ಉಕ್ಕಿನ ಸೇತುವೆ: ತಡೆಯಾಜ್ಞೆಗೆ ಸರ್ಕಾರದ ಮೇಲ್ಮನವಿ
ಬೆಂಗಳೂರು, ನವೆಂಬರ್ 2- ಬಿಡಿಎ ವತಿಯಿಂದ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಮುಂದಾಗಿದ್ಧ ಸರ್ಕಾರ ಹಸಿರು ಪೀಠದ ತಡೆಯಾಜ್ಞೆಯಿಂದ ಅಮಾಧಾನಗೊಂಡಿದ್ದು ಈಗ ವಿಶೇಷ ಮೇಲ್ಮನವಿಯನ್ನು ಸಲ್ಲಿಸಲು ಮುಂದಾಗಿದೆ.
ರಾಜ್ಯ ಸರ್ಕಾರ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ವಲಯದ ಪೀಠವು ನಾಲ್ಕು ವಾರಗಳ ಮಧ್ಯಂತರ ತಡೆಯಾಜ್ಞೆ ನೀಡಿರುವುದನ್ನು ತೆರವು ಕೋರಿ ಇಂದು ಅಥವಾ ನಾಳೆ ಅರ್ಜಿ ಸಲ್ಲಿಸಲಿದೆ.
ಪರಿಸರ ನಾಶದ ಕಾರಣ ನೀಡಿ ಯೋಜನೆಯನ್ನು ನಿಲ್ಲಿಸುವ ಸಿಟಿಜನ್ ಫೋರಂನ ನೀಲಯ್ಯ ಹಾಗೂ ಸರ್ಕಾರದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಸುಬ್ರಮಣಿಯನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಸ್.ನಂಬಿಯಾರ್ ಹಾಗೂ ತಜ್ಞ ಸದಸ್ಯ ಪಿ.ಎಸ್.ರಾವ್ ಅವರನ್ನೊಳಗೊಂಡ ಪೀಠವು ತಡೆಯಾಜ್ಞೆಯ ಆದೇಶ ನೀಡಿತ್ತು. ಪರಿಸರದ ಮೇಲಾಗುವ ಪರಿಣಾಮಗಳ ಬಗೆಗಿನ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿ ವಿಚಾರಣೆಯನ್ನು ನ.25ಕ್ಕೆ ಮುಂದೂಡಲಾಗಿತ್ತು.[ಬೆಂಗಳೂರು: ಉಕ್ಕಿನ ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ ತಡೆ!]

ಬಸವೇಶ್ವರ ವೃತ್ತದಿಂದ ಹೆಬ್ಬಾಳವರೆಗೆ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ 1,900 ಕೋಟಿ ವೆಚ್ಚದಲ್ಲಿ 6.72 ಕಿ.ಮೀ. ಉದ್ದದ ಷಟ್ಪಥದ ಉಕ್ಕಿನ ಸೇತುವೆ ನಿರ್ಮಿಸಲು ಬಿಡಿಎ ಕಾರ್ಯ ರೂಪಿಸಿತ್ತು. ಸೇತುವೆಯಿಂದ 800ಕ್ಕೂ ಹೆಚ್ಚು ಮರಗಳು ಬಲಿಯಾಗಲಿವೆ ಎಂದು ಅರಿತ ಪರಿಸರವಾದಿಗಳು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಯೋಜನೆಯಿಂದ ಸಾರ್ವಜನಿಕರಿಗೆ ಹೇಗೆ ಅನುಕೂಲವಾಗುತ್ತದೆ ಎಂಬುದನ್ನು ಮತ್ತು ಮಾಲಿನ್ಯ ನಿಯಂತ್ರಕ್ಕೆ ಕ್ರಮ ಕೈಗೊಂಡಿರುವ ಕ್ರಮಗಳ ಬಗ್ಗೆ ಹಸಿರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಡಲು ಮುಂದಾಗಿದೆ.[ಏನಿದು ಉಕ್ಕಿನ ಮೇಲ್ಸೇತುವೆ ಯೋಜನೆ? ಏಕೆ ವಿರೋಧ?]
ಸೇತುವೆಗಾಗಿ ಎಲ್ ಅಂಡ್ ಟಿ ಸಂಸ್ಥೆಗೆ ಯೋಜನೆಗೆ ಗುತ್ತಿಗೆ ಸಹ ನೀಡಿತ್ತು. ಮೊದಲಿಗೆ ಬಸವೇಶ್ವರ ವೃತ್ತದಿಂದ ಹೆಬ್ಟಾಳದವರೆಗೆ 6.7 ಕಿ.ಮೀ.,ನಂತರ ಅದನ್ನು ಯಲಹಂಕ ಕಡೆ ಸಾಗುವ ಮಾರ್ಗದಲ್ಲಿ ಕೊಲಂಬಿಯಾ ಏಷ್ಯಾ ಆಸ್ಪತ್ರೆವರೆಗೂ ವಿಸ್ತರಿಸಲು ಯೋಜನೆ ರೂಪಿಸಲಾಗಿತ್ತು. ಅದಕ್ಕೆ ಇದೇ ನವೆಂಬರ್ ೧ ರಂದು ಗುದ್ದಲಿ ಪೂಜೆ ನೆರವೇರಿಸಲು ಮುಂದಾಗಿದ್ದರು. ಈ ಕಾರ್ಯಕ್ಕೆ ತಜೆಯಾಜ್ಞೆಯು ತಣ್ಣಿರೆಚಿದಂತಾಗಿದೆ.
ಒಟ್ಟು ಸೇತುವೆ ನಿರ್ಮಾಣಕ್ಕೆ 2500 ಕೋಟಿ ವರೆಗೆ ಆಯವ್ಯಯ ಅಂದಾಜಿಸಲಾಗಿತ್ತು. ಆದರೆ ಪರಿಸರ ನಾಶ ಮತ್ತು ಉಕ್ಕಿನ ಯೋಜನೆಗೆ ತಗುಲುವ ಭಾರಿ ಪ್ರಮಾಣದ ನಷ್ಟವನ್ನು ಅರಿತ ನಾಗರೀಕರು ಇದನ್ನು ವಿರೋಧಿಸುತ್ತಿದ್ದು, ಇದುವರೆಗೂ ಜನರ ವಿರುದ್ಧವಾಗಿಯೇ ನಡೆದಿರುವ ಸರ್ಕಾರ ಮುಂದೆಯೂ ಯಾವ ದಾರಿ ಸಾಗಲಿದೆ ನೋಡಬೇಕು.
ಪರಿಸರ ಮಾರ್ಗವಾದರೆ ಎಲ್ಲರಿಗೂ ಹಿತ ಎಂಬುದು ಚಿಂತಕರ ಮಾತು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications