ಬಡ್ತಿ ಮೀಸಲಾತಿ: ಮತ್ತೆ 3 ತಿಂಗಳ ಸಮಯ ಕೇಳಿದ ಸರ್ಕಾರ
ಬೆಂಗಳೂರು, ಜನವರಿ 16: ಎಸ್ಸಿ ಎಸ್ಟಿ ಬಡ್ತಿ ಮೀಸಲಾತಿ ಬಗ್ಗೆ ಎಲ್ಲಾ ಇಲಾಖೆಗಳಲ್ಲಿ ಜೇಷ್ಠತಾ ಪಟ್ಟಿ ಸಿದ್ಧವಾಗಿದೆ. ಶೀಘ್ರದಲ್ಲೇ ಜೇಷ್ಠತಾ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆ ಪಟ್ಟಿಯನ್ನು ಸುಪ್ರೀಂಕೋರ್ಟ್ಗೆ ಕಳುಹಿಸಲಾಗಿದೆ. ಹೀಗಾಗಿ ವಕೀಲರ ಮೂಲಕ ನಾವು ಕಾಲಾವಕಾಶ ಕೋರಿದ್ದೇವೆ. ಶೀಘ್ರದಲ್ಲೇ ಜೇಷ್ಠತಾ ಪಟ್ಟಿ ಸಲ್ಲಿಕೆ ಮಾಡಲಿದದ್ಏವೆ. ಪಟ್ಟಿ ಸಲ್ಲಿಸಲು ಸೋಮವಾರ ಕೊನೆಯ ದಿನಾಂಕವಾಗಿತ್ತು ಎಂದರು.
ರಾಜ್ಯ ಸರ್ಕಾರದ ಪರಿಶಿಷ್ಟ ನೌಕಕರಿಗೆ ನೀಡಿರುವ ಬಡ್ತಿ ಮೀಸಲಾತಿಯನ್ನು ರದ್ದುಪಡಿಸಿ ಮರು ಜೇಷ್ಠತಾ ಪಟ್ಟಿ ಸಿದ್ಧಪಡಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಗಡುವು ಸೋಮವಾರಕ್ಕೆ ಅಂತ್ಯವಾಗಿದೆ. ನ್ಯಾಯಾಲಯದ ಎದುರು ಪ್ರಮಾಣ ಪತ್ರ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕರ್ನಾಟಕ ಸರ್ಕಾರದಲ್ಲಿ 22 ಸಾವಿರಕ್ಕೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೌಕರರು ಕೆಲಸ ನಿರ್ವಹಿಸುತ್ತಿದ್ದು, ಮತ್ತು ಬಿ ದರ್ಜೆ ಹುದ್ದೆಗಳಲ್ಲಿ ಬಡ್ತಿ ನೀಡುವ ಕುರಿತಂತೆ ಕಳೆದ 20 ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ನಿಯಮವನ್ನು ಸುಪ್ರೀಂಕೋರ್ಟ್ ಕಳೆದ ಫೆಬ್ರವರಿಯಲ್ಲಿ ರದ್ದುಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯೊಂದನ್ನು ಅಂಗೀಕರಿಸಿದ್ದು, ರಾಷ್ಟ್ರಪತಿಗಳ ಬಳಿ ಕಳಿಸಿದೆ.
ರಾಷ್ಟ್ರಪತಿಗಳ ಅಂಕಿತ ಆಗುವವರೆಗೆ ವಿವಾದ ಇತ್ಯರ್ಥ ಆಗುವುದು ಕಾನೂನಿನ ತೊಡಕಿಗೆ ಕಾರಣವಾಗಲಿದೆ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ಮೂರು ತಿಂಗಳು ಕಾಲಾವಕಾಶ ಕೇಳಿದೆ. ಈ ಮಧಗಯೆ ೨೦ಕ್ಕೂ ಹೆಚ್ಚು ಇಲಾಖೆಗಳ ಬಡ್ತಿ ಪುನರ್ ಪರಿಶೀಲನಾ ಪಟ್ಟಿಯನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿದ್ದರೂ ಇನ್ನು ಸುಮಾರು 60 ಇಲಾಖೆಗಳ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿಲ್ಲ.
ಹೀಗಾಗಿ ರಾಷ್ಟ್ರಪತಿಗಳ ಮುಂದಿರುವ ಮಸೂದೆ ಬಾಕಿ ಇರುವ ನೆಪ ಇಟ್ಟುಕೊಂಡು ರಾಜ್ಯ ಸರ್ಕಾರ ಮತ್ತೆ ಮೂರು ತಿಂಗಳ ಕಾಲಾವಕಾಶ ಕೇಳಿದೆ, ಹೀಗಾಗಿ ರಾಜ್ಯ ಸರ್ಕಾರದ ಬಡ್ತಿ ಮೀಸಲಾತಿ ವಿವಾದ ಮತ್ತಷ್ಟು ಕಗ್ಗಂಟಾಗಿ ಮುಂದುವರೆದಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications