ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ತಡೆಯಲು ಎಟಿಎಂಗಳ ಸುರಕ್ಷತೆ ಬಗ್ಗೆ ಗಮನ ಕೊಡಿ

|
Google Oneindia Kannada News

ಜಗತ್ತಿನಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ಸೋಂಕು ಹರಡುವಿಕೆಯನ್ನು ತಡೆಯಲು ಎಲ್ಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಆದರೆ, ದಿನನಿತ್ಯ ಹೆಚ್ಚು ಜನರ ಬಳಸುವ ಎಟಿಎಂಗಳಲ್ಲಿ ಈ ಬಗ್ಗೆ ಯಾವುದೇ ಮುಂಜಾಗ್ರತೆ ಕಂಡು ಬಂದಿಲ್ಲ ಎಂಬ ವಿಷಯ ಗಮನಿಸಬೇಕಾಗಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಕೊರೊನಾ; ಆರೋಗ್ಯ ಇಲಾಖೆ, ವೈದ್ಯಕೀಯ ಇಲಾಖೆ ಒಂದೊಂದು ದಿಕ್ಕು!ಕೊರೊನಾ; ಆರೋಗ್ಯ ಇಲಾಖೆ, ವೈದ್ಯಕೀಯ ಇಲಾಖೆ ಒಂದೊಂದು ದಿಕ್ಕು!

'ರಾಜ್ಯದ ಯಾವುದೇ ಎಟಿಎಮ್ ನಲ್ಲೂ ಇಲ್ಲ ಸುರಕ್ಷೆ. ದಿನನಿತ್ಯ ಹಣ ಡ್ರಾ ಮಾಡಲು ನೂರಾರು ಗ್ರಾಹಕರು ಎಟಿಎಮ್ ಗಳಿಗೆ ಬರ್ತಾರೆ. ಕೊರೋನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮ ತಕ್ಷಣವೇ ತೆಗೆದುಕೊಳ್ಳಬೇಕು. ಪ್ರತಿ ಎಟಿಎಂ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯವಾಗಿ ಇಡಲು ತುರ್ತು ಕ್ರಮ ಕೈಗೊಳ್ಳ ಬೇಕು' ಎಂದು ತಿಳಿಸಿದ್ದಾರೆ.

Government Should Take Action For Safety In ATM

'ದುರಾದೃಷ್ಟವಶಾತ್ ಕೊರೊನಾ ಸೋಂಕಿತರು ಹಣ ಡ್ರಾ ಮಾಡಿದರೆ ಅಮಾಯಕರು ಕರೋನಾಕೆ ಬಲಿ ಆಗುವ ಸಾಧ್ಯತೆಗಳಿವೆ. ಎಲ್ಲ ಬ್ಯಾಂಕ್ ಗಳು ತುರ್ತಾಗಿ ಎಟಿಎಂಗಳಲ್ಲಿ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು' ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ವೈದ್ಯನ ವಾರ್ನಿಂಗ್: ಯು.ಎಸ್.ಎ ಗೆ ಕಾದಿದೆ ದೊಡ್ಡ ಆಪತ್ತು!ವೈದ್ಯನ ವಾರ್ನಿಂಗ್: ಯು.ಎಸ್.ಎ ಗೆ ಕಾದಿದೆ ದೊಡ್ಡ ಆಪತ್ತು!

ಹಾಗ್ನೋಡಿದ್ರೆ, ಕುಮಾರಸ್ವಾಮಿ ಅವರ ಹೇಳಿರುವ ಅಂಶ ನಿಜಾ ಎನಿಸುತ್ತೆ. ಕೊರೊನಾ ಸೋಂಕಿತರು ಎಟಿಎಂನಲ್ಲಿ ಹಣ ಡ್ರಾ ಮಾಡಿದ ಬಳಿಕ, ಸಾಮಾನ್ಯ ವ್ಯಕ್ತಿಗಳು ಹಣ ಮಾಡಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಈ ಬಗ್ಗೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾದ ಅವಶ್ಯಕತೆ ಇದೆ.

English summary
Karnataka Ex Cm Kumaraswamy has suggested that government should take action for safety in ATMs to avoid coronavirus spread.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X