ಸಾಲದ ಬಗ್ಗೆ ಶ್ವೇತ ಪತ್ರ ಹೊರಡಿಸಿ: ಬಿಬಿಎಂಪಿಗೆ ಸರ್ಕಾರ ಆದೇಶ
ಬೆಂಗಳೂರು, ಫೆಬ್ರವರಿ 04: ಬಿಬಿಎಂಪಿಯ ಸಾಲದ ಬಗ್ಗೆ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾಲದ ಬಗ್ಗೆ ಶ್ವೇತ ಪತ್ರ ಹೊರಡಿಸಲು ಬಿಬಿಎಂಪಿ ಆಯುಕ್ತರಿಗೆ ಆದೇಶ ನೀಡಿದೆ.
ಬಿಬಿಎಂಪಿಯು ಸಾಲದಲ್ಲಿ ಸಿಲುಕಿರುವ ಬಗ್ಗೆ ಆಡಳಿತ ಪಕ್ಷ ಕಾಂಗ್ರೆಸ್-ಜೆಡಿಎಸ್ ಹಾಗೂ ವಿರೋಧ ಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದ್ದು, ಪರಸ್ಪರರು ಒಬ್ಬರ ಮೇಲೊಬ್ಬರು ಆರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದರು.
ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, 1989 ರಿಂದ ಈ ವರೆಗೆ ಬಿಬಿಎಂಪಿ ಪಡೆದಿರುವ ಸಾಲ, ತೀರಿಸಿರುವ ಸಾಲದ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರ್ಕಾರವು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ಗೆ ಆದೇಶ ನೀಡಿದೆ.

2010 ರಿಂದ 2015 ರವರೆಗೆ ಬಿಬಿಎಂಪಿಯು ಬಿಜೆಪಿ ಆಡಳಿತದಲ್ಲಿತ್ತು ಆಗ ನಗರದ ಪಾರಂಪರಿಕ ಕಟ್ಟಡಗಳನ್ನು ಟಡಮಾನ ಇಟ್ಟು ಸಾಲ ತರಲಾಗಿತ್ತು. ಆದರೆ ನಂತರ ಅದನ್ನು ನಮ್ಮ ಆಡಳಿತದ ಅವಧಿಯಲ್ಲಿ ಬಿಡಿಸಿಕೊಳ್ಳಲಾಗಿದೆ ಎಂದು ಕಾಂಗ್ರೆಸ್-ಜೆಡಿಎಸ್ ಹೇಳುತ್ತಿದೆ. ಇದನ್ನು ಬಿಜೆಪಿ ಒಪ್ಪುತ್ತಿಲ್ಲ.
ಕಾಂಗ್ರೆಸ್ ಅವಧಿಯಲ್ಲಿ ಮಾಡಿದ್ದ ಸಾಲವನ್ನು ತೀರಿಸುವ ಕಾರಣಕ್ಕೆ ನಾವು ಕಟ್ಟಡಗಳನ್ನು ಅಡಮಾನ ಇಡುವ ಪರಿಸ್ಥಿತಿ ಬಂತು ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ದೂರಿದ್ದಾರೆ. ಕೌನ್ಸಿಲ್ ಸಭೆಯಲ್ಲಿ ಸಹ ಈ ವಿಷಯ ಚರ್ಚೆ ನಡೆದು ಸಾಲಕ್ಕೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಲಿ ಎಂದು ಪದ್ಮನಾಭ ರೆಡ್ಡಿ ಸವಾಲೆಸೆದಿದ್ದರು. ಸುದ್ದಿಗೋಷ್ಠಿ ಸಹ ನಡೆಸಿ ಒತ್ತಡ ಹೇರಿದ್ದರು.
ಪದ್ಮನಾಭ ರೆಡ್ಡಿ ಸವಾಲು ಸ್ವೀಕರಿಸಿರುವ ಸರ್ಕಾರ ಶ್ವೇತಪತ್ರ ಹೊರಡಿಸಲು ಸೂಚಿಸಿದೆ. ನಗರಾಭಿವೃದ್ಧಿ ಇಲಾಖೆ ವತಿಯಿಂದ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ಗೆ ಆದೇಶ ನೀಡಲಾಗಿದ್ದು, ಶ್ವೇತಪತ್ರ ಹೊರಡಿಸಿದ ಬಳಿಕ ಬಿಬಿಎಂಪಿ ಸಾಲದ ಬಗ್ಗೆ ಪೂರ್ಣ ಮಾಹಿತಿ ದೊರೆಯಲಿದೆ ಮತ್ತು ಸಾಲಕ್ಕೆ ಕಾರಣ ಯಾರು ಎಂಬುದು ಸಹ ತಿಳಿಯಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications