ಬೆಂಗಳೂರಿಗರೇ ಹುಷಾರ್!: ನಕಲಿ ಲೋಕಾಯುಕ್ತ ದಾಳಿಗೆ ಹೆದರಿ ಹಣ ಕಳೆದುಕೊಳ್ಳದಿರಿ
ಬೆಂಗಳೂರು ಮಾರ್ಚ್ 31: ಭ್ರಷ್ಟ ಅಧಿಕಾರಿಗಳು, ಭ್ರಷ್ಟ ರಾಜಕಾರಣಿಗಳು ಪಾಲಿಗೆ ಲೋಕಾಯುಕ್ತ ಸಂಸ್ಥೆ ಸಿಂಹಸ್ವಪ್ನವೇ ಸರಿ. ಆದರೆ ಅವರ ಹೆಸರನ್ನೇ ಬಳಸಿಕೊಂಡು ವಂಚನೆ ಮಾಡಿದ ಘಟನೆ ನಡೆದಿದೆ.
ನಕಲಿ ಲೋಕಾಯುಕ್ತ ದಾಳಿಗೆ ಹೆದರಿ ಸರ್ಕಾರಿ ಅಧಿಕಾರಿಯೊಬ್ಬರು 1 ಲಕ್ಷ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 3 ಸರಗಳ್ಳರನ್ನು ಬಂಧಿಸಲಾಗಿದೆ. ಎಪಿ ಮೂಲದ ನಾಗೇಶ್ವರ ರೆಡ್ಡಿ (33), ಬಾಚುಪಲ್ಲಿ ವಿನೀತ್ ಕುಮಾರ್ ರೆಡ್ಡಿ (22) ಮತ್ತು ಶಿವಕುಮಾರ್ ರೆಡ್ಡಿ (19) ಎಂದು ಆರೋಪಿಗಳನ್ನು ಗುರುತಿಸಲಾಗಿದೆ.

ಲೋಕಾಯುಕ್ತ ಅಧಿಕಾರಿಗಳೆಂದು ಬಿಂಬಿಸಿ ದಾಳಿ ವಿಫಲಗೊಳಿಸಲು ಅಧಿಕಾರಿಯೊಬ್ಬರಿಂದ 1 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಮೂವರನ್ನು ಬಂಧಿಸಲಾಗಿದೆ.
ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ನ ಅಧಿಕಾರಿಯೊಬ್ಬರು ಮಾರ್ಚ್ 20 ರಂದು ಲೋಕಾಯುಕ್ತರು ಅವರ ಮನೆ ಮೇಲೆ ದಾಳಿ ಮಾಡಲು ತಯಾರಿ ನಡೆಸುತ್ತಿದ್ದಾರೆ ಎಂದು ಕರೆ ಸ್ವೀಕರಿಸಿದರು. ಕರೆ ಮಾಡಿದ ವ್ಯಕ್ತಿ ತನ್ನನ್ನು ಅಶೋಕ್ ರಾವ್ ಎಂದು ಗುರುತಿಸಿಕೊಂಡಿದ್ದು, ಹಣ ಪಾವತಿಸಿದರೆ ದಾಳಿಯನ್ನು ತಡೆಯುವುದಾಗಿ ಹೇಳಿದ್ದಾನೆ.
ಅವಮಾನಕ್ಕೆ ಹೆದರಿದ ಅಧಿಕಾರಿ, ಆರೋಪಿಗಳು ಹಂಚಿಕೊಂಡ ಖಾತೆ ಸಂಖ್ಯೆಗೆ 1 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ. ಆದರೆ ಕರೆ ಸುಲಿಗೆ ಎಂದು ತಿಳಿದಾಗ ಅವರು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಇಂತಹ ಘಟನೆಗಳನ್ನು ಪೊಲೀಸರು ಬೇಧಿಸಿದ್ದಾರೆ.

ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಹೆದರಿಸಿ ವಸೂಲಿ
ಈ ಹಿಂದೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳನ್ನು ಹೆದರಿಸಿ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವಿಜಯನಗರ ಪೊಲೀಸರು ಬಂಧಿಸಿದ್ದರು.
ಪಟ್ಟೇಗಾರಪಾಳ್ಯದ ನಿವಾಸಿ ತ್ಯಾಗರಾಜು ಅಲಿಯಾಸ್ ಬಸವರಾಜು, ಅಲಿಯಾಸ್ ಚಂದ್ರಶೇಖರ (58) ಬಂಧಿತ ಆರೋಪಿ. ಈತನಿಂದ ಒಂದು ಸ್ಕೂಟಿ, ಮೊಬೈಲ್ ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕೊಪ್ಪಳದ ಆರ್ಟಿಓ ಇನ್ಸ್ಪೆಕ್ಟರ್ ಮೂರ್ತಿ ಎಂಬುವರಿಗೆ ಕರೆ ಮಾಡಿ 'ನಿನ್ನ ವಿರುದ್ಧ ದಾಳಿಗೆ ಸಿದ್ಧತೆ ಮಾಡಿದ್ದೇವೆ. 50 ಸಾವಿರ ರೂ. ಕೊಟ್ಟರೆ ದೊಡ್ಡ ಸಾಹೇಬ್ರ ಹತ್ತಿರ ಮಾತನಾಡಿ ಕಡತ ಕ್ಲೋಸ್ ಮಾಡಿಸುತ್ತೇನೆ' ಎಂದು ಚಂದ್ರಶೇಖರ್ ಹೆಸರಿನಲ್ಲಿ ಹೆದರಿಸಿದ್ದ.
ಈ ಬಗ್ಗೆ ಅನುಮಾನಗೊಂಡರೂ, ಆತ ಧರಿಸಿದ್ದ 'ಪೊಲೀಸ್ ಲೋಗೊ ಹೆಲ್ಮೆಟ್' ನೋಡಿ ಮುಂಗಡ 5 ಸಾವಿರ ರೂ. ಕೊಟ್ಟಿದ್ದಾರೆ. ಕಡತ ಕ್ಲೋಸ್ ಮಾಡಿದ ಬಳಿಕ ಉಳಿದ ಮೊತ್ತ ಕೊಡುವ ಬಗ್ಗೆ ಮಾತುಕತೆ ನಡೆದಿದೆ.

ಚಂದ್ರಶೇಖರ್ ಬಗ್ಗೆ ಲೋಕಾಯುಕ್ತ ಸಂಸ್ಥೆಯಲ್ಲಿ ವಿಚಾರಿಸಿದರೆ 'ಆ ಹೆಸರಿನವರು ಯಾರೂ ಇಲ್ಲ, ಎಂಬುದು ಖಚಿತವಾಗಿದೆ. ಆರ್ಟಿಓ ಇನ್ಸ್ಪೆಕ್ಟರ್ ಮೂರ್ತಿ ಈ ಕುರಿತು ವಿಜಯನಗರ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಆರೋಪಿಯ ಮೊಬೈಲ್ ವಿಳಾಸ ಮಾಹಿತಿ ಆಧರಿಸಿ ಮನೆಯಲ್ಲಿದ್ದ ತ್ಯಾಗರಾಜುನನ್ನು ಲೋಕಾಯುಕ್ತ ಪೊಲೀಸರು ಮತ್ತು ವಿಜಯನಗರ ಸಬ್ಇನ್ಸ್ಪೆಕ್ಟರ್ ಕೆ.ವೆಂಕಟೇಶ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ತ್ಯಾಗರಾಜು, ನಾನಾ ಹೆಸರಿನಲ್ಲಿ ಒಬ್ಬ ಅಧಿಕಾರಿಗೆ ಒಂದು ಸಲವಷ್ಟೇ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಕೊಡುವುದಾಗಿ ಹೇಳಿದವರಿಗಷ್ಟೇ ಎರಡನೇ ಬಾರಿ ಕರೆ ಮಾಡುತ್ತಿದ್ದ. ಕೊಡದಿದ್ದರೆ, ಎರಡನೆಯ ಬಾರಿ ಕರೆ ಮಾಡುತ್ತಿರಲಿಲ್ಲ. ಹೀಗಾಗಿ ಹಲವಾರು ವರ್ಷಗಳಿಂದ ಈ ವೃತ್ತಿ ಮಾಡಿಕೊಂಡು ಬಂದರೂ, ಈತನ ವಿರುದ್ಧ ಯಾರೂ ದೂರು ನೀಡಿರಲಿಲ್ಲ. ಕೊನೆಗೂ ಆತನ ಬಂಧನವಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಹಿಂದೆ ಇಂತಹದ್ದೇ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ವೇಷದಲ್ಲಿ ಬಂದಿದ್ದ ಇಬ್ಬರು ಐಡಿ ಕಾರ್ಡ್ ತೋರಿಸಿ ಎಂದಾಕ್ಷಣ ತಾಲೂಕು ಕಚೇರಿಯಿಂದ ಎಸ್ಕೇಪ್ ಆಗಿದ್ದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications