ಬಸ್ ಪ್ರಯಾಣಿಕರಿಗೆ ಸರ್ಕಾರದ ಸಿಹಿ ಸುದ್ದಿ: ದರ ಇಳಿಕೆಗೆ ಚಿಂತನೆ
ಬೆಂಗಳೂರು, ನವೆಂಬರ್ 6: ಸಾರ್ವಜನಿಕ ಸಾರಿಗೆ ವಾಹನಗಳನ್ನು ಬಳಸುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಶೀಘ್ರದಲ್ಲಿಯೇ ಬಿಎಂಟಿಸಿ ಬಸ್ ಪ್ರಯಾಣದಲ್ಲಿ ದರದಲ್ಲಿ ಇಳಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಎಷ್ಟು ದರ ಇಳಿಕೆ ಮಾಡಬೇಕು ಎಂಬುದನ್ನು ಚರ್ಚಿಸಿ ನಿರ್ಧರಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಬುಧವಾರ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಜನಸಾಮಾನ್ಯರು ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸುವಂತೆ ಉತ್ತೇಜಿಸಲು ಮತ್ತು ಇದರಿಂದ ಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯದ ಪ್ರಮಾಣ ತಗ್ಗಿಸಲು ಬಸ್ ದರ ಇಳಿಕೆಗೆ ಉದ್ದೇಶಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಸದ್ಯ 6,500 ಬಿಎಂಟಿಸಿ ಬಸ್ಗಳು ಸಂಚರಿಸುತ್ತಿವೆ. ಇದಕ್ಕೆ 6,000 ಹೊಸ ಬಸ್ಗಳನ್ನು ಸೇರ್ಪಡೆಗೊಳಿಸಲಾಗುವುದು. ಆದರೆ ಹೊಸದಾಗಿ ಬಸ್ಗಳನ್ನು ಖರೀದಿಸಲು ಹೋಗುವುದಿಲ್ಲ. ಅಷ್ಟು ಹಣ ವಿನಿಯೋಗಿಸುವುದು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಹೀಗಾಗಿ ಬದಲಾಗಿ ಬಸ್ಗಳನ್ನು ಖಾಸಗಿಯವರಿಂದ ಹಂತ ಹಂತವಾಗಿ ಲೀಸ್ಗೆ ಪಡೆದುಕೊಳ್ಳಲಾಗುತ್ತದೆ. ಬಿಎಂಟಿಸಿ ಆರ್ಥಿಕ ಪುನಶ್ಚೇತನಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಎಲೆಕ್ಟ್ರಿಕ್ ಬಸ್ ಸೇವೆಯನ್ನು ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ. ಶೇ 50ರಷ್ಟು ಎಲೆಕ್ಟಿಕ್ ಬಸ್ಗಳ ಹೆಚ್ಚಳ ಮಾಡಲಾಗುತ್ತದೆ ಎಂದು ತಿಳಿಸಿದರು.

ಮೆಟ್ರೋ ಪ್ರಯಾಣ ದರ ಇಳಿಕೆ ಇಲ್ಲ
2023ರ ವೇಳೆಗೆ ಪೆರಿಫೆರಲ್ ವರ್ತುಲ ರಸ್ತೆಯನ್ನು ಪೂರ್ಣಗೊಳಿಸಲಾಗುತ್ತದೆ. 300 ಕಿಮೀ ವರೆಗೂ ರಸ್ತೆ ವಿಸ್ತರಣೆ ಮಾಡಲಾಗುತ್ತದೆ. ನಗರದಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುವ 12 ಕಾರಿಡಾರ್ಗಳನ್ನು ಗುರುತಿಸಲಾಗಿದೆ. ಮೆಟ್ರೋ ಮಾರ್ಗವನ್ನು ವೈಟ್ಫೀಲ್ಡ್ನಿಂದ ಹೊಸಕೋಟೆಯವರೆಗೂ ವಿಸ್ತರಣೆ ಮಾಡಲಾಗುತ್ತದೆ. ಮೆಟ್ರೋ ಪ್ರಯಾಣದರಲ್ಲಿ ಇಳಿಕೆ ಮಾಡುವುದು ಸಾಧ್ಯವಿಲ್ಲ. ಇದರಿಂದ ನಿರ್ವಹಣೆ ಕಷ್ಟವಾಗುತ್ತದೆ. ದೇಶದ ಎಲ್ಲ ಕಡೆಯೂ ಮೆಟ್ರೋ ದರ ಒಂದೇ ರೀತಿ ಇದೆ ಎಂದರು.

ಕೆರೆಗಳ ನಿರ್ವಹಣೆ ಬಿಬಿಎಂಪಿಗೆ
ಕೆರೆ ಮತ್ತು ರಾಜಕಾಲುವೆಗಳ ಒತ್ತುವರಿ ತೆರವಿಗೆ ಸರ್ಕಾರ ಬದ್ಧವಾಗಿದೆ. ಎಲ್ಲ ಕೆರೆಗಳ ನಿರ್ವಹಣೆಯ ಹೊಣೆಯನ್ನು ಬಿಬಿಎಂಪಿಗೆ ವಹಿಸಲಾಗುತ್ತದೆ ಎಂದು ಹೇಳಿದರು. ಈಗಾಗಲೇ ಕೆರೆ ಏರಿಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಅಲ್ಲಿ ಮನೆಗಳನ್ನು ಕಟ್ಟಿಕೊಂಡವರಿಗೆ ಬೇರೆ ಕಡೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಕಸ ವಿಲೆವಾರಿಗೆ ವೈಜ್ಞಾನಿಕ ಕ್ರಮ
ಬೆಂಗಳೂರು ಅಭಿವೃದ್ಧಿ ಕುರಿತು ಮೂರು ಗಂಟೆ ಚರ್ಚೆ ಮಾಡಲಾಗಿದೆ. ನಗರದ ಕಸ ವಿಲೆವಾರಿಗೆ ಕ್ರಮ ತೆಗೆದುಕೊಂಡಿದ್ದೇವೆ. ನಿತ್ಯ 2,500 ಮೆಟ್ರಿಕ್ ಟನ್ ಕಸ ವಿಲೇವಾರಿ ಆಗುತ್ತಿದೆ. ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅಗತ್ಯ ಎಂಜಿನಿಯರ್ ಮತ್ತು ಪೌರ ಕಾರ್ಮಿಕರನ್ನು ಕೂಡ ಹೆಚ್ಚುವರಿಯಾಗಿ ನೇಮಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಮೊಬಿಲಿಟಿ ಮ್ಯಾನೇಜ್ಮೆಂಟ್ ಅಥಾರಿಟಿ
ಡಿ. 15ರ ನಂತರ ಮತ್ತೆ ಸಭೆ ನಡೆಸಲಾಗುತ್ತದೆ. ಇಂದು ನಡೆದ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಅನುಷ್ಠಾನ, ನೀಡಲಾದ ಸಲಹೆ ಸೂಚನೆಗಳ ಪರಿಶೀಲನೆಗೆ ಕುರಿತು ಅಂದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಬೆಂಗಳೂರು ಮೊಬಿಲಿಟಿ ಮ್ಯಾನೇಜ್ಮೆಂಟ್ ಅಥಾರಿಟಿ ಸ್ಥಾಪನೆ ಮಾಡಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications