ಸಲಾರ್ ಪುರಿಯಾ ಸಂಸ್ಥೆ ಕಟ್ಟಡ ವಶಕ್ಕೆ ಪಡೆದ ಸರ್ಕಾರ
ಬೆಂಗಳೂರು, ಜುಲೈ 22: ಬೆಂಗಳೂರು ಕ್ಲಬ್ ವಶಕ್ಕೆ ಪಡೆಯುವ ಸನ್ನಾಹದಲ್ಲಿರುವ ಸರ್ಕಾರ ಇನ್ನೊಂದೆಡೆ ಪ್ರತಿಷ್ಠಿತ ಬಡಾವಣೆ ಕೋರಮಂಗಲದಲ್ಲಿ ಅಕ್ರಮವಾಗಿ ನಿರ್ಮಿಸಿದ ಬಹುಮಹಡಿ ಕಟ್ಟಡವನ್ನು ಬುಧವಾರ ತನ್ನ ವಶಕ್ಕೆ ಪಡೆದುಕೊಂಡಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸರ್ವೆ ನಂಬರ್ 149ರಲ್ಲಿ ಸರ್ಕಾರಿ ಖರಾಬು ಜಮೀನಿನಲ್ಲಿ ನಿರ್ಮಿಸಲಾಗಿದ್ದ ಸಲಾರ್ ಪುರಿಯಾ ಪ್ರೈ.ಲಿ. ಸಂಸ್ಥೆಗೆ ಸೇರಿದ ಬಹುಮಹಡಿ ಕಟ್ಟಡವನ್ನು ವಶಕ್ಕೆ ಪಡೆಯಲಾಯಿತು. ಸುಮಾರು 2.2 ಎಕರೆ ಜಮೀನನ್ನು ಅಕ್ರಮವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಮಾರಾಟ ಮಾಡಲಾಗಿತ್ತು. ಇದನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಅವರು ಹೇಳಿದ್ದಾರೆ. [ಬೆಂಗಳೂರು ಕ್ಲಬ್ ನಿಂದ ಕರ್ನಾಟಕ ಸರ್ಕಾರಕ್ಕೆ ಸವಾಲ್]

ಸಲಾರ್ ಪುರಿಯಾ ಸಂಸ್ಥೆಗೆ 15 ದಿನಗಳ ಹಿಂದೆ ಈ ಬಗ್ಗೆ ನೋಟಿಸ್ ನೀಡಲಾಗಿತ್ತು. ಅದರೆ, ನೋಟಿಸ್ ಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಸದನ ಸಮಿತಿ ನಿರ್ದೇಶನದ ಮೇರೆಗೆ ಬೆಂಗಳೂರು ಕ್ಲಬ್ ಜಾಗವನ್ನು ವಶಕ್ಕೆ ಪಡೆಯುವಂತೆ ಇಲ್ಲೂ ಕೂಡಾ ಕಂದಾಯ ಇಲಾಖೆ ಅಧಿಕಾರಿಗಳ ನೆರವಿನಿಂದ ಅಕ್ರಮ ಕಟ್ಟಡವನ್ನು ಸರ್ಕಾರಕ್ಕೆ ಸೇರಿಸಲಾಗಿದೆ.
ಬೆಂಗಳೂರು ದಕ್ಷಿಣ ಭೂನ್ಯಾಯಮಂಡಳಿಗೆ ಯಲ್ಲಪ್ಪ ರೆಡ್ಡಿ, ಕೃಷ್ಣ ಐಯ್ಯಂಗಾರ್, ಲಕ್ಷ್ಮಣ್ ರಾವ್ ಹಾಗೂ ಮುನಿಸ್ವಾಮಿ ಶೆಟ್ಟಿ ಎಂಬುವವರು ದೂರು ಸಲ್ಲಿಸಿ ಈ ಜಾಗ ತಮಗೆ ಸೇರಿದ್ದು ಎಂದು ವಾದಿಸಿದ್ದರು. ಅದರೆ, 2007ರಲ್ಲೇ ಇದು ಸರ್ಕಾರಿ ಜಮೀನು ಎಂದು ತೀರ್ಪು ಹೊರಬಂದಿತ್ತು. ಅರ್ಜಿದಾರರಲ್ಲಿ ಒಬ್ಬರಾದ ಮುನಿಸ್ವಾಮಿ ಶೆಟ್ಟಿ ಅವರು ಸಲರ್ ಪೂರಿಯಾ ಸಂಸ್ಥೆಗೆ ಈ ವಿವಾದಿತ ಜಮೀನನ್ನು ಮಾರಾಟ ಮಾಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications