು ಜನರಿಗೆ ಹಾಕುವುದಲ್ಲದೇ ಜನರಿಂದ 500 ರೂಪಾಯಿ ಪಡೆಯುತ್ತಿದ್ದರು. ನೆರೆಹೊರೆಯವರು ಬಂದು ಹಣ ನೀಡಿ ಲಸಿಕೆ ಹಾಕಿಸಿಕೊಳ್ಳುತ್ತಿದ್ದರು. ಈ ಬಗ್ಗೆ ನಮಗೆ ಮಾಹಿತಿ ಲಭಿಸಿದ ನಾವು ಕಾರ್ಯಚರಣೆ ಕೈಗೊಂಡೆವು ಎಂದು ಹೇಳಿದ್ದಾರೆ.

ಲಸಿಕೆ ಪಡೆಯುವ ಸಾರ್ವಜನಿಕರಂತೆ ಇನ್ಸ್ಪೆಕ್ಟರ್ ಲೋಹಿತ್ ನೇತೃತ್ವದ ತಂಡ ಪ್ರೇಮಾಳ ನಿವಾಸಕ್ಕೆ ತೆರಳಿದ್ದು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಈಗಾಗಲೇ ನೂರಾರು ಜನರಿಗೆ ಲಸಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ಕೂಡಾ ತಿಳಿಸಿದ್ದಾರೆ.
ಭಾರತದಲ್ಲಿ ಕೊರೊನಾ ಲಸಿಕಾ ಅಭಿಯಾನವು ಜನವರಿ 16 ರಿಂದ ಆರಂಭವಾಗಿದೆ. ಕರ್ನಾಟಕದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಚಾಲನೆ ನೀಡಲಾಗಿದ್ದರೂ ಲಸಿಕೆ ಕೊರತೆ ಹಿನ್ನೆಲೆ ಮೇ 22 ರಿಂದ ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದು, ಆನ್ಲೈನ್ ನೋಂದಣಿ ಕಡ್ಡಾಯವಾಗಿದೆ.
(ಒನ್ಇಂಡಿಯಾ ಸುದ್ದಿ)
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications