ಶೀಘ್ರದಲ್ಲೇ ಸರ್ಕಾರಿ ವೈಮಾನಿಕ ಶಾಲೆ ಆರಂಭ: ಸಚಿವ ನಾರಾಯಣ ಗೌಡ
ಬೆಂಗಳೂರು, ಅಕ್ಟೋಬರ್ 01: ''ಶೀಘ್ರದಲ್ಲೇ ಸರ್ಕಾರಿ ವೈಮಾನಿಕ ಶಾಲೆ ಆರಂಭವಾಗಲಿದ್ದು, ಪೈಲಟ್ ಚಾಲನಾ ತರಬೇತಿ ಕೋರ್ಸ್ಗಾಗಿ ವಿದ್ಯಾರ್ಥಿಗಳು ದಾಖಲಾಗಿದ್ದಾರೆ, ಎಂದು ಕ್ರೀಡಾ ಮತ್ತು ಯುವಜನ ಸಬಲೀಕರಣ ಖಾತೆ ಸಚಿವ ಕೆ.ಸಿ ನಾರಾಯಣ ಗೌಡ ಹೇಳಿದ್ದಾರೆ.
Recommended Video
ಜಕ್ಕೂರು ವಾಯುನೆಲೆಯಲ್ಲಿ ಕಾಮಗಾರಿ ವೀಕ್ಷಿಸಿದ ಬಳಿಕ ಮಾತನಾಡಿ, ಒಂದು ವಾರದೊಳಗೆ ರನ್ವೇ ಕೆಲಸ ಮುಗಿಯಲಿದೆ. ನಂತರ ಅತಿಶೀಘ್ರದಲ್ಲಿ ಸರ್ಕಾರಿ ವೈಮಾನಿಕ ಶಾಲೆ ಆರಂಭವಾಗಲಿದೆ.
ಈಗಾಗಲೇ 34 ವಿದ್ಯಾರ್ಥಿಗಳು ವೈಮಾನಿಕ ಚಾಲನಾ ತರಬೇತಿ ಪಡೆಯಲು ಪ್ರವೇಶ ಪಡೆದಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶ ಪಡೆದು, ಉತ್ತಮ ಉದ್ಯೋಗ ಪಡೆದುಕೊಳ್ಳಲು ಇದು ಅವಕಾಶವಾಗಬೇಕು ಎಂದರು.

ರನ್ ವೇ ಮಾರ್ಗ, ವೈಮಾನಿಕ ಶಾಲೆ ಪುನರ್ ಆರಂಭ ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸುತ್ತೇವೆ ಎಂದು ಸಚಿವರು ಹೇಳಿದರು.
ಜಕ್ಕೂರು ವೈಮಾನಿಕ ತರಬೇತಿ ಶಾಲೆಯಲ್ಲಿ ಸದ್ಯ ಏಳು ಏರ್ ಕ್ರಾಫ್ಟ್ ಗಳಿವೆ. ಈ ಪೈಕಿ ಐದು ಕಾರ್ಯ ನಿರ್ವಹಿಸುತ್ತಿದ್ದು, ಹಾರಾಟ ನಡೆಸುತ್ತಿವೆ. ಈ ಐದು ವಿಮಾನಗಳಲ್ಲಿ ಮೂರು ಹಳೆ ಮಾದರಿ ಏರ್ ಕ್ರಾಫ್ಟ್ ಗಳಾಗಿದ್ದು, ಎರಡು ಹೊಸದಾಗಿ ಕೇಂದ್ರಕ್ಕೆ ಸೇರ್ಪಡೆಗೊಂಡಿವೆ.

ಮೂವರು ನುರಿತ ಪೈಲಟ್ ಗಳು ಮೊದಲ ಬ್ಯಾಚಿನ ವಿದ್ಯಾರ್ಥಿಗಳಿಗೆ ಸಿಮ್ಯುಲೇಷನ್, ಹಾರಾಟ ತರಬೇತಿ ನೀಡಲಿದ್ದಾರೆ. ವಾರ್ಷಿಕವಾಗಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ತರಬೇತಿ ಪಡೆದು ಪೈಲಟ್ ಗಳಾಗಿ ಈ ಕೇಂದ್ರದಿಂದ ಪಾಸಾಗಲಿದ್ದಾರೆ. ಈ ಮುಂಚೆ ಒಂದು ಬ್ಯಾಚಿನಲ್ಲಿ 40 ಮಂದಿಗೆ ಮಾತ್ರ ಅವಕಾಶ ಸಿಗುತ್ತಿತ್ತು.

ಸುಮಾರು 18 ತಿಂಗಳ ಅವಧಿಯ ಈ ಕೋರ್ಸ್ ಸೇರ್ಪಡೆಗೊಳ್ಳಲು ಬಯಸುವ ಕರ್ನಾಟಕದ ವಿದ್ಯಾರ್ಥಿಗಳಿಗೆ 37 ಲಕ್ಷ ರು ಶುಲ್ಕ ನಿಗದಿಯಾಗಿದೆ. ಹೊರ ರಾಜ್ಯದವರಿಗೆ 42 ಲಕ್ಷ ರು ನಿಗದಿಯಾಗಿದೆ. ಬಡತನದ ರೇಖೆಗಿಂತ ಕೆಳಗಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಹಾಗೂ ಮೀಸಲಾತಿಗೆ ಅರ್ಹರಾದ ಕುಟುಂಬದ ವಿದ್ಯಾರ್ಥಿಗಳಿಗೆ 10 ಲಕ್ಷ ರು ಶುಲ್ಕ ವಿಧಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಜಕ್ಕೂರ್ ಏರೊಡ್ರಮ್ ನಲ್ಲಿ ರನ್ ವೇ ಕಾಮಗಾರಿ ವೀಕ್ಷಿಸಿದ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ.@narayanagowdakc #JakkurAerodrome pic.twitter.com/jxG1igM4NK
— oneindiakannada (@OneindiaKannada) October 1, 2021
ಹೊಸ ರನ್ ವೇ 974 ಮೀಟರ್ ಉದ್ದವಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಾಣದ ಎಲಿವೇಟೆಡ್ ಕಾರಿಡಾರ್ ಯೋಜನೆಯಾಗಿ ರನ್ ವೇಗೆ ಮೀಸಲಾಗಿದ್ದ ಜಾಗವನ್ನು ಬಿಟ್ಟುಕೊಡಲಾಗಿತ್ತು. ಆದರೆ, ನಂತರ ಹೆಚ್ಚುವರಿ ಮೂರು ಎಕರೆ ಜಾಗವನ್ನು ಸ್ವಾಧೀನಪಡಿಸಿಕೊಂಡು ಮೂಲ ಪ್ರಸ್ತಾವಿತ ಯೋಜನೆಯಂತೆ ರನ್ ವೇ ನಿರ್ಮಿಸಲಾಗಿದೆ. ಪೂರ್ವ ಭಾಗದಲ್ಲಿ 10 ಎಕರೆ ವಿಸ್ತೀರ್ಣ ಭಾಗವನ್ನು ರನ್ ವೇ ಹೊಂದಿದ್ದು, ಹೆಚ್ಚುವರಿ 3 ಎಕರೆ ಕೂಡಾ ಸೇರ್ಪಡೆಯಾಗಲಿದೆ ಎಂದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications