ಪಶ್ನೆ ಪತ್ರಿಕೆ ಸೋರಿಕೆ ತಡೆಗೆ ಖಜಾನೆಯೇ ಬದಲಾವಣೆ !
ಬೆಂಗಳೂರು, ಜನವರಿ 9: ಎಸ್ಸೆಸ್ಸೆಲ್ಸಿ , ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ರಾಜ್ಯ ಸರಕಾರ ಮಾಸ್ಟ್ರರ್ ಪ್ಲಾನ್ ಮಾಡಿದ್ದು, ಈ ಬಾರಿ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಗಳಿಂದಲೇ ಜಿಲ್ಲಾವಾರು ಪರೀಕ್ಷಾ ಕೇಂದ್ರಗಳಿಗೆ ರವಾನಿಸುವ ನಿರ್ಧಾರ ಮಾಡಿದೆ.
ಪ್ರಶ್ನೆ ಪತ್ರಿಕೆಗಳನ್ನು ಇದುವರೆಗೂ ತಾಲ್ಲೂಕು ಕೇಂದ್ರಗಳಿಂದ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗುತ್ತಿತ್ತು. ಹಿಂದೆ ದ್ವಿತೀಯ ಪಿಯುಸಿ ವಾರ್ಷಿಕರ ಪರೀಕ್ಷೆ ರಸಾಯನ ಶಾಸ್ತ್ರ ಪತ್ರಿಕೆ ಎರಡು ಬಾರಿ ಸೋರಿಕೆಯಾಗಿದ್ದು ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಹೀಗಾಗಿ ಈ ವರ್ಷದಿಂದ ಜಿಲ್ಲಾ ಖಜಾನೆಗಳಿಂದಲೇ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ರವಾನೆ ಮಾಡಲು ನಿರ್ಧರಿಸಲಾಗಿದೆ.[ಪಶ್ನೆ ಪತ್ರಿಕೆ ಸೋರಿಕೆ : ಬಿಬಿಎಂಪಿ ಮಾಜಿ ಸದಸ್ಯ ಬಂಧನ]

ಭದ್ರತೆ ದೃಷ್ಟಿಯಿಂದ ತಾಲ್ಲೂಕು ಖಜಾನೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಇಡದೆ ಇರಲು ನಿರ್ಧರಿಸಲಾಗಿದ್ದು, ಜಿಲ್ಲಾ ಖಜಾನೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸರಕಾರ ಮುಂದಾಗಿದೆ ಜೊತೆಗೆ ಪೊಲೀಸ್ ಭದ್ರತೆಯೂ ಇರಲಿದೆ.[ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ, ಇಬ್ಬರು ಆರೋಪಿಗಳಿಗೆ ಜಾಮೀನು]
ಜಿಲ್ಲಾ ಖಜಾನೆಗಳಿಂದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪತ್ರಿಕೆಗಳನ್ನು ರವಾನೆ ಮಾಡಲು ಮುಂದಾಗಿರುವುದು ಭದ್ರತೆ ದೃಷ್ಟಿಯಿಂದ ಸೂಕ್ತವೆನಿಸಿದರೂ ಖಜಾನೆ ಕೇಂದ್ರದಿಂದ ವ್ಯಾಪ್ತಿಯಲ್ಲಿ ದೂರ ಇರುವ ಮತ್ತು ರಾಜ್ಯ ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಯನ್ನು ಹೇಗೆ ರವಾನಿಸಲು ಸಾಧ್ಯ ಎಂಬುದು ವಿದ್ಯಾರ್ಥಿಗಳ ಪೋಷಕರ ಪ್ರಶ್ನೆಯಾಗಿದೆ.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications