ನೊಂದಣಿಯಾಗದ ಮದರಸ, ಮಠ, ಚರ್ಚ್ಗಳಿಗೆ ಶಾಕ್!
ಬೆಂಗಳೂರು, ಮಾರ್ಚ್ 20: ರಾಜ್ಯದ ಹಲವು ಭಾಗಗಳಲ್ಲಿ ಚರ್ಚುಗಳು, ಮಠಗಳು, ಮದರಸಗಳು ಮತ್ತು ಎನ್ಜಿಒಗಳು ಸರಿಯಾಗಿ ನೊಂದಣಿಯಾಗದೆಯೇ ಕಾರ್ಯನಿರ್ವಹಿಸುತ್ತಿವೆ. ಈ ಬಗ್ಗೆ ಆಗ್ಗಾಗೆ ದೂರುಗಳು ಕೂಡ ಕೇಳಿ ಬರುತ್ತಿವೆ. ಹೀಗಾಗಿ ಕ್ರಮ ಕೈಗೊಂಡಿರುವ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ, ನೊಂದಣಿಯಾಗದೆ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್, ಮಠ, ಎನ್ಜಿಓಗಳಿಗೂ ನೋಂದಣಿಗೆ ಗಡುವು ನೀಡಲಾಗಿದೆ. ನೊಂದಣಿ ಆಗದಿದ್ದರೇ ಇವುಗಳಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.

ನೊಂದಣಿಯಾಗದೇ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್ ಮಠ, ಎನ್ಜಿಓಗಳು ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ 2015 ಕಲಂ 41ರ ಅನ್ವಯ ಕಡ್ಡಾಯವಾಗಿ ಮುಂದಿನ ತಿಂಗಳ ಏಪ್ರಿಲ್ 20ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ಹೊರಡಿಸಿದ್ದಾರೆ.
ಆದೇಶದಲ್ಲಿ ಇರುವುದೇನು?
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲ್ಲೂಕು ವ್ಯಾಪ್ತಿಯಲ್ಲಿ ಯಾವುದೇ ಸ್ವಯಂ ಸೇವಾ ಸಂಸ್ಥೆಗಳು (NGO ) ಹಾಗೂ ಮಠಗಳು, ಮದರಸ ಹಾಗೂ ಚರ್ಚ್ಗಳಲ್ಲಿ ಮಕ್ಕಳನ್ನು ದಾಖಲಿಸಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ಸರ್ಕಾರದ ನೋಂದಣಿ ಇಲ್ಲದೇ ನಡೆಸುತ್ತಿದ್ದರೆ ಹಾಗೂ ಹೊಸ ಮಕ್ಕಳ ಪಾಲನಾ ಸಂಸ್ಥೆಯನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವವರು ಬಾಲನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015 ಕಲಂ 41 ರನ್ವಯ ಕಡ್ಡಾಯವಾಗಿ ಏಪ್ರಿಲ್ 20ರೊಳಗೆ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 27/17, 2ನೇ ಮಹಡಿ, ಅಕ್ಷಯ ಸ್ಟೇರ್, 80 ಅಡಿ ವರ್ತುಲ ರಸ್ತೆ, ಪಾಪರೆಡ್ಡಿಪಾಳ್ಯ, ನಾಗರಭಾವಿ-2 ನೇ ಹಂತ ಬೆಂಗಳೂರು ದಕ್ಷಿಣ (ಕೆಂಗೇರಿ) ಕಛೇರಿ ಇ-ಮೇಲ್ [email protected], ದೂರವಾಣಿ ಸಂಖ್ಯೆ 080-23442233, ಕಚೇರಿಯನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಂಗಳೂರು ನಗರ ಜಿಲ್ಲೆ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ











Click it and Unblock the Notifications