ಬೆಂಗಳೂರಲ್ಲಿ 'ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್', 495 ಎಕರೆ ಭೂ ಸ್ವಾಧೀನ ಅಪ್ಡೇಟ್ಸ್, ರೈತರಿಗೆ ಗುಡ್ನ್ಯೂಸ್
ಬೆಂಗಳೂರು, ಜೂನ್ 24: ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕಷ್ಟು ಕೈಗಾರಿಕೆ, ವಿವಿಧ ಉತ್ಪನ್ನ, ಉಪಕರಣಗಳ ತಯಾರಿಕೆ ಘಟಕೆ ಸ್ಥಾಪನೆಗೆ ಹೂಡಿಕೆ ಹರಿದು ಬರುತ್ತಿದೆ. ಇದೀಗ ಉದ್ದೇಶಿತ 'ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್' ಅಭಿವೃದ್ಧಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲ್ಲೂಕಿನ ಕೆಲವು ಗ್ರಾಮಸ್ಥರಿಗೆ ಕರ್ನಾಟಕ ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಗುಡ್ ನ್ಯೂಸ್ ನೀಡಿದ್ದಾರೆ.
ಇಂದು ಮಂಗಳವಾರ ವಿಧಾನಸೌದದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ದೇವನಹಳ್ಳಿ ಶಾಸಕರೂ ಆಗಿರುವ ಕೆ.ಎಚ್ ಮುನಿಯಪ್ಪ ಅವರ ಜತೆ ಮಹತ್ವದ ಸಭೆ ನಡೆಸಿದರು. ಈ ವೇಳೆ 'ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗಾಗಿ ಉದ್ದೇಶಿಸಿದ್ದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಜಮೀನನ್ನು ಸ್ವಾಧೀನ ಮಾಡದಿರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಅಷ್ಟೇ ಅಲ್ಲದೇ ಈ ಹೋಬಳಿಯಲ್ಲಿ ಇನ್ನು ಮುಂದೆ ಕೈಗಾರಿಕಾ ಉದ್ದೇಶಗಳಿಗೆ ಸರ್ಕಾರ ಯಾವುದೇ ಜಮೀನನ್ನು ವಶಪಡಿಸಿಕೊಳ್ಳದೆ ಇರಲು ನಿರ್ಧರಿಸಿದೆ. ಆದ್ದರಿಂದ ಭೂಸ್ವಾಧೀನ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮಾಹಿತಿ ನೀಡಿದರು.
ಭೂಸ್ವಾಧೀನಕ್ಕೆ 4 ವರ್ಷಗಳ ಹಿಂದೆ ಅಧಿಸೂಚನೆ
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಯೋಜನೆ, ಭೂಮಿ ಸ್ವಾಧಿನ ಬಗ್ಗೆ ವಿವರಿಸಿದರು. ಉದ್ದೇಶಿತ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ 2 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆ.27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಇದಾದ ಮೇಲೆ 2022ರ ಫೆ.15ರಂದು ಈ ಸಂಬಂಧ ಆದೇಶ ಹೊರಡಿಸಲಾಗಿತ್ತು.
ಆದರೆ ಹೋಬಳಿಯ ರೈತರು ಈಗಾಗಲೇ ಎರಡು ಬಾರಿ ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡಿದ್ದಾರೆ. ಜತೆಗೆ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ ಭೂಸ್ವಾಧೀನದಿಂದ ಈ ಹಳ್ಳಿಗಳ 231.23 ಎಕರೆ, 185.18 ಎಕರೆ ಮತ್ತು 78.21 ಎಕರೆಗೆ ಸ್ವಾಧೀನ ಪ್ರಕ್ರಿಯೆಯಿಂದ ವಿನಾಯಿತಿ ಕೊಡಲಾಗಿದೆ ಎಂದು ವಿವರಿಸಿದರು.
ಸರ್ಕಾರದಿಂದ 1,232 ಎಕರೆ ಭೂಸ್ವಾಧೀನ
ಉಳಿದ ಹತ್ತು ಗ್ರಾಮಗಳಾದ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆ ಬಚ್ಚೇನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮುದ್ದೇನಹಳ್ಳಿ ಮತ್ತು ಹಾಡ್ಯಾಳ ವ್ಯಾಪ್ತಿಯಲ್ಲಿನ 1,232 ಎಕರೆ ಭೂಸ್ವಾಧೀನ ನಡೆಯಲಿದೆ. ಅದರಲ್ಲೇನೂ ಬದಲಾವಣೆ ಇಲ್ಲ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಜಿಲ್ಲಾಧಿಕಾರಿ ಸೂಕ್ತ ಪರಿಹಾರ ಮೊತ್ತ ನಿಗದಿ ಪಡಿಸಲಿದ್ದಾರೆ. ಅಥವಾ ಸಂತ್ರಸ್ತ ರೈತರು ಆಸಕ್ತಿ ವ್ಯಕ್ತಪಡಿಸಿದರೆ 1 ಎಕರೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ 10,771 ಚದರ ಅಡಿ ಜಮೀನನ್ನು ಬೇಕಾದರೂ ಕೊಡಲು ಅವಕಾಶವಿದೆ. ಈ ಜಾಗವನ್ನು ರೈತರು ವಾಣಿಜ್ಯೋದ್ದೇಶಗಳಿಗಾಗಿ ಬಳಸಿಕೊಳ್ಳಬಹುದು.
ಪ್ರತಿಭಟನೆ ನಡೆಸುತ್ತಿದ್ದವರು ನಿರ್ದಿಷ್ಟವಾಗಿ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ಜಮೀನಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವಿಸ್ತೃತ ಸಭೆ ನಡೆಸಲಾಗಿತ್ತು. ರೈತರ ಕೋರಿಕೆಗೆ ಸರಕಾರ ಈಗ ಸ್ಪಂದಿಸಿದಂತಾಗಿದೆ. ಆದ್ದರಿಂದ ಇನ್ನು ಹೋರಾಟ ಬೇಡ. ನಮ್ಮಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಜೊತೆಜೊತೆಯಲ್ಲೇ ತೆಗೆದುಕೊಂಡು ಹೋಗಬೇಕಾಗಿದೆ. ನಾನು ಮತ್ತು ಮುನಿಯಪ್ಪ ಕೂಡ ರೈತ ಕುಟುಂಬಗಳಿಂದಲೇ ಬಂದವರು. ರೈತರ ನೋವು ನಮಗೆ ಅರ್ಥವಾಗುತ್ತದೆ ಎಂದರು. ಸಚಿವ ಮುನಿಯಪ್ಪ ಅವರು ಪ್ರತಿಭಟನೆ ಕೈ ಬಿಡುವಂತೆ ಆಗ್ರಹಿಸಿದರು.
ರಾಜ್ಯದಲ್ಲಿ ಎಲ್ಲಿಯೂ ಈ ರೀತಿ ಜಮೀನನ್ನು ಸ್ವಾಧೀನದಿಂದ ಕೈಬಿಟ್ಟ ನಿರ್ದಶನ ಇಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಅವರು ರೈತರ ಪರವಾದ ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಮನ್ನಿಸಿ ಪ್ರತಿಭಟನೆ ಕೈಬಿಡಬೇಕು ಎಂದು ತಿಳಿ ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications